ಸ್ವಚ್ಛ ಗ್ರಾಮದತ್ತ ಹಳ್ಳಿಗರ ಮಾದರಿ ಹೆಜ್ಜೆ

•ಅಂಚಟಗೇರಿ, ಅಗ್ರಹಾರ ತಿಮ್ಮಸಾಗರದಲ್ಲಿ ಅನುಷ್ಠಾನ•ಆ.15ರಿಂದ ಮನೆ ಮನೆಯಿಂದ ಕಸ ಸಂಗ್ರಹ

Team Udayavani, Jul 28, 2019, 9:39 AM IST

hubali-tdy-1

ಹುಬ್ಬಳ್ಳಿ: ಮನೆಗಳಿಂದ ಕಸ ಸಂಗ್ರಹಣೆಗೆ ಬೇಕಾಗಿರುವ ಪರಿಕರಗಳೊಂದಿಗೆ ಗ್ರಾಪಂ ಅಧ್ಯಕ್ಷ, ಪದಾಧಿಕಾರಿಗಳು.

ಹುಬ್ಬಳ್ಳಿ: ಪ್ಲಾಸ್ಟಿಕ್‌ ಮುಕ್ತ ಗ್ರಾಮವಾಗಿಸಲು ಮಹತ್ವದ ಹೆಜ್ಜೆ ಇರಿಸಿದ್ದ ತಾಲೂಕಿನ ಅಂಚಟಗೇರಿ ಗ್ರಾಪಂ, ಇದೀಗ ಸ್ವಚ್ಛತೆ ದೃಷ್ಟಿಯಿಂದ ನಗರಗಳಿಗೆ ಮಾದರಿಯಾಗುವ ನಿಟ್ಟಿನಲ್ಲಿ ಎರಡು ಗ್ರಾಮಗಳ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹ ಕಾರ್ಯಕ್ಕೆ ಮುಂದಾಗಿದೆ.

ಮನೆಯಲ್ಲಿಯೇ ತ್ಯಾಜ್ಯ ವಿಂಗಡಣೆ ಮಾಡಿ, ಸಂಗ್ರಹಿಸಿ ಕಾಂಪೋಸ್ಟ್‌ ಇನ್ನಿತರ ಉತ್ಪನ್ನಗಳ ಮೂಲಕ ಮರುಬಳಕೆ ಯತ್ನಕ್ಕೆ ಗ್ರಾಪಂ ಮುಂದಾಗಿದೆ. ಗ್ರಾಮವನ್ನು ಪ್ಲಾಸ್ಟಿಕ್‌ ಮುಕ್ತವಾಗಿಸಲು ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್‌ ಸಂಗ್ರಹ ಯೋಜನೆ ಕೈಗೊಂಡಿರುವ ಗ್ರಾಪಂ ಅಧ್ಯಕ್ಷ ಬಸವರಾಜ ಬಿಡ್ನಾಳ ಇದೀಗ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ಹಲವರ ಸಹಕಾರ: ಅಂಚಟಗೇರಿ ಹಾಗೂ ಅಗ್ರಹಾರ ತಿಮ್ಮಸಾಗರದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘಗಳ ಸದಸ್ಯೆಯರು ಹಾಗೂ ಗ್ರಾಪಂ ಸದಸ್ಯರ ನೇತೃತ್ವದ ತಂಡಗಳನ್ನು ರಚಿಸಲಾಗಿದೆ. ತನ್ಮೂಲಕ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಗ್ರಾಪಂ ಮುಂದಾಗಿದೆ. ಪೂರ್ವಭಾವಿ ಸಭೆಗಳನ್ನೂ ನಡೆಸಿ ಯೋಜನಾನುಷ್ಠಾನಕ್ಕೆ ಸಿದ್ಧತೆ ಭರದಿಂದ ಸಾಗಿದೆ.

ಸ್ವಾತಂತ್ರ್ಯ ದಿನದ ಮುಹೂರ್ತ ಆ. 15ರಿಂದ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ, ಅಗ್ರಹಾರ ತಿಮ್ಮಸಾಗರ ಗ್ರಾಮಗಳಲ್ಲಿ ಮನೆಗಳಿಂದ ಹಸಿ ಕಸ ಹಾಗೂ ಒಣ ಕಸ ಸಂಗ್ರಹಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಗ್ರಾಪಂ ಮಾಡುತ್ತಿದೆ. ಡಪ್ಪಿಂಗ್‌ ಯಾರ್ಡ್‌ ನಿರ್ಮಾಣ, ಮನೆ ಮನೆಗೆ ಡಸ್ಟ್‌ ಬಿನ್‌ ವಿತರಣೆ, ಗ್ರಾಮದ ಎಲ್ಲೆಡೆ ಕಸ ವಿಲೇವಾರಿಗೆ ಡಸ್ಟ್‌ ಬಿನ್‌ ಅಳವಡಿಕೆ, ಮನೆಗಳಿಂದ ಕಸ ಸಂಗ್ರಹಣೆಗೆ ವಾಹನ ವ್ಯವಸ್ಥೆ ಸೇರಿದಂತೆ ಎಲ್ಲ ತಯಾರಿ ಮಾಡಲಾಗುತ್ತಿದೆ.

