ನಗರ ಮಹಾಯೋಜನೆ: ಸರಕಾರದ ಅನುಮೋದನೆ ಬಾಕಿ

ಸಾಧಕ-ಬಾಧಕ ಚರ್ಚೆ ಬಳಿಕ ಕರಡು ಪ್ರತಿ ಸಿದ್ಧ

Team Udayavani, Jul 29, 2019, 5:00 AM IST

PUTTUR

ಸುಳ್ಯ: ನಗರ ಮಹಾಯೋಜನೆ ಕರಡು ಪ್ರತಿ ಸರಕಾರಕ್ಕೆ ಸಲ್ಲಿಸಲಾಗಿದ್ದು ಅಲ್ಲಿ ಅನುಮೋದನೆಗಾಗಿ ಕಾಯುತ್ತಿದೆ. ಈ ಹಿಂದಿನ ಆಡಳಿತ ಅವಧಿಯಲ್ಲಿ ಸಭೆ ನಡೆದು, ಸಭೆಯ ಸಲಹೆ ಆಧರಿಸಿ ಪರಿಷ್ಕೃತ ನಗರ ಮಹಾ ಯೋಜನೆ ಕರಡುಪ್ರತಿಯನ್ನು ಸರಕಾರಕ್ಕೆ ಕಳುಹಿ ಸಲಾಗಿತ್ತು. ಅಲ್ಲಿಂದ ಅನುಮೋದನೆ ಸಿಕ್ಕಿದ ಬಳಿಕ ಮುಂದಿನ ಪ್ರಕ್ರಿಯೆ ನಡೆಯಲಿದೆ.

ನಗರ ಮಹಾಯೋಜನೆ
ಹಿಂದಿನ ಆಡಳಿತ ಅವಧಿಯಲ್ಲಿ ನ.ಪಂ. ಸದಸ್ಯರಿಗೆ ಮೊದಲು ಸೂಡಾ ಅಧಿಕಾರಿಗಳು ನಗರ ಮಹಾಯೋಜನೆ ನೀಲ ನಕಾಶೆಯ ಬಗ್ಗೆ ಮಾಹಿತಿ ನೀಡಿ ಅಭಿಪ್ರಾಯ ಸಂಗ್ರಹಿಸಿದ್ದರು. ಆಗ ಹಲವು ಅಂಶಗಳ ಬದಲಾವಣೆಗೆ ಅಭಿಪ್ರಾಯ ವ್ಯಕ್ತವಾಗಿತ್ತು. ಸಾಮಾನ್ಯ ಸಭೆಯಲ್ಲಿಯು ವಿಷಯ ಪ್ರಸ್ತಾವವಾಗಿತ್ತು. ಮಹಾಯೋಜನೆ ಅನುಷ್ಠಾನ ಸಾಧಕ-ಬಾಧಕಗಳ ಬಗ್ಗೆ ಸಮಗ್ರ ಚರ್ಚೆ ನಡೆಸಬೇಕು ಎಂದು ಸದಸ್ಯರು ಆಗ್ರಹಿಸಿದ್ದರು. ಸದಸ್ಯರ ಸಲಹೆಯಂತೆ ಹಲವು ತಿದ್ದುಪಡಿಗಳೊಂದಿಗೆ ಕರಡು ಪ್ರತಿ ಅನುಮೋದನೆಗೆ ಸರಕಾರಕ್ಕೆ ಸಲ್ಲಿಸಲಾಗಿತ್ತು.

ಮುಂದೇನು?
ಸರಕಾರದಿಂದ ಒಪ್ಪಿಗೆ ಸಿಕ್ಕಿದ ಬಳಿಕ ಕರಡು ಪ್ರತಿಯನ್ನು ಸಾಮಾನ್ಯ ಸಭೆಯಲ್ಲಿ ಇಟ್ಟು ಅನುಮೋದನೆ ಪಡೆದುಕೊಳ್ಳಬೇಕು. ಬಳಿಕ 60 ದಿನಗಳ ಕಾಲ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಈ ಸಂದರ್ಭ ಜನರ ಅಥವಾ ಜನಪ್ರತಿ ನಿಧಿಗಳು ಪ್ರಶ್ನೆಗಳಿಗೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು. ಮಾಸ್ಟರ್‌ ಪ್ಲ್ಯಾನ್‌ ಅಂತಿಮ ಗೊಳಿಸಲು ಸಾರ್ವಜನಿಕರ ಅಭಿಪ್ರಾಯವೇ ಆಧಾರವಾಗಿರುತ್ತದೆ. 60ನೇ ದಿನ ಸಲಹೆ, ಆಕ್ಷೇಪಗಳನ್ನು ಪರಿಗಣಿಸಿ ಅಂತಿಮ ಪ್ರತಿ ಯನ್ನು ಸರಕಾರಕ್ಕೆ ಕಳುಹಿಸಲಾಗುತ್ತದೆ. ಬಳಿಕ ಟೌನ್‌ ಪ್ಲ್ಯಾನಿಂಗ್‌ ಅನುಷ್ಠಾನಕ್ಕೆ ಬರುತ್ತದೆ.

