ರಾಜಕೀಯ ತಿರುವಿನಲ್ಲಿ ಉರುಳಿ ಬಿದ್ದ ‘ಆಟೋ ಶಂಕರ್’!
Team Udayavani, Jul 26, 2019, 5:00 AM IST
ಹಾವೇರಿ: ಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಯಾದ ರಾಣಿಬೆನ್ನೂರು ಕ್ಷೇತ್ರದ ಶಾಸಕ ಆರ್.ಶಂಕರ್ ಕೇವಲ ಒಂದು ವರ್ಷದಲ್ಲಿ ಎರಡು ಬಾರಿ ಸಚಿವರಾಗಿ, ಅನರ್ಹ ಗೊಂಡಿದ್ದಾರೆ!
ಶಾಸಕರಾಗಿ ಕೆಲಸ ಮಾಡಿದ ಯಾವುದೇ ಅನುಭವ ಇಲ್ಲದೇ ಕೇವಲ ಅಧಿಕಾರಕ್ಕಾಗಿ ಗೆದ್ದೆತ್ತಿನ ಬಾಲ ಹಿಡಿಯಲು ಎತ್ತಬೇಕೆಂದರತ್ತ ಓಡುವ ಮೂಲಕ ಈಗ ಆರ್.ಶಂಕರ್ ಅನರ್ಹತೆಯ ಖೆಡ್ಡಾಕ್ಕೆ ಬಿದ್ದು, ರಾಜಕೀಯ ಭವಿಷ್ಯಕ್ಕೆ ಕಲ್ಲು ಹಾಕಿಕೊಂಡಿದ್ದಾರೆ. ಸ್ಪೀಕರ್ ಅನರ್ಹತೆ ತೀರ್ಪು ಪ್ರಶ್ನಿಸಿ ಆರ್. ಶಂಕರ್ ಮುಂದಿನ ದಿನಗಳಲ್ಲಿ ನ್ಯಾಯಾಲಯದ ಮೊರೆ ಹೋದರೂ ಸದ್ಯಕ್ಕೆ ಅವರು ಈ ಜಂಜಡದಲ್ಲಿ ಸಿಲುಕಿ ಕೊಂಡಿರುವುದು ಅವರ ರಾಜಕೀಯ ಭವಿಷ್ಯಕ್ಕೆ ಕಪ್ಪುಚುಕ್ಕೆಯಾಗಿದೆ.
ಶಾಸಕ ಆರ್.ಶಂಕರ್ ಅನರ್ಹತೆಯಿಂದ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಚುರುಕುಗೊಂ ಡಿದೆ. ಅನರ್ಹತೆ ಕಾರಣದಿಂದ ಶಂಕರ್ ಈ ಅವಧಿಯಲ್ಲಿ ನಡೆಯುವ ಯಾವುದೇ ಚುನಾವಣೆಯಲ್ಲಿ ಭಾಗವಹಿಸದಂತಾದರೆ ಕ್ಷೇತ್ರದಲ್ಲಿ ರಾಜಕೀಯ ಬದಲಾವಣೆ ಏನಾಗಬಹುದು ಎಂಬುದು ಭಾರಿ ಕುತೂಹಲ ಕೆರಳಿಸಿದೆ.
ಶಂಕರ್ ನಡೆ ಹೀಗಿತ್ತು: ಆರ್.ಶಂಕರ್ ಮೂಲತ: ಬೆಂಗಳೂರಿನವರಾಗಿದ್ದು, ವೃತ್ತಿಯಲ್ಲಿ ಉದ್ಯಮಿ. 2004ರಲ್ಲಿ ಬೆಂಗಳೂರಿನಲ್ಲಿ ಬಿಬಿಎಂಪಿ ಸದಸ್ಯರಾಗಿ ರಾಜಕಾರಣಕ್ಕೆ ಬಂದವರು. ಬಳಿಕ ಉಪಮೇಯರ್ ಆಗಿಯೂ ಸೇವೆ ಸಲ್ಲಿಸಿದ್ದರು. 2012ರಲ್ಲಿ ತಮ್ಮ ಸಮಾಜದವರು (ಕುರುಬ) ಹೆಚ್ಚಿರುವ ರಾಣಿಬೆನ್ನೂರು ಕ್ಷೇತ್ರವನ್ನು ರಾಜ ಕಾರಣಕ್ಕೆ ಆಯ್ದುಕೊಂಡು, ಜಿಲ್ಲೆಗೆ ಕಾಲಿಟ್ಟರು.
ದ್ವಿತೀಯ ಬಾರಿ ಜಯ: 2013ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ನ ಹಿರಿಯ ಮುಖಂಡ ಕೆ.ಬಿ.ಕೋಳಿವಾಡ ಅವರಿಗೆ ಕಠಿಣ ಪೈಪೋಟಿಯೊಡ್ಡಿ, ಕೇವಲ 6,788 ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಕೆಪಿಜೆಪಿ ಪಕ್ಷದ ‘ಆಟೋ’ ಚಿಹ್ನೆಯೊಂದಿಗೆ ಸ್ಪರ್ಧಿಸಿದ ಆರ್. ಶಂಕರ್, ವಿಧಾನಸಭೆ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಅವರನ್ನು 4,338 ಮತಗಳಿಂದ ಸೋಲಿಸಿ ವಿಧಾನಸಭೆ ಪ್ರವೇಶಿಸಿದರು. ಈಗ ಶಾಸಕರಾಗಿ ಆಯ್ಕೆಯಾದ ಮೊದಲ ಅವಧಿಯ ಒಂದು ವರ್ಷದಲ್ಲಿಯೇ ಅನರ್ಹಗೊಂಡು ಚರ್ಚೆಗೆ ಗ್ರಾಸವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