ಕಸ ಎಂದರೆ ಎಲ್ಲರಿಗೂ ತಾತ್ಸಾರ ಭಾವನೆ ಇದೆ. ಆದರೆ, ಅದು ಸಂಪನ್ಮೂಲವಾಗಿದ್ದು ಸದ್ಬಳಕೆ ಅವಶ್ಯ. ಗ್ರಾಮಸ್ಥರು ಗ್ರಾಪಂ ಜತೆ ಸಹಕರಿಸಿ ಕಸ ಸಂಗ್ರಹಣೆಗೆ ಆದ್ಯತೆ ನೀಡಬೇಕು. ಗ್ರಾಮದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಅವರಿಗೆ ಗ್ರಾಪಂ ಹಾಗೂ ಗ್ರಾಮದ ಜನರ ಪರವಾಗಿ ಅಭಿನಂದನೆ.•ಬಸವರಾಜ ಬಿಡ್ನಾಳ, ಗ್ರಾಪಂ ಅಧ್ಯಕ್ಷ

ಮನೆ ಮನೆಯಿಂದ ಕಸ ಸಂಗ್ರಹಣೆಗೆ ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಡಂಪಿಂಗ್‌ ಯಾರ್ಡ್‌ ನಿರ್ಮಾಣ ಕಾರ್ಯ ನಡೆದಿದೆ. ಆರಂಭದಲ್ಲಿ ತೊಂದರೆಯಾದರೂ ಪ್ಲಾಸ್ಟಿಕ್‌ ನಿರ್ಮೂಲನೆಯಂತೆ ಮನೆ ಮನೆ ಕಸ ಸಂಗ್ರಹದಲ್ಲಿಯೂ ಯಶಸ್ಸು ಸಾಧಿಸುತ್ತೇವೆ.•ಎಚ್.ಎಫ್‌. ಕಲಹಾಳ, ಪಿಡಿಒ

ಈ ವರ್ಷ 25 ಗ್ರಾಪಂ ಗುರಿ:ಸರಕಾರದ ನಿರ್ದೇಶನದಂತೆ ಈ ವರ್ಷ 25 ಗ್ರಾಪಂಗಳಲ್ಲಿ ಮನೆಗಳಿಂದ ತ್ಯಾಜ್ಯ ಸಂಗ್ರಹ ಗುರಿ ನೀಡಲಾಗಿದೆ. ಅದರಂತೆ ಈಗಾಗಲೇ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದ್ದು, ಅಂಚಟಗೇರಿ ಗ್ರಾಪಂ ಕೂಡಾ ಒಂದು. ಮುಂದಿನ ವರ್ಷ 50 ಗ್ರಾಪಂಗಳಾಗಬೇಕು ಎನ್ನುವ ನಿಟ್ಟಿನಲ್ಲಿ ಸರಕಾರ ಆದೇಶ ನೀಡಿದೆ ಎಂದು ಜಿಪಂ ಸಿಇಒ ಡಾ| ಬಿ.ಸಿ. ಸತೀಶ ‘ಉದಯವಾಣಿ’ಗೆ ತಿಳಿಸಿದರು. ಮಲೆನಾಡು ಜಿಲ್ಲೆಗಳಿಗೆ ಹೋಲಿಸಿದರೆ ನಾವು ಸ್ವಲ್ಪ ಹಿಂದೆ ಇದ್ದು, ಈಗಾಗಲೇ ಮಲೆನಾಡು ಗ್ರಾಪಂಗಳಲ್ಲಿ ಚಾಲನೆ ನೀಡಿ ಕಾರ್ಯಾರಂಭ ಮಾಡಲಾಗಿದೆ. ಈ ವರ್ಷದ ಗುರಿ 25 ಇಟ್ಟುಕೊಳ್ಳಲಾಗಿದೆ. ಸರಕಾರಕ್ಕೆ 7 ಗ್ರಾಪಂಗಳ ವರದಿ ಸಲ್ಲಿಸಿದ್ದು, ಅದರಲ್ಲಿ ಸದ್ಯ 3 ಗ್ರಾಪಂಗಳಿಗೆ ಅನುಮೋದನೆ ಸಿಕ್ಕಿದೆ. ಅಂಚಟಗೇರಿ ಗ್ರಾಪಂನಲ್ಲಿ ಆ. 15ರಿಂದ ಮನೆ ಮನೆ ಕಸ ಸಂಗ್ರಹಕ್ಕೆ ಚಾಲನೆ ನೀಡಲಿದ್ದಾರೆ ಮಾಹಿತಿ ನೀಡಿದರು.

 

•ಬಸವರಾಜ ಹೂಗಾರ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.