ಅನುಷ್ಠಾನಕ್ಕೆ ಪರ- ವಿರೋಧ
ಮಹಾಯೋಜನೆ ಜಾರಿಗೆ ಪರ ವಿರೋಧ ಅಭಿಪ್ರಾಯಗಳು ಇವೆ. ನಗರ ಪ್ಲ್ಯಾನಿಂಗ್‌ ಇಲ್ಲದಿರುವ ಕಾರಣ 33 ಕೆ.ವಿ., 110 ಕೆ.ವಿ. ಮೊದಲಾದ ಯೋಜನೆ ಅನುಷ್ಠಾನಕ್ಕೆ ಅಡ್ಡಿ ಆಗಬಹುದು. ಒಳಚರಂಡಿ ವೈಫಲ್ಯಕ್ಕೂ ಅದೇ ಕಾರಣ. ವಲಯ ಗುರುತಿಸದೆ ಇದ್ದಲ್ಲಿ ಎಲ್ಲೆಂದರಲ್ಲಿ ವಾಣಿಜ್ಯ, ಗೃಹ, ಕೈಗಾರಿಕೆ ಸ್ಥಾಪಿಸಿ ಭವಿಷ್ಯದ ಅಭಿವೃದ್ಧಿ ಕಾರ್ಯಕ್ಕೆ ತೊಂದರೆ ಆಗಲಿದೆ ಅನ್ನುವುದು ಅಧಿಕಾರಿಗಳು ಅಭಿಪ್ರಾಯ.

ಮಾಸ್ಟರ್‌ ಪ್ಲ್ಯಾನ್‌ ಅಂಗೀಕಾರವಾದಲ್ಲಿ ನಿರ್ದಿಷ್ಟ ರಸ್ತೆಗಳ ಉದ್ದೇಶಿತ ವಿಸ್ತೀರ್ಣದ ಒಳಗೆ ಹೊಸ ಕಟ್ಟಡ, ಕಟ್ಟಡ ವಿಸ್ತರಣೆ, ಭೂ ಪರಿವರ್ತನೆಗೆ ಸೂಡಾ ಅನುಮತಿ ನೀಡದು. ಮಾಸ್ಟರ್‌ ಪ್ಲ್ಯಾನ್‌ ಅನ್ವಯದಂತೆ ಕಟ್ಟಡ ನಿರ್ಮಾಣ, ಅಭಿವೃದ್ಧಿ ಕಾಮಗಾರಿ ಆಗಬೇಕು. ನಿರ್ದಿಷ್ಟ ಯೋಜನೆ ಕಾರ್ಯಗತಕ್ಕೆ ನಿರ್ದಿಷ್ಟ ವಲಯ (ಪ್ರದೇಶ) ಎಂದು ಗುರುತಿಸಿದ್ದಲ್ಲಿ ಭವಿಷ್ಯದಲ್ಲಿ ಮನೆ, ವಾಣಿಜ್ಯ ಕಟ್ಟಡ ಕಟ್ಟುವಾಗ ಅಥವಾ ಇತರೆ ಯೋಜನೆ ಅನುಷ್ಠಾನಿಸುವಾಗ ಅಡ್ಡಿ ಉಂಟಾಗದು. ಪ್ರಸ್ತುತ ಎಲ್ಲೆಲ್ಲಿ ಯಾವ ರೀತಿ ಅಭಿವೃದ್ಧಿ ಮಾಡಬೇಕು ಎಂಬ ಬಗ್ಗೆ ರೂಪುರೇಷೆ ಮಾಡದ ಕಾರಣ ಸರಕಾರದಿಂದ ವಿಶೇಷ ಅನುದಾನಗಳನ್ನು ಕೇಳಲು ಸಾಧ್ಯವಾಗುತ್ತಿಲ್ಲ. ಪ್ಲ್ಯಾನ್ ಇದಲ್ಲಿ ಅನುದಾನ ಕೇಳಬಹುದು ಅನ್ನುತ್ತಾರೆ ನ.ಪಂ. ಅಧಿಕಾರಿಗಳು.

