ಉದ್ಯೋಗ ವಿನಿಮಯ ಕೇಂದ್ರಕ್ಕೆ ಬರುವವರ ಸಂಖ್ಯೆ ಕುಸಿತ !


Team Udayavani, Jul 25, 2019, 5:50 AM IST

udyoga-vinimaya

ಉಡುಪಿ: ಜಿಲ್ಲೆಯ ನಿರುದ್ಯೋಗಿಗಳ ಪಾಲಿಗೆ ಮರಳುಗಾಡಿನ ‘ಓಯಸಿಸ್‌’ ನಂತಿದ್ದ ಉದ್ಯೋಗ ವಿನಿಮಯ ಕೇಂದ್ರಕ್ಕೆ ನೌಕರಿಯ ಕನಸು ಹೊತ್ತು ಬರುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಹಾಗಂತ ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆ ಕಡಿಮೆಯಾಗಿಲ್ಲ. ಪ್ರತಿವರ್ಷ ಉದ್ಯೋಗ ನಿಮಿತ್ತ ಸಾವಿರಾರು ಯುವಜನತೆ ಬೇರೆಕಡೆ ವಲಸೆ ಹೋಗುತ್ತಿದ್ದಾರೆ.

15 ವರ್ಷಗಳ ಹಿಂದೆ ಸರಕಾರದ ಗ್ರೂಪ್‌ ಡಿ’ ನೌಕರಿ, ಆರೋಗ್ಯ ಇಲಾಖೆ, ಕೆಎಸ್‌ ಆರ್‌ಟಿಸಿಯ ಕೆಳ ಹಂತದ ಸಿಬಂದಿಯನ್ನು ಉದ್ಯೋಗ ವಿನಿಮಯ ಕೇಂದ್ರದ ಮೂಲಕವೇ ನೇಮಕ ಮಾಡಿಕೊಳ್ಳಲಾಗುತ್ತಿತ್ತು. ಆಗ ದಿನಕ್ಕೆ 500ಕ್ಕೂ ಹೆಚ್ಚು ಜನ ಬಂದು ನೌಕರಿಗಾಗಿ ಹೆಸರು ನೋಂದಾಯಿಸಿಕೊಳ್ಳುತ್ತಿದ್ದರು. ಆಗ ಜನರನ್ನು ನಿಯಂತ್ರಿಸುವುದೇ ಕಷ್ಟವಾಗುತ್ತಿತ್ತು. ಕಾಲ ಕ್ರಮೇಣ ಆಯಾ ಇಲಾಖೆಯೇ ನೇಮಕಾತಿ ಜವಾಬ್ದಾರಿ ವಹಿಸಿ ಕೊಂಡಿದ್ದರಿಂದ ಕೇಂದ್ರದ ಬಳಿ ಇರುವ ಉದ್ಯೋಗಾ ವಕಾಶಗಳು ಕಡಿಮೆಯಾಗಿದೆ.

ಇಂದು ಸರಕಾರಿ ಹಾಗೂ ಬ್ಯಾಂಕ್‌ ಉದ್ಯೋಗಗಳಿಗೆ ಯುವಜನರು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬೇಕಾಗಿದೆ. ಇದೀಗ ಸರಕಾರಿ ಉದ್ಯೋಗ ಸಿಗದೆ ಇರುವುದರಿಂದ ಹಾಗೂ ಹೆಚ್ಚುತ್ತಿರುವ ಖಾಸಗಿ ವಿನಿಮಯ ಕೇಂದ್ರದಿಂದ ಉದ್ಯೋಗ ಕೇಂದ್ರಕ್ಕೆ ಅರ್ಜಿ ಹಾಕುವವರ ಸಂಖ್ಯೆ ತೀವ್ರವಾಗಿ ಕ್ಷೀಣಿಸುತ್ತಿದೆ.

ನೋಂದಾವಣೆ ಕುಸಿತ

ಒಂದು ಕಾಲದಲ್ಲಿ ವರ್ಷಕ್ಕೆ 10,000 ರಿಂದ 20,000 ಜನರು ನೋಂದಾಯಿಸಿಕೊಳ್ಳುವ ಕೇಂದ್ರದಲ್ಲಿ ಈಗ ಕೇವಲ 5,414 ಮಂದಿ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೋಂದಾಯಿಸಿಕೊಂಡಿದ್ದಾರೆ. ತಿಂಗಳಿಗೆ ಸರಾಸರಿ 80 ಜನರು ಕೇಂದ್ರದಲ್ಲಿ ನೋಂದಾಯಿಸಿ ಕೊಳ್ಳುತ್ತಿದ್ದಾರೆ.

