ಪರಿಶೀಲನೆಯಿಲ್ಲದೆ ಮಸೂದೆಗಳ ಅಂಗೀಕಾರ
Team Udayavani, Jul 27, 2019, 5:02 AM IST
ಹೊಸದಿಲ್ಲಿ: ಸಂಸತ್ನಲ್ಲಿ ಪರಿಶೀಲನೆಯನ್ನೇ ನಡೆಸದೆ ಕ್ಷಿಪ್ರವಾಗಿ ಮಸೂದೆಗಳನ್ನು ಅಂಗೀಕರಿಸ ಲಾಗುತ್ತಿದೆ. ಇದು ಆತಂಕಕಾರಿ ಎಂದು ಆರೋಪಿಸಿ 17 ವಿಪಕ್ಷಗಳ ನಾಯಕರು ಶುಕ್ರವಾರ ರಾಜ್ಯಸಭೆ ಸಭಾಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ. ಸೂಕ್ತ ರೀತಿಯಲ್ಲಿ ಪರಿಶೀಲನೆ, ವಿಮರ್ಶೆ ನಡೆಯದೆ ಮಸೂದೆಗಳನ್ನು ಅಂಗೀಕರಿಸುವುದು ಸಂಪ್ರದಾಯ ಮೀರಿದಂತೆ ಆಗುತ್ತದೆ. ಸಭಾಪತಿ ಈ ಬಗ್ಗೆ ಮಧ್ಯಪ್ರವೇಶ ಮಾಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ. ಕಾಂಗ್ರೆಸ್, ಎಸ್ಪಿ, ಬಿಎಸ್ಪಿ, ಟಿಎಂಸಿ, ಆರ್ಜೆಡಿ, ಟಿಡಿಪಿ, ಸಿಪಿಐ, ಸಿಪಿಎಂ ನಾಯಕರು ಪತ್ರಕ್ಕೆ ಸಹಿ ಹಾಕಿದ್ದಾರೆ. ’14ನೇ ಲೋಕಸಭೆಯಲ್ಲಿ ಶೇ.60ರಷ್ಟು ಮಸೂದೆಗಳನ್ನು ಸಂಸತ್ನ ಸ್ಥಾಯಿ ಸಮಿತಿಗಳಿಗೆ ನೀಡಲಾಗಿತ್ತು. 15ನೇ ಲೋಕಸಭೆಯಲ್ಲಿ ಶೇ. 71ರಷ್ಟನ್ನು ಸಮಿತಿಗಳ ಅಧ್ಯಯನ, ಪರಾಮರ್ಶೆಗೆ ನೀಡಲಾಗಿತ್ತು. 16ನೇ ಲೋಕಸಭೆ ಅವಧಿಯಲ್ಲಿ ಶೇ.26ರಷ್ಟು ಮಸೂದೆಗಳನ್ನು ಮಾತ್ರ ಸಮಿತಿಗಳ ಪರಿಶೀಲನೆ ನೀಡಲಾಗಿತ್ತು. 17ನೇ ಲೋಕಸಭೆ ಅಂದರೆ ಹಾಲಿ ಅವಧಿಯಲ್ಲಿ ಇದುವರೆಗೆ ಕೇವಲ 14ನ್ನು ಮಾತ್ರ ಸಂಸತ್ ಪರಾಮರ್ಶೆಗೆ ಒಳಪಡಿಸಲಾಗಿದೆ ಅಥವಾ ಸ್ಥಾಯಿ ಸಮಿತಿಗಳಿಗೆ ನೀಡಲಾಗಿದೆ’ ಎಂದು ಪತ್ರದಲ್ಲಿ ನಾಯಕರು ಕಳವಳ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…