ಊಟಿ ಆ್ಯಪಲ್ ಬೆಳೆದು ರೈತ ಮಾದರಿ

ದೇಶಿಹಳ್ಳಿ ವೆಂಕಟರಾಮ್‌ ಆ್ಯಪಲ್ ತೋಟದಲ್ಲಿ ಕ್ಷೇತ್ರೋತ್ಸವ • ತೋಟಗಾರಿಗೆ ಇಲಾಖೆ, ರೈತರು ಭೇಟಿ

Team Udayavani, Jul 27, 2019, 10:09 AM IST

kolar-tdy-2

ಬಂಗಾರಪೇಟೆ ತಾಲೂಕಿನ ದೇಶಿಹಳ್ಳಿ ವೆಂಕಟರಾಮ್‌ ಬೆಳೆದಿರುವ ಆ್ಯಪಲ್ ಬೆರ್‌ ಬೆಳೆಯ ಕ್ಷೇತ್ರೋತ್ಸವದಲ್ಲಿ ಹಿರಿಯ ತೋಟಗಾರಿಕೆ ನಿರ್ದೇಶಕಿ ಮಂಜುಳಾ, ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕಿ ಎಂ.ಗಾಯತ್ರಿ ಹಾಜರಿದ್ದರು.

ಬಂಗಾರಪೇಟೆ: ಹಾಲು, ರೇಷ್ಮೆ, ತರಕಾರಿ ಬೆಳೆಗೆ ಸೀಮಿತವಾಗಿರುವ ಜಿಲ್ಲೆಯ ರೈತರು ಹೊಸ ಬೆಳೆ ತೆಗೆಯುವ ಸಾಹಸ ಮಾಡಿಲ್ಲ. ಮಾಡಿದರೂ ಯಶಸ್ಸು ಕಾಣುವಲ್ಲಿ ವಿಫ‌ಲರಾಗಿದ್ದಾರೆ. ಹೀಗಾಗಿ ಮಾರುಕಟ್ಟೆಯಲ್ಲಿ ಬೆಲೆ ಸಿಗದಿದ್ದರೂ, ಪರ್ಯಾಯ ಬೆಳೆ ಬೆಳೆದಿಲ್ಲ. ಈ ಮಧ್ಯೆ ತಾಲೂಕಿನ ರೈತ ಊಟಿ ಆ್ಯಪಲ್ ಎಂದೇ ಕರೆಯುವ ‘ಆ್ಯಪಲ್ ಬೆರ್‌’ ಬೆಳೆದು ತೋಟಗಾರಿಕೆ ಅಧಿಕಾರಿಗಳು, ಪ್ರಗತಿಪರ ರೈತರ ಗಮನ ಸೆಳೆದಿದ್ದಾರೆ.

ತಾಲೂಕಿನ ಪ್ರಗತಿಪರ ರೈತ ದೇಶಿಹಳ್ಳಿ ಎಂ.ವೆಂಕಟರಾಮ್‌ ನಿವೃತ್ತ ಬೆಮೆಲ್ ನೌಕರರಾಗಿದ್ದು, ತಮ್ಮ ತೋಟದಲ್ಲಿ ಬಾಳೆ ಸೇರಿ ಹಲವು ತೋಟಗಾರಿಕೆ ಬೆಳೆಗಳನ್ನು ಬೆಳೆಯುವು ದರಲ್ಲಿ ಸಫ‌ಲತೆ ಕಂಡಿದ್ದಾರೆ. ಕಡಿಮೆ ನೀರಿನಲ್ಲಿ ಆ್ಯಪಲ್ ಬೆರ್‌ ಬೆಳೆಯಲು ಎರಡೂವರೆ ವರ್ಷಗಳ ಹಿಂದೆ ನಿರ್ಧಾರ ಮಾಡಿ, ಬಳಿಕ ನಾಟಿ ಮಾಡಿ ಪ್ರಸ್ತುತ ಫ‌ಸಲು ಕೈಸೇರುವ ಮಟ್ಟಕ್ಕೆ ಬಂದಿದೆ.

ಇದೀಗ ತೋಟಗಾರಿಕೆ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಪ್ರಗತಿಪರ ರೈತರು ಆ್ಯಪಲ್ ಬೆರ್‌ ಹಣ್ಣಿನ ಬೆಳೆಯ ಕ್ಷೇತ್ರೋತ್ಸವ ನಡೆಸಿದರು.

