ಕೆಸರು ಗದ್ದೆಯಾದ ರಾಷ್ಟ್ರೀಯ ಹೆದ್ದಾರಿ


Team Udayavani, Jul 26, 2019, 5:52 AM IST

kesaru-gadde

ಕಾಸರಗೋಡು: ಮುಂಗಾರು ಮಳೆ ಬಿರುಸುಗೊಂಡಿರುವಂತೆ ಕಾಸರ ಗೋಡು ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಹುಭಾಗ ಕೆಸರುಗದ್ದೆ ಯಾಗಿ ಮಾರ್ಪಾಡಾಗಿದೆ. ಕಾಸರಗೋಡಿನಿಂದ ತಲಪಾಡಿಯ ತನಕ ಅಲ್ಲಲ್ಲಿ ರಾ.ಹೆದ್ದಾರಿಯಲ್ಲಿ ಹೊಂಡಗುಂಡಿಗಳ ಸಾಮ್ರಾಜ್ಯ ವಾಗಿದೆ. ಅಲ್ಲದೆ ಅಲ್ಲಲ್ಲಿ ರಸ್ತೆ ಕೆಸರು ಗದ್ದೆಯಂತಾಗಿದೆ. ಇದರಿಂದಾಗಿ ಪಾದಚಾರಿಗಳಿಗೆ ಮತ್ತು ವಾಹನ ಸಂಚಾರಕ್ಕೆ ಅಡ್ಡಿ, ಆತಂಕ ಸೃಷ್ಟಿಯಾಗಿದೆ.

ಕಾಸರಗೋಡಿನಿಂದ ತಲಪಾಡಿಯ ವರೆಗಿನ ಎರಿಯಾಲ್‌, ಚೌಕಿ, ಮೊಗ್ರಾಲ್‌, ಕುಂಬಳೆ, ಪೊಸೋಟು, ಮಂಜೇಶ್ವರ, ಮಾಡ, ತೂಮಿನಾಡು, ಕುಂಜತ್ತೂರು, ಸಹಿತ ಬೃಹತ್‌ ಗಾತ್ರದ ಹೊಂಡಗಳಾಗಿ ಅಥವಾ ಕೆಸರು ಗದ್ದೆಯಾಗಿ ಬದಲಾಗಿದೆ. ಮಳೆಯ ಅಬ್ಬರಕ್ಕೆ ರಸ್ತೆ ತೀವ್ರವಾಗಿ ಕೆಟ್ಟು ಹೋಗಿದ್ದು, ವಾಹನ ಸಂಚಾರ ಸವಾಲಿನ ದ್ದಾಗಿದೆ. ರಸ್ತೆಗೆ ಹಾಕಿದ ಡಾಮರು ಕಿತ್ತು ಬಂದಿದ್ದು, ಜಲ್ಲಿ ಮೇಲೆ ಬಿದ್ದು ರಸ್ತೆಯಲ್ಲಿ ಬೃಹತ್‌ ಗಾತ್ರದ ಹೊಂಡ ಸೃಷ್ಟಿಯಾಗಿದೆ. ಹೊಂಡ ಹಾಗೂ ಕೆಸರಿನಿಂದಾಗಿ ವಾಹನ ಸುಗಮ ಸಂಚಾರಕ್ಕೆ ಅಸಾಧ್ಯವಾಗಿದೆ. ಈ ರಸ್ತೆಯಲ್ಲಿ ಸಾಗಬೇಕಾದರೆ ವಾಹನ ಚಾಲಕರು ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ವಾಹನ ಚಾಲಕ ಎಚ್ಚರ ತಪ್ಪಿದರೆ ಅಪಾಯವಂತೂ ಖಚಿತ ಎಂಬಂತಹ ಪರಿಸ್ಥಿತಿ ಇದೆ. ರಸ್ತೆ ಕೆಸರು ಗದ್ದೆಯಂತಾಗಿರುವುದರಿಂದ ದ್ವಿಚಕ್ರ ವಾಹನಗಳು ಸ್ಕಿಡ್‌ ಆಗುತ್ತಿರುವುದು ಸಾಮಾನ್ಯವಾಗಿದ್ದು, ಇದರಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಈಗಾಗಲೇ ಹಲವು ದ್ವಿಚಕ್ರ ವಾಹನಗಳು ಸ್ಕಿಡ್‌ ಆಗಿ ಉರುಳಿ ಬಿದ್ದು ಸವಾರರು ಗಾಯಗೊಂಡ ಘಟನೆಯೂ ನಡೆದಿದೆ.

ಚಲಿಸುವ ವಾಹನಗಳಿಂದಾಗಿ ಪಾದಚಾರಿಗಳ ಮೈಮೇಲೆ ರಸ್ತೆ ನೀರಿನ ಅಭಿಷೇಕವಾಗುತ್ತಿದೆ. ಬಟ್ಟೆ ಕೆಸರು ಮಯವಾಗುತ್ತಿರುವುದು ಸಾಮಾನ್ಯವಾಗುತ್ತಿದೆ. ಇದರಿಂದ ವಾಹನ ಚಾಲಕರ ಮತ್ತು ಪಾದಚಾರಿಗಳ ಮಧ್ಯೆ ಮಾತಿನ ಚಕಮಕಿಗೂ ಕಾರಣವಾಗುತ್ತಿದೆ. ಕೆಲವೆಡೆಗಳಲ್ಲಿ ರಸ್ತೆಯಿಂದ ಜಲ್ಲಿ ಸಿಡಿದು ವಾಹನಗಳಿಗೂ, ಪಾದಚಾರಿಗಳಿಗೂ ಬಡಿಯುತ್ತಿದೆ. ಜಲ್ಲಿ ಸಿಡಿದು ಪಾದಚಾರಿಗಳು ಗಾಯಗೊಂಡ ಘಟನೆಗಳೂ ನಡೆದಿವೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.