ದುಸ್ಥಿತಿಯಲ್ಲಿ ಶುದ್ಧೀಕರಣ ಘಟಕ

ಹೂಳು ತುಂಬಿಕೊಂಡಿದೆ • ಶೀಘ್ರ ಕ್ರಮಕ್ಕೆ ಸ್ಥಳೀಯರ ಒತ್ತಾಯ

Team Udayavani, Jul 25, 2019, 12:28 PM IST

25-JUly-20

ಬೀಳಗಿ: ಪಟ್ಟಣದ ಹೊರವಲಯದಲ್ಲಿ ನಿರ್ಮಿ ಸಲಾಗಿರುವ ಕೋಟ್ಯಂತರ ವೆಚ್ಚದ ಒಳಚರಂಡಿ ಯೋಜನೆಯ ಮಲೀನ ನೀರು ಶುದ್ಧೀಕರಣ ಘಟಕದ ಪ್ರದೇಶ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ದುಃಸ್ಥಿತಿಗೆ ತಲುಪಿದೆ.

ಕೊಳವೆ ಮಾರ್ಗ ಕಳಪೆ: 17.30 ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ಒಳಚರಂಡಿ ಕಾಮಗಾರಿ ಮಾಡಲಾಗಿದೆ. ಒಳಚರಂಡಿ ಕಾಮಗಾರಿ ಒಟ್ಟು ಕೊಳವೆ ಮಾರ್ಗ 25,344 ಮೀಟರ್‌ಗಳಾಗಿದೆ. ಒಟ್ಟು 1,189 ಆಳಗುಂಡಿಗಳಿದ್ದು, 11 ಸಾವಿರ ಮೀಟರ್‌ ಉದ್ದದ ಕೊಳವೆ ಮಾರ್ಗಗಳಿದ್ದು, 2,356 ಮನೆಗಳಿಗೆ ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೆ ಒಳಚರಂಡಿ ಕಾಮಗಾರಿ ಪೂರ್ಣಗೊಂಡಿದೆ.

ಕೇವಲ ಒಂದೇ ವರ್ಷದೊಳಗೆ ಒಳಚರಂಡಿ ಯೋಜನೆಯ ಮಲೀನ ನೀರು ಶುದ್ಧೀಕರಣ ಘಟಕದ ಪ್ರದೇಶದಲ್ಲಿ ಮುಳ್ಳುಕಂಟಿ ಬೆಳೆದು ನಿಂತಿವೆ. ಶುದ್ಧೀಕರಣ ಘಟಕ ನಿರ್ವಹಣೆಗೆ ತೆರಳಲು ರಸ್ತೆಯೇ ಇಲ್ಲದಂತಾಗಿದೆ. ಅಲ್ಲದೆ, ಶುದ್ಧೀಕರಣ ಘಟಕದ ಬಳಿ ಒಳಚರಂಡಿ ಮಲೀನ ನೀರು ಸರಬರಾಜಾಗುವ ಕೊಳವೆ ಮಾರ್ಗ ಹಲವೆಡೆ ಒಡೆದಿರುವ ಪರಿಣಾಮ, ಕೊಳವೆ ಮಾರ್ಗ ಸೋರಿಕೆಯಾಗುತ್ತಿದೆ. ಮೂರು ದಶಲಕ್ಷ ಲೀಟರ್‌ ಸಾಮರ್ಥ್ಯದ ಮಲೀನ ಶುದ್ಧೀಕರಣ ಘಟಕದ ಸ್ಥಿತಿ ಕೇಳುವರಿಲ್ಲದಂತಾಗಿದೆ. ಮಲೀನ ನೀರು ಶುದ್ಧೀಕರಣ ಘಟಕ ನಿರ್ವಹಣೆಯಿಲ್ಲದೆ ಹೂಳು ತುಂಬಿಕೊಂಡಿದ್ದು, ಹಸಿರು ಪಾಚಿ (ಆಪು) ಬೆಳೆದು ನಿಂತಿದೆ.

17.30 ಕೋಟಿ ಕಾಮಗಾರಿ: ತಾಲೂಕು ಕೇಂದ್ರವಾಗಿರುವ ಬೀಳಗಿ ನಗರದ ಜನಸಂಖ್ಯೆ 20 ಸಾವಿರ ಗಡಿ ದಾಟಿದೆ. 2028ರ ಮಧ್ಯಮ ವರ್ಷಕ್ಕೆ 27 ಸಾವಿರ ಹಾಗೂ 2043 ರ ಅಂತಿಮ ವರ್ಷಕ್ಕೆ 37 ಸಾವಿರ ಜನಸಂಖ್ಯೆ ಹೊಂದಬಹುದೆನ್ನುವ ದೂರದೃಷ್ಟಿಯಿಂದ ಪಟ್ಟಣಕ್ಕೆ ಒಳಚರಂಡಿ ಯೋಜನೆ ಅಗತ್ಯತೆಯಿದೆ. ಸಾರ್ವಜನಿಕರಿಂದ ಕಳಪೆ ಕಾಮಗಾರಿಯ ಆರೋಪ ಎದುರಿಸುತ್ತಲೆ ಒಳಚರಂಡಿ ಕಾಮಗಾರಿ ಕೂಡ ಮುಗಿದು ಹೋಗಿದೆ. ಆದರೆ, ಇದೀಗ ಮಲೀನ ನೀರು ಶುದ್ಧೀಕರಣ ಘಟಕದ ಬಳಿ ಕೊಳವೆ ಮಾರ್ಗ ಸೋರಿಕೆಯಾಗುತ್ತಿರುವುದನ್ನು ಗಮನಿಸಿದರೆ, ಸಾರ್ವಜನಿಕರು ಈ ಹಿಂದೆ ಮಾಡಿರುವ ಕಳಪೆ ಕಾಮಗಾರಿ ಆರೋಪಕ್ಕೆ ಪುಷ್ಠಿ ನೀಡುತ್ತದೆ.

ಕೂಡಲೆ ಕ್ರಮಕ್ಕೆ ಮುಂದಾಗಿ: ಒಳಚರಂಡಿ ಯೋಜನೆ ಮುಗಿದು ವರ್ಷ ಕೂಡ ಪೂರ್ಣಗೊಂಡಿಲ್ಲ. ಆಗಲೇ ಮಲೀನ ನೀರು ಸರಬರಾಜು ಕೊಳವೆ ಮಾರ್ಗ ಸೋರಿಕೆಯಾಗುತ್ತಿದೆ. ಶುದ್ಧೀಕರಣ ಘಟಕದ ಪ್ರದೇಶ ಮುಳ್ಳುಕಂಟಿ ಬೆಳೆದಿದೆ. ಕೊಳವೆ ಮಾರ್ಗ ರಿಪೇರಿ ಮಾಡಬೇಕು. ಘಟಕದ ಪ್ರದೇಶ ಸ್ವಚ್ಛಗೊಳಿಸಬೇಕಾಗಿದೆ.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.