ಪಾಕ್ ನಲ್ಲಿ 40 ಉಗ್ರ ಸಂಘಟನೆಗಳಿವೆ; ಅಮೆರಿಕದಲ್ಲಿ ಸತ್ಯ ಒಪ್ಪಿಕೊಂಡ ಇಮ್ರಾನ್ ಖಾನ್!


Team Udayavani, Jul 24, 2019, 1:37 PM IST

Khan-Imran

ವಾಷಿಂಗ್ಟನ್: ಕಳೆದ 15 ವರ್ಷಗಳ ಕಾಲ ಪಾಕಿಸ್ತಾನದಲ್ಲಿ ಯಶಸ್ವಿಯಾಗಿ ಆಡಳಿತ ನಡೆಸಿದ ಯಾವ ಸರ್ಕಾರವೂ ಅಮೆರಿಕಕ್ಕೆ ಉಗ್ರರಿಗೆ ಸಂಬಂಧಿಸಿದ ಸತ್ಯವನ್ನೇ ಹೇಳಿರಲಿಲ್ಲವಾಗಿತ್ತು ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದು, ಪ್ರಸ್ತುತ ಪಾಕಿಸ್ತಾನದಲ್ಲಿ 40 ವಿವಿಧ ಭಯೋತ್ಪಾದಕ ಸಂಘಟನೆಗಳಿವೆ ಎಂಬುದಾಗಿ ಒಪ್ಪಿಕೊಂಡಿದ್ದಾರೆ!

ಭಯೋತ್ಪಾದನೆ ವಿರುದ್ಧದ ಅಮೆರಿಕದ ಹೋರಾಟದ ಜತೆಗೆ ನಾವಿದ್ದೇವೆ. 9/11 ದಾಳಿಗೆ ಸಂಬಂಧಿಸಿದಂತೆಯೂ ಪಾಕಿಸ್ತಾನ ಏನೂ ಕ್ರಮ ಕೈಗೊಂಡಿಲ್ಲವಾಗಿತ್ತು. ಅಲ್ ಖೈದಾ ಅಫ್ಘಾನಿಸ್ತಾನದಲ್ಲಿ ಕಾರ್ಯಾಚರಿಸುತ್ತಿದೆ. ಪಾಕಿಸ್ತಾನದಲ್ಲಿ ತಾಲಿಬಾನ್ ಉಗ್ರರು ಇಲ್ಲ ಎಂದು ಖಾನ್ ವಿವರಿಸಿದ್ದಾರೆ.

ಆದರೆ ನಾವು ಅಮೆರಿಕದ ಹೋರಾಟದಲ್ಲಿ ನಾವು ಕೈಜೋಡಿಸುತ್ತೇವೆ. ದುರದೃಷ್ಟ ಎಂಬಂತೆ ಭಯೋತ್ಪಾದನೆ ವಿಚಾರದಲ್ಲಿ ತಪ್ಪು ಸಂದೇಶ ರವಾನೆಯಾಗುವಂತಾಗಿದೆ. ನನ್ನ ನೇತೃತ್ವದ ಸರ್ಕಾರಕ್ಕೂ ಕಳಂಕವಾಗಿದೆ. ನಾವು ಭಯೋತ್ಪಾದಕರ ಕುರಿತ ಸತ್ಯವನ್ನು ನಿಖರವಾಗಿ ಅಮೆರಿಕಕ್ಕೆ ತಿಳಿಸಲೇ ಇಲ್ಲ ಎಂಬುದಾಗಿ ಹೇಳಿದ್ದಾರೆ.

ಅಮೆರಿಕ ಸೆನೆಟ್ ನ ಶೈಲಾ ಜಾಕ್ಸನ್ ಲೀ  ಕ್ಯಾಪಿಟೋಲ್ ಹಿಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಖಾನ್ ಮೊತ್ತ ಮೊದಲ ಬಾರಿಗೆ ಪಾಕಿಸ್ತಾನದಲ್ಲಿ ಕಾರ್ಯಾಚರಿಸುತ್ತಿರುವ ಉಗ್ರರ ಸಂಘಟನೆ ಬಗ್ಗೆ ಬಹಿರಂಗವಾಗಿ ತಿಳಿಸುವ ಮೂಲಕ ಒಪ್ಪಿಕೊಂಡಿದ್ದಾರೆ.

ಪಾಕಿಸ್ತಾನದೊಳಗೆ 40 ವಿವಿಧ ಭಯೋತ್ಪಾದಕ ಸಂಘಟನೆಗಳು ಕಾರ್ಯಾಚರಿಸುತ್ತಿವೆ. ಒಟ್ಟು 40 ಸಾವಿರ ಉಗ್ರರಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜನರು ಕೂಡಾ ಅದರ ಸೆಳೆತಕ್ಕೆ ಒಳಗಾಗುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಹೀಗಾಗಿ ಭಯೋತ್ಪಾದಕರ ವಿರುದ್ಧದ ಹೋರಾಟಕ್ಕೆ ನೆರವು ನೀಡುವ ಮೂಲಕ ಗೆಲುವು ಸಾಧಿಸಲು ಕೈಜೋಡಿಸಬೇಕಾಗಿದೆ ಎಂದು ಖಾನ್ ತಿಳಿಸಿದ್ದಾರೆ.

ಶಾಂತಿ ಸ್ಥಾಪನೆ, ಶಾಂತಿ ಮಾತುಕತೆ ಮೂಲಕ ಉಗ್ರರನ್ನು ಶರಣಾಗತಗೊಳಿಸುವುದು ತುಂಬಾ ಸರಳವಾದ ಕೆಲಸವಲ್ಲ. ಅಫ್ಘಾನಿಸ್ತಾನದಲ್ಲಿನ ಪರಿಸ್ಥಿತಿ ತುಂಬಾ ಕ್ಲಿಷ್ಟಕರವಾಗಿದೆ. ಆದರೆ ಉಳಿದಂತೆ ನಾವು ನಮ್ಮ ಕೈಯಲ್ಲಾದ ಕ್ರಮಕೈಗೊಳ್ಳುತ್ತೇವೆ. ಇಡೀ ದೇಶವೇ ನನ್ನ ಬೆನ್ನಿಗೆ ನಿಂತಿದೆ, ಪಾಕಿಸ್ತಾನದ ಮಿಲಿಟರಿ, ಭದ್ರತಾ ಪಡೆಗಳು ಕೂಡಾ ನನ್ನ ಬೆಂಬಲಕ್ಕಿವೆ. ನಮ್ಮೆಲ್ಲರದ್ದೂ ಒಂದೇ ಗುರಿಯಾಗಿದೆ, ಅದು ಅಮೆರಿಕದ್ದು ಕೂಡಾ ಹೌದು. ಆ ನಿಟ್ಟಿನಲ್ಲಿ ಅಪ್ಘಾನಿಸ್ತಾನದಲ್ಲಿ ನಾವು ಆದಷ್ಟು ಶೀಘ್ರವಾಗಿ ಶಾಂತಿಯುತವಾಗಿ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ ಎಂದು ಖಾನ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.