ಆ್ಯಪಲ್ ಬೆರ್‌ ಬೆಳೆ ತೆಗೆದ ಮೊದಲ ರೈತ: ಜಿಲ್ಲೆಯಲ್ಲಿ ಆ್ಯಪಲ್ ಬೆರ್‌ ಈವರೆಗೂ ರೈತರು ಬೆಳೆದಿಲ್ಲ. ಈಗ ವೆಂಕಟರಾಮ್‌ ಮೊದಲ ಬಾರಿಗೆ ಬೆಳೆದಿದ್ದಾರೆ. ಉಷ್ಣ ವಲಯದಲ್ಲಿ ಬೆಳೆಯುವ ಈ ಹಣ್ಣನ್ನು ಜಿಲ್ಲೆಯಲ್ಲಿ ಬೆಳೆಯಲು ಸೂಕ್ತ. ಇದಕ್ಕೆ ನೀರಿನ ಅವಶ್ಯಕತೆ ಕಡಿಮೆ ಇದ್ದು, 20 ವರ್ಷ ಫ‌ಸಲು ಕೊಡುತ್ತದೆ. ವರ್ಷಕ್ಕೆ ಬೆಳೆ ಕೈ ಸೇರಲಿದೆ. ಮೊದಲನೇ ವರ್ಷ ಒಂದು ಗಿಡದಿಂದ 20 ಕೆ.ಜಿ., ಎರಡನೇ ವರ್ಷ 20 ರಿಂದ 30 ಕೆ.ಜಿ., ಮೂರನೇ ವರ್ಷ 100 ರಿಂದ 150 ಕೆ.ಜಿ. ಹಣ್ಣು ಸಿಗುತ್ತದೆ. ಒಂದು ಹಣ್ಣು 20 ರಿಂದ 50 ಗ್ರಾಂ ತೂಗುತ್ತದೆ. 15 ರಿಂದ 20 ಅಡಿ ಎತ್ತರ, 30 ಅಡಿ ಅಗಲದ ಮರವಾಗುತ್ತದೆ.

ಸಹಾಯಧನ: ಎರಡು ಎಕರೆ ಜಮೀನಿನಲ್ಲಿ ಈ ಬೆಳೆಗೆ ತೋಟಗಾರಿಕೆ ಇಲಾಖೆಯಿಂದ 44 ಸಾವಿರ ರೂ. ಸಹಾಯಧನ ನೀಡಲಾಗಿದೆ. ಹಾಪ್‌ಕಾಮ್ಸ್‌, ರಿಲಿಯನ್ಸ್‌, ಹೈದ್ರಾಬಾದ್‌ ಮೂಲದ ಟ್ರೆಂಡ್‌ ಕಂಪನಿಗಳ ಜೊತೆ ಒಪ್ಪಂದ ಮಾಡಿ ಮಾರ್ಕೆಟಿಂಗ್‌ ವ್ಯವಸ್ಥೆ ಕಲ್ಪಿಸಲು ಅನುಕೂಲ ಮಾಡಿಕೊಡಲಾಗುತ್ತದೆ ಎಂದು ತೋಟಗಾರಿಕೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ನೀರಿನ ಬಗ್ಗೆ ಸಾಕ್ಷರತೆ: ಜಲಶಕ್ತಿ ಅಭಿಯಾನದ ಮೂಲ ಉದ್ದೇಶ ಜನರಲ್ಲಿ ನೀರಿನ ಬಗ್ಗೆ ಸಾಕ್ಷರತೆ ಮೂಡಿಸುವುದು, ನೀರಿನ ಮಹತ್ವ, ಮೌಲ್ಯ ತಿಳಿಸುವುದಾಗಿದೆ. ಕೆರೆಗಳ ಸಂರಕ್ಷಣೆ ಆಗಬೇಕು. ಗೋಕುಂಟೆ, ಕಲ್ಯಾಣಿ ಸ್ವಚ್ಛಗೊಳಿಸಿ ರಕ್ಷಣೆ ಮಾಡಬೇಕು.

ಒಡ್ಡುಗಳನ್ನು ನಿರ್ಮಾಣ ಮಾಡಬೇಕು. ಆಗ ಮಾತ್ರ ಮುಂದಿನ ಪೀಳಿಗೆಗೆ ನೀರು ಸಿಗುತ್ತದೆ. ಹಾಗಾಗಿ ಅರಣ್ಯ ರಕ್ಷಣೆ ಮಾಡಿದಾಗ ಮಾತ್ರ ಕಾಲಕಾಲಕ್ಕೆ ಮಳೆ ಆಗುತ್ತದೆ. ಪ್ರತಿಯೊಬ್ಬರು ನೀರಿಗೆ ಮಹತ್ವ ಕೊಡಬೇಕಾಗಿದೆ ಎಂದು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಮಮೂರ್ತಿ ತಿಳಿಸಿದ್ದಾರೆ.

 

● ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.