ಬದಿಯಡ್ಕ ಮಣ್ಣು ಕುಸಿತ ಪರಿಶೀಲಿಸಿದ ಜಿಲ್ಲಾಧಿಕಾರಿ
Team Udayavani, Jul 25, 2019, 11:32 AM IST
ಬದಿಯಡ್ಕ: ಬದಿಯಡ್ಕ-ಪೆರ್ಲ ರಸ್ತೆಯಲ್ಲಿ ಮಣ್ಣು ಕುಸಿತ ಉಂಟಾದ ಹಿನ್ನೆಲೆಯಲ್ಲಿಕಾಸರಗೋಡು ಜಿಲ್ಲಾಧಿಕಾರಿ ಸಜಿತ್ ಬಾಬು ಸ್ಥಳಕ್ಕೆ ಭೇಟಿ ನೀಡಿದರು.
ಇಲ್ಲಿನ ಜನರ ಸಮಸ್ಯೆಗಳನ್ನು ಮನಗಂಡು ಪಿಡಬ್ಲ್ಯುಡಿ ಇಂಜಿನಿಯರುಗಳ ಹಾಗೂ ಇಲಾಖಾ ಅಧಿಕಾರಿಗಳ ಸಭೆ ಕರೆದಿದ್ದು, ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಡ್ವ ಶ್ರೀಕಾಂತ್, ಸುಧಾಮ ಗೋಸಾಡ, ಅವಿನಾಶ್ ರೈ, ಅಶ್ರಫ್ ಮುನಿಯೂರು, ರಾಜೇಶ್, ವಿಶ್ವನಾಥ ಪ್ರಭು, ಹನೀಫ್ ಪಿಎಮ್ಮೆಸ್ಸ್ ಈ ಸಂದರ್ಭದಲ್ಲಿ ಜತೆಗಿದ್ದರು