ಮಹಾ’ ಮಳೆಗೆ ಹರಿಪ್ರಿಯಾ ಎಕ್ಸ್ಪ್ರೆಸ್ ರದ್ದು
Team Udayavani, Jul 28, 2019, 5:19 AM IST
ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಲ್ಲಿ ಮಹಾಲಕ್ಷ್ಮೀ ಎಕ್ಸ್ಪ್ರೆಸ್ ರೈಲು ಕೆಟ್ಟು ನಿಂತಿದ್ದರಿಂದ ಶನಿವಾರ ಕೊಲ್ಲಾಪುರದಿಂದ ಹೊರಡುವ ಹಾಗೂ ಶನಿವಾರ ರಾತ್ರಿ ತಿರುಪತಿಯಿಂದ ಹೊರಡುವ ಹರಿಪ್ರಿಯಾ ಎಕ್ಸ್ಪ್ರೆಸ್ನ್ನು ರದ್ದುಗೊಳಿಸಿದ್ದು, ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಯಿತು. ಶನಿವಾರ ಬೆಳಗ್ಗೆ ಕೊಲ್ಲಾಪುರದಿಂದ ತಿರುಪತಿಗೆ ಹೊರಡಬೇಕಿದ್ದ (17416) ರೈಲು ಬೆಳಗಾವಿಗೆ ಮಧ್ಯಾಹ್ನ 3:50ಕ್ಕೆ ಬರಬೇಕಿತ್ತು. ಶನಿವಾರ ರಾತ್ರಿ ತಿರುಪತಿಯಿಂದ ಬಿಡಬೇಕಿದ್ದ (17415) ರೈಲು ಬೆಳಗಾವಿಗೆ ಭಾನುವಾರ ಬೆಳಗ್ಗೆ 11:45ಕ್ಕೆ ಬರುತ್ತಿತ್ತು. ಆದರೆ ಈ ಎರಡೂ ರೈಲುಗಳನ್ನು ಒಂದು ದಿನದ ಮಟ್ಟಿಗೆ ರೈಲ್ವೆ ಇಲಾಖೆ ರದ್ದುಗೊಳಿಸಿದೆ. ಇದರಿಂದಾಗಿ ಕೊಲ್ಲಾಪುರದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಯಿತು. ಕೊಲ್ಲಾಪುರದಿಂದ ಮಿರಜ್ ಮಾರ್ಗವಾಗಿ ಕುಡಚಿ, ಉಗಾರ, ರಾಯಬಾಗ, ಘಟಪ್ರಭಾ, ಬೆಳಗಾವಿ, ಖಾನಾಪುರ, ಅಳ್ನಾವರ, ಲೋಂಡಾ, ಧಾರವಾಡ, ಹುಬ್ಬಳ್ಳಿವರೆಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಸಮಸ್ಯೆ ಉಂಟಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
MUST WATCH
ಹೊಸ ಸೇರ್ಪಡೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