57 ವರ್ಷಗಳಲ್ಲೇ ಮೊದಲ ಬಾರಿಗೆ ಸುಳ್ಯಕ್ಕೆ ಮಂತ್ರಿ ಸ್ಥಾನದ ನಿರೀಕ್ಷೆ !

ಸಚಿವ ಸ್ಥಾನ ವಂಚಿತ ವಿಧಾನಸಭಾ ಕ್ಷೇತ್ರ

Team Udayavani, Jul 27, 2019, 5:08 AM IST

v-35

ಸುಳ್ಯ: ವಿಧಾನಸಭಾ ಕ್ಷೇತ್ರ ರಚನೆಯಾಗಿ 57 ವರ್ಷವಾದರೂ ಸುಳ್ಯದಿಂದ ಚುನಾಯಿತರಾದ ಶಾಸಕರಾರಿಗೂ ಇದುವರೆಗೆ ಮಂತ್ರಿಗಿರಿ ಲಭಿಸಿಲ್ಲ! ಪುತ್ತೂರು ವಿಧಾನಸಭಾ ಕ್ಷೇತ್ರದೊಂದಿಗೆ ಸೇರಿದ್ದ ಸುಳ್ಯ ತಾಲೂಕು ಪ್ರತ್ಯೇಕಗೊಂಡು ಹೊಸ ಕ್ಷೇತ್ರವಾದ ಅನಂತರ 14 ಬಾರಿ ಚುನಾವಣೆ ಎದುರಿಸಿದೆ. ಇಲ್ಲಿನ ಜನಪ್ರತಿನಿಧಿಗಳು ಆಡಳಿತ ಪಕ್ಷದ ಸದಸ್ಯರಾಗಿದ್ದರೂ ಅವರಿಗೆ ಗೂಟದ ಕಾರು ಏರುವ ಭಾಗ್ಯ ಸಿಕ್ಕಿಲ್ಲ. ಆದರೆ ಈ ಬಾರಿ ಬಿಜೆಪಿ ಸರಕಾರ ರಚನೆಗೊಂಡಲ್ಲಿ ಮೀಸಲು ಕ್ಷೇತ್ರವಾಗಿರುವ ಸುಳ್ಯವನ್ನು ಸತತ ಆರನೇ ಬಾರಿಗೆ ಪ್ರತಿನಿಧಿಸುತ್ತಿರುವ ಎಸ್‌. ಅಂಗಾರ ಅವರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಹೆಚ್ಚು ಅನ್ನುವ ಚರ್ಚೆ ಬಿರುಸು ಪಡೆದಿದೆ. ಎಸ್‌. ಅಂಗಾರ ಅವರು ಜಿಲ್ಲೆಯ ಹಿರಿಯ ಶಾಸಕರಾಗಿರುವುದೂ ಈ ವಾದಕ್ಕೆ ಪುಷ್ಟಿ ನೀಡಿದೆ.

ವಿಧಾನಸಭಾ ಕ್ಷೇತ್ರದ ವಿವರ
1952ರ ಪ್ರಥಮ ಮತ್ತು 1957ರದ್ವಿತೀಯ ಚುನಾವಣೆಗಳಲ್ಲಿ ಸುಳ್ಯವುಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸೇರಿತ್ತು. 1962ರಲ್ಲಿ ಪ್ರತ್ಯೇಕಗೊಂಡು ಹೊಸ ವಿಧಾನಸಭಾ ಕ್ಷೇತ್ರವಾಯಿತು. 1962ರ ಅನಂತರ 14 ಚುನಾವಣೆಗಳು ನಡೆದು 7 ಬಾರಿ ಬಿಜೆಪಿ, 5 ಬಾರಿ ಕಾಂಗ್ರೆಸ್‌, ತಲಾ ಒಂದು ಬಾರಿ ಸ್ವತಂತ್ರ ಪಕ್ಷ ಮತ್ತು ಜನತಾ ಪಕ್ಷದ ಅಭ್ಯರ್ಥಿ ಇಲ್ಲಿ ಗೆಲುವು ಸಾಧಿಸಿದ್ದಾರೆ.

ಸುಳ್ಯವು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಮೀಸಲು ಕ್ಷೇತ್ರವಾದುದು 1962ರಲ್ಲಿ. ಆ ಬಳಿಕ ಇಲ್ಲಿಂದಪ್ರಥಮವಾಗಿ ಸ್ವತಂತ್ರ ಪಕ್ಷದ ರಾಮಚಂದ್ರ ಗೆದ್ದರು. ಅನಂತರ ಪಿ.ಡಿ. ಬಂಗೇರ, ಎ. ರಾಮಚಂದ್ರ, ಬಾಕಿಲ ಹುಕ್ರಪ್ಪ, ಕೆ. ಕುಶಲ, ಅಂಗಾರ ಅವರಿಗೆಗೆಲುವು ಲಭಿಸಿತ್ತು. ಎಸ್‌ ಅಂಗಾರ ಗರಿಷ್ಠ ಅವಧಿಯಿಂದ ಶಾಸಕರಾಗಿದ್ದಾರೆ.

