ಕಾಂಗ್ರೆಸ್‌ ವರಿಷ್ಠರ ನಡೆ ಆಧರಿಸಿ ತೀರ್ಮಾನ


Team Udayavani, Jul 29, 2019, 5:18 AM IST

HD-Devegowda–727-A

ಬೆಂಗಳೂರು: ‘ರಾಜ್ಯದಲ್ಲಿ ಮೈತ್ರಿ ಮುಂದುವರಿಕೆ ಕುರಿತು ಕಾಂಗ್ರೆಸ್‌ ನಾಯಕರ ತೀರ್ಮಾನ ನೋಡಿ ಮುಂದಿನ ನಿರ್ಧಾರ ಮಾಡುತ್ತೇವೆ’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, 14 ತಿಂಗಳು ಸರ್ಕಾರ ಮಾಡಿದೆವು. ಇದೀಗ ಸರ್ಕಾರ ಪತನಗೊಂಡಿದೆ. ಮೈತ್ರಿ ಮುಂದುವರಿಕೆ ವಿಚಾರದಲ್ಲಿ ಈಗಲೂ ಕಾಂಗ್ರೆಸ್‌ ನಾಯಕರ ತೀರ್ಮಾನ ಎದುರು ನೋಡುತ್ತಿದ್ದೇನೆ. ಬಿಜೆಪಿ ಸರ್ಕಾರದಲ್ಲಿ ಸಿದ್ದರಾಮಯ್ಯ ಅಧಿಕೃತ ಪ್ರತಿಪಕ್ಷ ನಾಯಕರಾಗಿರುತ್ತಾರೆ, ಕುಮಾರಸ್ವಾಮಿ ಜೆಡಿಎಸ್‌ ನಾಯಕರಾಗಿ ಸದನದಲ್ಲಿ ಕೆಲಸ ಮಾಡ್ತಾರೆ ಎಂದು ಹೇಳಿದರು. ವಿಧಾನಸಭೆಯಲ್ಲಿ ಸೋಮವಾರ ಹಣಕಾಸು ಮಸೂದೆಗೆ ನಾವು ಅಡ್ಡಿಮಾಡುವುದಿಲ್ಲ, ಒಪ್ಪಿಗೆ ನೀಡ್ತೇವೆ ಎಂದರು.

ಅತೃಪ್ತ ಶಾಸಕರು ಅನರ್ಹರಾಗಿದ್ದಾರೆ. ನಾಳೆ ಅಥವಾ ನಾಳಿದ್ದು ಬಂದು ಎಲ್ಲಾ ಹೇಳ್ತೇವೆ ಅಂತ ಹೇಳಿದ್ದಾರೆ, ನೋಡೋಣ, ನನ್ನ ಮೇಲೆ, ನನ್ನ ಮಗನ ಮೇಲೆ ಏನೆಲ್ಲಾ ಆರೋಪ ಮಾಡ್ತಾರೋ ಎಂದು ಗೌಡರು ಹೇಳಿದರು.

ಮುಖಂಡರ ಸಭೆ:ಈ ಮಧ್ಯೆ ದೇವೇಗೌಡರು, ಅತೃಪ್ತ ಶಾಸಕರ ಕ್ಷೇತ್ರಗಳಾದ ಮಹಾಲಕ್ಷ್ಮೀ ಲೇ ಔಟ್, ಯಶವಂತಪುರ ