ಜೀರ್ಣೋದ್ಧಾರಕ್ಕಾಗಿ ಕಾದಿದೆ ಪುಣ್ಯ ಕ್ಷೇತ್ರ

ಸಂಪೂರ್ಣ ಶಿಥಿಲಗೊಂಡಿದೆ ಬೋರಬಂಡಾ ಗ್ರಾಮದ ತಪೋಸ್ಥಳ-ದಾಸೋಹ ಕೇಂದ್ರ

Team Udayavani, Jul 25, 2019, 10:58 AM IST

25-JUly-11

ಸೈದಾಪುರ: ಬೋರಬಂಡಾ ಗ್ರಾಮದ ಸಿದ್ಧಲಿಂಗ ಸ್ವಾಮೀಜಿ ಮಠ ಶಿಥಿಲಗೊಂಡ ದೃಶ್ಯ.

ಭೀಮಣ್ಣ ವಡವಟ್ಟ
ಸೈದಾಪುರ:
ಎಷ್ಟೋ ಪ್ರಾಚೀನ ಪುಣ್ಯಕ್ಷೇತ್ರಗಳು, ತಪೋಭೂಮಿಗಳು ನಿರ್ವಹಣೆ ಕೊರತೆಯಿಂದ ಹಾಳಾಗುತ್ತಿವೆ. ಬೋರಬಂಡಾ ಗ್ರಾಮದ ಹೊರ ವಲಯದಲ್ಲಿರುವ ಸಿದ್ಧಲಿಂಗ ಸ್ವಾಮೀಜಿ ತಪೋಗೈದ ಸ್ಥಳ ಹಾಗೂ ದಾಸೋಹ ಕೇಂದ್ರ ಸಂಪೂರ್ಣ ಶಿಥಿಲಗೊಂಡಿದೆ.

ಪ್ರಥಮ ಸಿದ್ಧಲಿಂಗ ಸ್ವಾಮೀಜಿ ಸುದೀರ್ಘ‌ 12 ವರ್ಷಗಳ ಕಾಲ ತಪಸ್ಸನ್ನಾಚರಿಸಿದ ಈ ಕ್ಷೇತ್ರ ಹಾಳು ಬಿದ್ದಿದೆ. ಸುಮಾರು ಮೂರು ಶತಮಾನಗಳ ಹಿಂದೆಯೇ ಗಿರಿನಾಡಿನ ಜನತೆಗೆ ಜ್ಞಾನದಾಸೋಹ-ಅನ್ನದಾಸೋಹಗೈದ ಪುಣ್ಯಕ್ಷೇತ್ರವನ್ನು ಪ್ರವಾಸಿ ತಾಣವನ್ನಾಗಿ ಮಾರ್ಪಡಿಸಬೇಕೆಂಬುದು ಭಕ್ತರ ಬಯಕೆಯಾಗಿದೆ.

ಬತ್ತದ ಬಾವಿ: ಬೋರಬಂಡಾ ಗ್ರಾಮದಲ್ಲಿ ಕಳೆದ ನಾಲ್ಕು ಶತಮಾನಗಳ ಹಿಂದೆ ನಿರ್ಮಿಸಲಾದ ಐತಿಹಾಸಿಕ ಬಾವಿ ಯೊಂದಿದ್ದು, ಸುಮಾರು ಎಂಟು ಗುಂಟೆ ವ್ಯಾಪ್ತಿಯಲ್ಲಿ ಇದನ್ನು ನಿರ್ಮಿಸಲಾಗಿದೆ.ಇದು ಬೃಹದಾಕಾರ ಕಲ್ಲುಗಳಿಂದ ನಿರ್ಮಿಸಲಾಗಿದೆ. ಸುಮಾರು 50 ಅಡಿಗಳಷ್ಟು ಆಳ ಹೊಂದಿದ್ದು, ಎಷ್ಟೇ ಬರ ಆವರಿಸಿದರೂ ಬತ್ತಿದ ಉದಾಹರಣೆ ಇಲ್ಲವೇ ಇಲ್ಲ ಎನ್ನುತ್ತಾರೆ ಸ್ಥಳೀಯರು.

ಇತಿಹಾಸ: ಬೋರಬಂಡಾದ ಗುಡ್ಡದ ಬಂಡೆಯೊಂದರ ಕೆಳಗೆ ಅನುಷ್ಠಾನ ಕುಳಿತಿದ್ದ ಸಿದ್ಧಲಿಂಗ ಸ್ವಾಮಿಗಳನ್ನು ಕಾಕಲವಾರ ಸಂಸ್ಥಾನದ ಒಡೆಯ ಲಕ್ಷ್ಮಣಪ್ಪ ದೊರೆ ಭೇಟಿ ಮಾಡಿ ಸಂತಾನ ಭಾಗ್ಯ ಕೊಡುವಂತೆ ಬೇಡಿಕೊಳ್ಳುತ್ತಾನೆ. ಶ್ರೀಗಳ ಆಶೀರ್ವಾದದಂತೆ ರಾಜ ದಂಪತಿಗೆ ಮಕ್ಕಳಾಗುತ್ತವೆ. ಇದರಿಂದ ಸಂತಸಗೊಂಡ ಲಕ್ಷ್ಮಣಪ್ಪ ದೊರೆ ಬೋರಬಂಡಾ ಗುಡ್ಡಗಾಡಿನ ಸುಮಾರು 1600 ಎಕರೆ ಭೂ ಪ್ರದೇಶವನ್ನು ಶ್ರೀ ಮಠಕ್ಕೆ ದಾನವಾಗಿ ಕೊಡುತ್ತಾನೆ. ಆದರೆ ನಂತರದಲ್ಲಿ ಈ ಭೂ ಪ್ರದೇಶ ಸ್ಥಳೀಯ ಜನರ ಪಾಲಾಗಿದ್ದು, ಇದೀಗ ಅಲ್ಪಸ್ವಲ್ಪ ಮಾತ್ರ ಉಳಿದು ಕೊಂಡಿದೆ.

ಬೋರಬಂಡಾ ನಮ್ಮ ಶ್ರೀ ಮಠದ ಸಿದ್ಧಲಿಂಗ ಸ್ವಾಮಿಗಳು ಅನುಷ್ಠಾನ ಮಾಡಿರುವ ಸ್ಥಳವಾಗಿದ್ದು, ಅಲ್ಲಿ ನಿರ್ಮಿಸಲಾದ ಬಾವಿ ಐತಿಹಾಸಿಕ ಸಂಪತ್ತು. ಪೂಜ್ಯರ ಅನುಷ್ಠಾನ ಸ್ಥಳ, ಅನ್ನದಾಸೋಹ ಕೇಂದ್ರ ಅಭಿವೃದ್ಧಿ ಪಡಿಸುವ ಮೂಲಕ ಪ್ರವಾಸಿಗರಿಗೆ, ಭಕ್ತರಿಗೆ ಅನುಲಕೂಲವಾಗಬೇಕು. ಇದಕ್ಕೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಕಾರ ಅತ್ಯವಶ್ಯ.
ಪಂಚಮ ಸಿದ್ಧಲಿಂಗ ಸ್ವಾಮೀಜಿ, ವಿರಕ್ತಮಠ

ಯಾದಗಿರಿಯಿಂದ ಗುರುಮಠಕಲ್ ಮಾರ್ಗ ನಡುವೆ ಇರುವ ಬೋರಬಂಡಾದ ಸಿದ್ಧಲಿಂಗ ಸ್ವಾಮಿಗಳ ತಪೋಸ್ಥಳ ಅಭಿವೃದ್ಧಿ ಪಡಿಸುವ ಜವಾಬ್ದಾರಿ ಸ್ಥಳೀಯ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಅವರ ಮೇಲಿದೆ. ಹೆದ್ದಾರಿ ಪಕ್ಕದಲ್ಲೇ ಇರುವ ಈ ಪುಣ್ಯಸ್ಥಳ ಅಭಿವೃದ್ಧಿ ಪಡಿಸಿದರೆ ಪ್ರಯಾಣಿಕರಿಗೆ, ಭಕ್ತರಿಗೆ, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಟಾಪ್ ನ್ಯೂಸ್

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.