ಸುಳ್ಯದಂತಹ ಪ್ರಾಕೃತಿಕ ನಗರಕ್ಕೆ ಪೂರಕ ಅಲ್ಲ. ವಸತಿ, ನಿವೇಶನಗಳಿಗೆ ಸಂಚಕಾರ ಉಂಟಾಗಲಿದೆ ಎಂಬ ಆತಂಕ ಜನಪ್ರತಿನಿಧಿಗಳದ್ದು. ಸೂಡಾ ಆರಂಭ ಗೊಳ್ಳುವ ಮೊದಲು ಮನೆ, ಕಟ್ಟಡ ನಿರ್ಮಿಸಿ ದವರಿಗೆ ನಿಯಮ ಅನ್ವಯ ವಾದಲ್ಲಿ ಕಷ್ಟ. ಈಗ ನೀಲ ನಕಾಶೆಯಲ್ಲಿ ಫಾರೆಸ್ಟ್‌ ಎಂದು ತೋರಿಸಿರುವ ಜಾಗ ದಲ್ಲಿ ಮನೆಗಳಿವೆ. 3 ಸೆಂಟ್ಸ್‌ ಜಾಗ ಹೊಂದಿ ರುವವರೂ ರಸ್ತೆಗೆ ಜಾಗ ಬಿಡಬೇಕು ಎಂಬ ನಿಯಮಗಳಿಂದ ತೊಂದರೆ ಉಂಟಾಗಲಿದೆ ಎನ್ನುವುದು ಅನುಷ್ಠಾನದ ವಿರೋಧಕ್ಕಿರುವ ಕಾರಣ.

ಏನಿದು ಟೌನ್‌ ಪ್ಲ್ಯಾನ್ ?
ಮಂಡಲ ಪಂಚಾಯತ್‌ನಿಂದ ನಗರ ಪಂಚಾಯತ್‌ ಆಗಿ ಮೇಲ್ದ ರ್ಜೆಗೆ ಏರಿದ ತತ್‌ಕ್ಷಣ ಆ ನಗರಕ್ಕೆ ಟೌನ್‌ ಪ್ಲ್ಯಾನಿಂಗ್‌ ಆ್ಯಕ್ಟ್ ಅನ್ವಯಗೊಳ್ಳುವುದು ನಿಯಮ. ಅದರಂತೆ ಅಭಿವೃದ್ಧಿ ಯೋಜನೆ ಅನುಷ್ಠಾನಿಸಬೇಕು. ಕೈಗಾರಿಕೆ, ವಾಣಿಜ್ಯ ಹೀಗೆ ಬೇರೆ-ಬೇರೆ ವಲಯ ಗುರುತಿಸಿ, ಅದಕ್ಕೆ ಪೂರಕ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ಕೈಗಾರಿಕೆ ವಲಯದಲ್ಲಿ ವಾಣಿಜ್ಯ ಚಟುವಟಿಕೆಗೆ, ವಾಣಿಜ್ಯ ವಲಯದಲ್ಲಿ ಕೈಗಾರಿಕೆಗಳಿಗೆ ಅವಕಾಶ ಕೊಡುವಂತಿಲ್ಲ. ಇಂತಹ ಹಲವು ನಿಯಮಗಳ ವ್ಯಾಪ್ತಿಗೆ ನಗರ ಒಳಪಡುತ್ತದೆ.

ಸರಕಾರದ ಒಪ್ಪಿಗೆ ಅಗತ್ಯ
ಕರಡು ಪ್ರತಿ ಸರಕಾರದ ಹಂತದಲ್ಲಿದೆ. ಅಲ್ಲಿ ಅದಕ್ಕೆ ಒಪ್ಪಿಗೆ ಸಿಗಬೇಕು. ಆ ಬಳಿಕ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪಡೆದು ಸಾರ್ವಜನಿಕ ಆಕ್ಷೇಪಣೆ ಕೇಳಲಾಗುವುದು. ಆ ಎಲ್ಲ ಪ್ರಕ್ರಿಯೆ ಪೂರ್ಣಗೊಂಡು ಅಂತಿಮ ಪ್ಲ್ಯಾನಿಂಗ್‌ ಅನ್ನು ಸರಕಾರಕ್ಕೆ ಕಳುಹಿಸಿದ ಮೇಲೆ ಮಹಾಯೋಜನೆ ಜಾರಿಗೆ ಬರುತ್ತದೆ.
-ಶಿವಕುಮಾರ್‌, ಎಂಜಿನಿಯರ್‌, ನ.ಪಂ. ಸುಳ್ಯ

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

ಸುಬ್ರಹ್ಮಣ್ಯ: ಗಾಳಿ ಮಳೆಗೆ ಮರ ಬಿದ್ದು ಮಹಿಳೆ ಮೃತ್ಯು…

ಸುಬ್ರಹ್ಮಣ್ಯ: ಗಾಳಿ ಮಳೆಗೆ ಮರ ಬಿದ್ದು ಮಹಿಳೆ ಮೃತ್ಯು…

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.