ಸುಳ್ಯ ತಾಲೂಕಿನವರಾಗಿ, ಬೇರೆಕ್ಷೇತ್ರದಿಂದ ಗೆದ್ದವರು ಮುಖ್ಯಮಂತ್ರಿ,ಕೇಂದ್ರ-ರಾಜ್ಯದಲ್ಲಿ ಸಚಿವರಾದ ಉದಾಹರಣೆಗಳಿವೆ. ಸುಳ್ಯ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವವರಿಗೆ ಆ ಭಾಗ್ಯ ಇನ್ನೂ ಸಿಕ್ಕಿಲ್ಲ. ಸುಳ್ಯವು ಪುತ್ತೂರು ವಿಧಾನಸಭಾ ಕ್ಷೇತ್ರದ ಭಾಗವಾಗಿದ್ದಾಗ 1952, 57 ಮತ್ತು 62ರಲ್ಲಿ ಬಾಳುಗೋಡು ನಿವಾಸಿ, ನ್ಯಾಯವಾದಿ ಕೂಜುಗೂಡು ವೆಂಕಟರಮಣ ಗೌಡ 3 ಅವಧಿಗೆ ಶಾಸಕರಾಗಿದ್ದರು. ಆಗ ಅವರಿಗೆ ನಿಜಲಿಂಗಪ್ಪ ಸರಕಾರದಲ್ಲಿ ಉಪ ಸಚಿವ ಸ್ಥಾನದಆಹ್ವಾನ ಬಂದಿತ್ತು. ಆದರೆ ಕ್ಯಾಬಿನೆಟ್ ಸ್ಥಾನ ನಿರೀಕ್ಷೆಯಲ್ಲಿದ್ದ ಗೌಡರು ಅವಕಾಶವನ್ನು ತಿರಸ್ಕರಿಸಿದ್ದರು. ಬಳಿಕ 2008ರ ಬಿಜೆಪಿ ಸರಕಾರದಲ್ಲಿ ಎಸ್‌.ಅಂಗಾರ ಅವರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ನಿರೀಕ್ಷೆಯಿದ್ದರೂ ಹುಸಿಯಾಗಿತ್ತು.

ಜಿಲ್ಲೆಯ ಏಕೈಕ ಮೀಸಲು ಕ್ಷೇತ್ರ

ಅವಿಭಜಿತ ಜಿಲ್ಲೆಯಲ್ಲಿ ಸುಳ್ಯ ಏಕೈಕ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ. 1987ರಲ್ಲಿ ಅಂಗಾರ ಮೊದಲ ಬಾರಿಗೆ ಸ್ಪರ್ಧಿಸಿ ಕಾಂಗ್ರೆಸ್‌ ಅಭ್ಯರ್ಥಿ ಕೆ. ಕುಶಲ ವಿರುದ್ಧ ಪರಾಜಿತರಾಗಿದ್ದರು. 1994ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ. ಕುಶಲ ವಿರುದ್ಧ ಗೆಲುವು ಪಡೆದಿದ್ದರು. 1999ರಲ್ಲಿ ಮತ್ತೆ ಕಾಂಗ್ರೆಸ್‌ನ ಕುಶಲರ ವಿರುದ್ಧ, 2004, 2008, 2013 ಮತ್ತು 2018ರಲ್ಲಿ ಕಾಂಗ್ರೆಸ್‌ನ ಡಾ| ರಘು ವಿರುದ್ಧ ಗೆಲುವು ದಾಖಲಿಸಿದ್ದಾರೆ.

ಸ್ಥಾನಮಾನ ನಿಶ್ಚಿತ

ಬಿಜೆಪಿ ಸರಕಾರ ರಚನೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಚಿವ ಸ್ಥಾನದಂತಹ ಉನ್ನತ ಜವಾಬ್ದಾರಿಯನ್ನು ಪಕ್ಷ ನೀಡುವ ವಿಶ್ವಾಸ ಇದೆ. ಜಿಲ್ಲೆಯ ಹಿರಿಯ ಶಾಸಕರಾಗಿ, ಸತತ ಆರು ಅವಧಿಯಿಂದ ಮೀಸಲು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
– ವೆಂಕಟ ವಳಲಂಬೆಅಧ್ಯಕ್ಷರು, ಬಿಜೆಪಿ ಮಂಡಲ ಸಮಿತಿ, ಸುಳ್ಯ

• ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.