ಬಸ್ರೂರು: ಯಾರಿಗೂ ಬೇಡವಾಗಿವೆ ಶಿಲಾ ಶಾಸನಗಳು!


Team Udayavani, Jul 25, 2019, 6:33 AM IST

basruru

ಬಸ್ರೂರು: ಐತಿಹಾಸಿಕ ನಗರಿ ಹಾಗೂ ಬಂದರು ಪ್ರದೇಶವಾಗಿದ್ದ ಬಸ್ರೂರಿನಲ್ಲಿ ನಗರದ ಇತಿಹಾಸ ಸಾರುವ ಶಿಲಾ ಶಾಸನಗಳನ್ನು ಉಳಿಸಿಕೊಳ್ಳುವ ಕುರಿತಂತೆ ಯಾರೂ ಗಮನವೇ ಹರಿಸುತ್ತಿಲ್ಲ. ಅಲ್ಲಲ್ಲಿ ಬಿದ್ದಿದ್ದ 12 ಶಿಲಾ ಶಾಸನಗಳನ್ನು ಬಸ್ರೂರು ಶ್ರೀ ಶಾರದಾ ಕಾಲೇಜಿನ ವತಿಯಿಂದ ಸಂರಕ್ಷಿಸುವ ಕಾರ್ಯ ಮಾಡಲಾಗುತ್ತಿದೆ. ಆದರೆ ಸುಮಾರು 45 ಕ್ಕೂ ಹೆಚ್ಚು ಶಿಲಾ ಶಾಸನಗಳು ಸರಿಯಾದ ಸಂರಕ್ಷಣೆಯಿಲ್ಲದೆ ವಿನಾಶದಂಚಿಗೆ ಸರಿಯುತ್ತಿದ್ದು, ಅವುಗಳನ್ನು ಸಂಗ್ರಹಿಸಿ ಉಳಿಸುವ ಕಾರ್ಯ ಆಗಬೇಕಾಗಿದೆ.

ಈಗಾಗಲೇ ಎಲ್ಲೆಲ್ಲೊ ಬಿದ್ದಿದ್ದ 12 ಶಿಲಾ ಶಾಸನಗಳನ್ನು ಬಸ್ರೂರು ಶ್ರೀ ಶಾರದಾ ಕಾಲೇಜಿನ ಎನ್ನೆಸ್ಸೆಸ್‌ ವಿದ್ಯಾರ್ಥಿಗಳ ಸಹಕಾರದೊಂದಿಗೆ ನಿವೃತ್ತ ಉಪನ್ಯಾಸಕ, ಅಧ್ಯಯನಕಾರ ಡಾ| ಕನರಾಡಿ ವಾದಿರಾಜ ಭಟ್ ಅವರು ತಂದು ಶಾರದಾ ಕಾಲೇಜಿನಲ್ಲಿ ಸಂರಕ್ಷಿಸಿದ್ದಾರೆ.

ಅಲ್ಲದೆ ದಿ| ಡಾ.ಪಿ.ಗುರುರಾಜ ಭಟ್ಟರು, ದಿ| ಡಾ.ಬಿ.ವಸಂತ ಶೆಟ್ಟಿ ಮತ್ತು ಡಾ| ಪಿ.ಎನ್‌.ನರಸಿಂಹ ಮೂರ್ತಿಯವರು ಇಲ್ಲಿನ ಶಾಸನಗಳ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿ ಹಲವು ಶಾಸನಗಳನ್ನು ಉಳಿಸಿ ಅಧ್ಯಯನ ನಡೆಸಿದ್ದಾರೆ. ಇಲ್ಲಿನ ಶ್ರೀ ಆದಿನಾಥೇಶ್ವರ ದೇವಸ್ಥಾನ, ಶ್ರೀ ವೆಂಕಟರಮಣ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಉಳ್ಳೂರು ಶ್ರೀ ಕಾರ್ತಿಕೇಯ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಹೇರಿಕೆರೆಯ ಶ್ರೀ ಕೊಳನಕೋಡು ಈಶ್ವರ ದೇವಸ್ಥಾನಗಳಲ್ಲಿ ಕೆಲವು ಶಾಸನಗಳಿದ್ದು, ಅವುಗಳು ಅಲ್ಲೇ ಉಳಿದುಕೊಂಡಿವೆೆ. ಹೇರಿಕೆರೆಯ ಶ್ರೀ ಕೊಳನಕೋಡು ಈಶ್ವರ ದೇವಸ್ಥಾನದಲ್ಲಿ ಕಾಣ ಸಿಗುವ ಒಂದು ಶಿಲಾ ಶಾಸನದಲ್ಲಿ ತುಳು ಲಿಪಿಯಿದೆ ಎಂದು ಹೇಳಲಾಗಿದೆ.

ಸಮೀಪದ ಕಂದಾವರ, ಹಟ್ಟಿಕುದ್ರು, ಬಳ್ಕೂರು, ಜಪ್ತಿ, ಆನಗಳ್ಳಿ ಮುಂತಾದೆಡೆಯಲ್ಲಿ ಹಲವು ಶಾಸನಗಳು ಇದೆಯಾದರೂ ಅವುಗಳನ್ನು ಸಂರಕ್ಷಿಸಿಡುವಲ್ಲಿ ಸ್ಥಳೀಯಾಡಳಿತ ವಿಫಲವಾಗಿದೆ. ಇಲ್ಲಿನ ಪಂತ್ರ ಮನೆಯ ಭೂಮಿಯ ಅಡಿಯಲ್ಲಿ ಹುದುಗಿ ಹೋಗಿದ್ದ ಒಂದು ಶಿಲಾ ಶಾಸನವನ್ನು ಅಗೆದು ತೆಗೆದಿಟ್ಟಿದ್ದಾರೆ. ಆದರೆ ಆ ಶಾಸನವನ್ನು ಇನ್ನೂ ಓದಲಾಗಿಲ್ಲ.

ಶಿಲಾ ಶಾಸನಗಳನ್ನು ಉಳಿಸುವ ಕೆಲಸವನ್ನು ಪ್ರಾಚ್ಯ ಸಂಶೋಧನಾ ಇಲಾಖೆ ಮಾಡಬೇಕಾಗಿದೆ.

ಸ್ಥಳೀಯರು, ಗ್ರಾ.ಪಂ. ಸಹ ಇದಕ್ಕೆ ಆಸಕ್ತಿ ತೋರಬೇಕಾಗಿದೆ. ಬಸ್ರೂರಿನ ಶಿಲಾ ಶಾಸನಗಳ ಬಗ್ಗೆ ನಡೆದ ಸಂಶೋಧನೆ ಇನ್ನೂ ಪೂರ್ಣವಾಗಿಲ್ಲ ಎನ್ನುವುದು ಗಮನಾರ್ಹ.

ಟಾಪ್ ನ್ಯೂಸ್

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.