ಗ್ರಾಮಗಳಿಗೆ ಸೌಲಭ್ಯ ಒದಗಿಸಿ: ಕೃಷ್ಣನಾಯ್ಕ
ಚಿತ್ರದುರ್ಗ: ಬೆಳಗಟ್ಟ ಗ್ರಾಪಂ ಅಧ್ಯಕ್ಷರು-ಸದಸ್ಯರೊಂದಿಗೆ ತಾಪಂ ಇಒ ಕೃಷ್ಣನಾಯ್ಕ ಸಭೆ ನಡೆಸಿದರು.
Team Udayavani, Jul 27, 2019, 4:46 PM IST
ಚಿತ್ರದುರ್ಗ: ಬೆಳಗಟ್ಟ ಗ್ರಾಪಂ ಅಧ್ಯಕ್ಷರು-ಸದಸ್ಯರೊಂದಿಗೆ ತಾಪಂ ಇಒ ಕೃಷ್ಣನಾಯ್ಕ ಸಭೆ ನಡೆಸಿದರು.
ಚಿತ್ರದುರ್ಗ: ಗ್ರಾಮಗಳಿಗೆ ಮೂಲ ಸೌಲಭ್ಯ ಒದಗಿಸಿ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು ಎಂದು ತಾಪಂ ಇಒ ಕೃಷ್ಣನಾಯ್ಕ ಕಾರ್ಯದರ್ಶಿ ಮತ್ತು ಪಿಡಿಒಗಳಿಗೆ ಸೂಚಿಸಿದರು.
ತಾಲೂಕಿನ ಬೆಳಗಟ್ಟ ಗ್ರಾಪಂ ಕಾರ್ಯಾಲಯದಲ್ಲಿ ಶುಕ್ರವಾರ ಅಧ್ಯಕ್ಷರು, ಸದಸ್ಯರ ಸಭೆ ನಡೆಸಿ ಮಾತನಾಡಿದ ಅವರು, ಸೋಮವಾರದೊಳಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.
2015ರಿಂದ ಇಲ್ಲಿಯ ತನಕ ಹದಿನಾಲ್ಕನೇ ಹಣಕಾಸು ಯೋಜನೆಯಡಿ ಕ್ರಿಯಾ ಯೋಜನೆ ತಯಾರಿಸಿದ್ದು, ಯಾವ ಸದಸ್ಯರ ಗಮನಕ್ಕೂ ತಂದಿಲ್ಲ. ಜಿಪಿಆರ್ಎಸ್ ಕ್ಯಾಮೆರಾದಲ್ಲಿ ನೀರು ಪೂರೈಸುವ ಟ್ಯಾಂಕರ್ ಫೋಟೋ ತೆಗೆಯಬೇಕೆಂಬ ನಿಯಮವಿದೆ. ಒಂದೇ ಶೌಚಾಲಯಕ್ಕೆ ಮೂರು ಬಾರಿ ದಾಖಲೆ ನೀಡಿ ಹಣ ಲಪಟಾಯಿಸಲಾಗಿದೆ. ನರೇಗಾ ಯೋಜನೆಯಡಿ ಬೆಳಗಟ್ಟದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಾಂಪೌಂಡ್ ನಿರ್ಮಿಸಿರುವುದಾಗಿ ಹಣ ದುರುಪಯೋಗ ನಡೆಸಲಾಗಿದೆ. ಟ್ಯಾಂಕರ್ ಮಾಫಿಯಾದವರು ನೀರಿಗೆ ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ. ಯಾರ ಅನುಮತಿ ಪಡೆದು ಟ್ಯಾಂಕರ್ ನೀರು ಪೂರೈಸಿದ್ದೀರಿ ಎಂದು ಸದಸ್ಯ ವೆಂಕಟೇಶ್ರೆಡ್ಡಿ ತಾಪಂ ಕಾರ್ಯನಿರ್ವಹಣಾಧಿಕಾರಿ ಗಮನಕ್ಕೆ ತಂದಾಗ ಇಂಜಿನಿಯರ್ ಅವರನ್ನು ಕಳಿಸಿ ತಪಾಸಣೆ ಮಾಡಿಸಿ ತಪ್ಪಿತಸ್ಥರು ಕಂಡು ಬಂದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಗ್ರಾಮ ಪಂಚಾಯಿತಿಯಲ್ಲಿ ಪಾರದರ್ಶಕವಾಗಿ ಕೆಲಸ ನಡೆಯಬೇಕಾದರೆ ಅಧ್ಯಕ್ಷರು, ಸದಸ್ಯರು, ಪಿಡಿಒ ಹಾಗೂ ಕಾರ್ಯದರ್ಶಿಗಳು ಪರಸ್ಪರ ಸಹಕಾರದಿಂದ ಅಭಿವೃದ್ಧಿಗೆ ಕೈ ಜೋಡಿಸಿ ಎಂದು ತಾಕೀತು ಮಾಡಿದರು. ಬೆಳಗಟ್ಟ ಗ್ರಾಪಂ ಅಧ್ಯಕ್ಷೆ ಚಿತ್ರಮ್ಮ, ಸದಸ್ಯರಾದ ಬೋರಣ್ಣ, ಕುರಿ ನಾಗರಾಜ್, ಹಾಯ್ಕಲ್ ಸತ್ಯನಾರಾಯಣರೆಡ್ಡಿ ಸೇರಿದಂತೆ ಇತರು ಸದಸ್ಯರು ಭಾಗವಹಿಸಿದ್ದರು. ಬೆಳಗಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆ ಮೊದಲು ಬಗೆಹರಿಸುವಂತೆ ಕೆಲವು ಮಹಿಳೆಯರು ಖಾಲಿ ಕೊಡಗಳೊಂದಿಗೆ ಸಭೆಗೆ ಪ್ರವೇಶಿಸಿ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