ಸೇಲ್ಸ್ ಮ್ಯಾನ್‌ಳಿಗೆ ಹೆಚ್ಚಿನ ಬೇಡಿಕೆ

ಕೇಂದ್ರದಲ್ಲಿ ನೊಂದಾಯಿಸಿಕೊಂಡವರಲ್ಲಿ ಮಾರ್ಕೆಟಿಂಗ್‌ ಕ್ಷೇತ್ರದಲ್ಲಿ ಆಸಕ್ತಿ ಇರುವವರಿಗೆ ಬಹು ಬೇಗನೆ ನೌಕರಿ ಸಿಗುತ್ತಿದೆ. ಸೇಲ್ಸ್ ಮ್ಯಾನ್‌ ಹುದ್ದೆಗೆ ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಂದ ಬೇಡಿಕೆಯಿದೆ. ಪಿಯುಸಿ ಮುಗಿಸಿದ ಯುವಕರನ್ನು ಸಹ ಹಲವು ಕಂಪೆನಿಗಳು ನೇಮಿಸಿಕೊಳ್ಳುತ್ತಿವೆ. ಊರಿನಲ್ಲಿಯೇ 10ರಿಂದ 14 ಸಾವಿರದ ವರೆಗೆ ಮಾಸಿಕ ವೇತನ ನೀಡುತ್ತಾರೆ ಎಂದು ಉದ್ಯೋಗ ವಿನಿಮಯ ಕೇಂದ್ರದ ಟ್ರೈನರ್‌ ಜಗನ್‌ ಹೇಳುತ್ತಾರೆ.

ಪ್ರತಿಯೊಬ್ಬರು ಕಾರ್ಡ್‌ ಮಾಡಿಸಿಕೊಳ್ಳಿ

ಸ್ಪರ್ಧಾತ್ಮಕ ಪರೀಕ್ಷೆ ಪಾಸಾಗಿ ಸರಕಾರಿ ಉದ್ಯೋಗ (ಪಿಡಿಒ) ಬಯಸುವವರು ಉದ್ಯೋಗ ವಿನಿಮಯ ಕೇಂದ್ರದ ಕಾರ್ಡ್‌ ಹೊಂದಿರುವುದು ಕಡ್ಡಾಯವಾಗಿದೆ.

ಹಣದ ಬೇಡಿಕೆಯಿಲ್ಲ

ಸರಕಾರಿ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಯಾವುದೇ ಶುಲ್ಕವನ್ನು ತೆರಬೇಕಾಗಿಲ್ಲ. ಮೂರು ವರ್ಷಕ್ಕೊಮ್ಮೆ ನವೀಕರಣ ಮಾಡಿದರೆ ಸಾಕು. ಆದರೆ ಖಾಸಗಿ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಪ್ರತಿಯೊಂದಕ್ಕೂ ಶುಲ್ಕ ಪಾವತಿಸಬೇಕು. ಇನ್ನೂ ಕೆಲಸ ಸಿಕ್ಕಿದ ಬಳಿಕ ಮೊದಲ ಸಂಬಳದಲ್ಲಿ ಶೇ. 30ರಷ್ಟು ಹಣ ನೀಡಬೇಕು.

1959ರ ಕಾಯ್ಡೆ ಅನ್ವಯ ಜಿಲ್ಲೆಯ ಖಾಸಗಿ ಸಂಸ್ಥೆಗಳು ಪ್ರತಿ 3 ತಿಂಗಳಿಗೊಮ್ಮೆ ಉದ್ಯೋಗಾವಕಾಶ ಕಲ್ಪಿಸದ ಹಾಗೂ ಖಾಲಿಯಿರುವ ಹುದ್ದೆಗಳ ಕುರಿತು ಮಾಹಿತಿ ನೀಡುತ್ತದೆ. ಅಂತಯೇ ಖಾಲಿ ಹುದ್ದೆಗಳಿಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೊಂದಾಯಿಸಿಕೊಂಡ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕಳುಹಿಸಲಾಗುತ್ತದೆ.

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.