ಬೆಳಗಾವಿಯವರು ಡಿಸಿಎಂ ಅಲ್ಲ, ಸಿಎಂ ಆಗ್ತಾರೆ: ಡಾ|ಕೋರೆ
Team Udayavani, Jul 28, 2019, 5:03 AM IST
ಬೆಳಗಾವಿ: ಅವಕಾಶ ಸಿಕ್ಕರೆ ಬೆಳಗಾವಿಯ ರಾಜಕಾರಣಿಗಳು ಮುಖ್ಯಮಂತ್ರಿ ಹುದ್ದೆಗೆ ಏರುತ್ತಾರೆಯೇ ಹೊರತು ನಮಗೆ ಡಿಸಿಎಂ ಪಟ್ಟ ಬೇಡ ಎಂದು ರಾಜ್ಯಸಭಾ ಸದಸ್ಯ ಡಾ|ಪ್ರಭಾಕರ ಕೋರೆ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಲ್ಲಿ ಸಿಎಂ ಆಗುವಂತಹ ನಾಯಕರೂ ಇದ್ದಾರೆ. ಆದರೆ ಇದುವರೆಗೆ ಯಾರೊಬ್ಬರೂ ಮುಖ್ಯಮಂತ್ರಿ ಆಗಿಲ್ಲ ಎಂಬ ಬೇಸರವಿದೆ. ಉಪಮುಖ್ಯಮಂತ್ರಿ ಪಟ್ಟಕ್ಕೆ ಆಸೆ ಪಡುವ ರಾಜಕಾರಣಿಗಳು ಇಲ್ಲಿಲ್ಲ ಎಂದರು. ಬೆಳಗಾವಿ ರಾಜಕಾರಣಿಗಳಿಗೆ ಸರ್ಕಾರ ರಚನೆ ಮಾಡುವುದು ಗೊತ್ತು. ಅದರ ಜತೆಗೆ ಬೀಳಿಸುವುದೂ ಗೊತ್ತು. ಮೈತ್ರಿ ಸರ್ಕಾರ ಅಷ್ಟೇ ಏಕೆ ನಿಜಲಿಂಗಪ್ಪ ಕಾಲದಿಂದಲೂ ರಾಜ್ಯ ರಾಜಕಾರಣದಲ್ಲಿ ಬೆಳಗಾವಿಯ ಪ್ರಭಾವ ಇದ್ದೇ ಇದೆ ಎಂದು ಹೇಳಿದರು.
ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ಮೊದಲಿಂದಲೂ ತನ್ನದೇ ಆದ ಮಹತ್ವ ಹೊಂದಿದೆ. ರಾಜ್ಯದ ಜನರ ನಿರೀಕ್ಷೆಯಂತೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಅವರ ಸಚಿವ ಸಂಪುಟದಲ್ಲಿ ಬೆಳಗಾವಿ ಜಿಲ್ಲೆಗೆ ನಾಲ್ಕು ಏಕೆ ಇನ್ನೊಂದು ಸಚಿವ ಸ್ಥಾನ ಕೊಟ್ಟರೂ ನಮಗೆ ಸಂತೋಷ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್