ಇಂದು ಲಸಿತ ಮಾಲಿಂಗ ಕೊನೆಯ ಆಟ

ಶ್ರೀಲಂಕಾ-ಬಾಂಗ್ಲಾದೇಶ ಮೊದಲ ಏಕದಿನ ; ಕೊಲಂಬೊದಲ್ಲಿ ಮಾಲಿಂಗ ವಿದಾಯ ಪಂದ್ಯ

Team Udayavani, Jul 26, 2019, 5:09 AM IST

MALINGA

ಕೊಲಂಬೊ: “ಲಗೋರಿ ಬೌಲರ್‌’ ಎಂದೇ ಗುರುತಿಸಲ್ಪಟ್ಟ ಶ್ರೀಲಂಕಾದ ವಿಚಿತ್ರ ಶೈಲಿಯ ವೇಗಿ, ರಂಗು ರಂಗಿನ ಆಟಗಾರ ಲಸಿತ ಮಾಲಿಂಗ ಶುಕ್ರವಾರ ತಮ್ಮ ಅಂತಿಮ ಏಕದಿನ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದ್ದಾರೆ. ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಈ ಪಂದ್ಯ ಕೊಲಂಬೊದಲ್ಲಿ ನಡೆಯಲಿದ್ದು, ಮಾಲಿಂಗ ಕೊನೆಯ ಸಲ ಅಂಗಳಕ್ಕಿಳಿಯಲಿದ್ದಾರೆ.

ಈ ಸರಣಿಯಲ್ಲಿ 3 ಏಕದಿನ ಮುಖಾಮುಖೀ ನಡೆಯಲಿದ್ದು, ಶುಕ್ರವಾರದ ಮೊದಲ ಪಂದ್ಯ ಲಸಿತ ಮಾಲಿಂಗ ಪಾಲಿನ “ವಿದಾಯ ಪಂದ್ಯ’ವಾಗಲಿದೆ.

ಸತತ ಗಾಯದಿಂದ ಹಿನ್ನಡೆ
ಮಾಲಿಂಗ 2004ರಲ್ಲಿ ಯುಎಇ ವಿರುದ್ಧ ಡಂಬುಲದಲ್ಲಿ ಏಕದಿನಕ್ಕೆ ಪದಾರ್ಪಣೆ ಮಾಡಿ ದ್ದರು. ಈ 15 ವರ್ಷಗಳ ಅವಧಿಯಲ್ಲಿ ಬಹಳಷ್ಟು ಸಲ ಗಾಯಾಳಾಗಿ ಹೊರಗುಳಿದುದರಿಂದ ಅವರ ವಿಕೆಟ್‌ ಬೇಟೆಗೆ ಭಾರೀ ಹಿನ್ನಡೆಯಾದದ್ದು ಸುಳ್ಳಲ್ಲ. ಮಾಲಿಂಗ ವಿದಾಯದಿಂದ ಶ್ರೀಲಂಕಾ ಸ್ಟಾರ್‌ ಆಟಗಾರನೊಬ್ಬನ ಸೇವೆಯನ್ನು ಕಳೆದುಕೊಳ್ಳಲಿದೆ, ಜತೆಗೆ “ವಿಕೆಟ್‌ ಟೇಕರ್‌’ ಬೌಲರ್‌ ಒಬ್ಬನನ್ನೂ.

ದಾಳಿ ಬಳಿಕ ಮೊದಲ ಸರಣಿ
“ಈಸ್ಟರ್‌ ಸಂಡೇ’ಯಂದು ನಡೆದ ಭೀಕರ ಭಯೋತ್ಪಾದಕ ದಾಳಿ ಬಳಿಕ ಇದು ಶ್ರೀಲಂಕಾದಲ್ಲಿ ನಡೆಯಲಿರುವ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್‌ ಸರಣಿ. ಬಿಗಿ ಭದ್ರತೆ ನಡುವೆ ಬಾಂಗ್ಲಾದೇಶ ತಂಡ ಇಲ್ಲಿಗೆ ಆಗಮಿಸಿದೆ.

ಮಶ್ರಫೆ ಮೊರ್ತಜಾ ಗಾಯಾಳಾಗಿ ಹೊರ ಗುಳಿದ ಕಾರಣ ಆರಂಭಕಾರ ತಮಿಮ್‌ ಇಕ್ಬಾಲ್‌ ಈ ಸರಣಿಯಲ್ಲಿ ಬಾಂಗ್ಲಾ ತಂಡವನ್ನು ಮುನ್ನಡೆ ಸಲಿದ್ದಾರೆ. ವಿಶ್ವಕಪ್‌ನಲ್ಲಿ 606 ರನ್‌ ಹಾಗೂ 11 ವಿಕೆಟ್‌ ಸಂಪಾದಿಸಿದ ಆಲೌರೌಂಡರ್‌ ಶಕಿಬ್‌ ಅಲ್‌ ಹಸನ್‌ ಸೇವೆ ಕೂಡ ಬಾಂಗ್ಲಾಕ್ಕೆ ಸಿಗುತ್ತಿಲ್ಲ.

ಲಂಕೆಯ 3ನೇ ಸಾಧಕ
35ರ ಹರೆಯದ “ಸೆಪರಮಡು ಲಸಿತ ಮಾಲಿಂಗ ಸ್ವರ್ಣಜಿತ್‌’ ಪಾಲಿಗೆ ಇದು 226ನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯ. ಒಟ್ಟು 335 ವಿಕೆಟ್‌ ಹಾರಿಸಿ ಲಂಕಾ ಬೌಲಿಂಗ್‌ ಸಾಧಕರ ಯಾದಿಯಲ್ಲಿ 3ನೇ ಸ್ಥಾನ ಅಲಂಕರಿಸಿದ್ದಾರೆ. ಮುತ್ತಯ್ಯ ಮುರಳೀಧರನ್‌ (523), ಚಮಿಂಡ ವಾಸ್‌ (399) ಹೊರತುಪಡಿಸಿದರೆ ಮಾಲಿಂಗ ಅವರೇ ಲಂಕೆಯ ಶ್ರೇಷ್ಠ ಬೌಲರ್‌. ಇನ್ನು 3 ವಿಕೆಟ್‌ ಉರುಳಿಸಿದರೆ ಅನಿಲ್‌ ಕುಂಬ್ಳೆ (337) ಅವರನ್ನು ಹಿಂದಿಕ್ಕಿ ವಿಶ್ವ ಮಟ್ಟದಲ್ಲಿ 9ನೇ ಸ್ಥಾನ ಅಲಂಕರಿಸಲಿದ್ದಾರೆ.

2004-2010ರ ಅವಧಿಯಲ್ಲಿ 30 ಟೆಸ್ಟ್‌ ಗಳನ್ನಾಡಿದ ಲಸಿತ ಮಾಲಿಂಗ, 5 ದಿನಗಳ ಪಂದ್ಯದಲ್ಲಿ ವಿಶೇಷ ಸಾಧನೆ ಮಾಡದಿದ್ದರೂ ವಿಕೆಟ್‌ ಶತಕ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ (101).


ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.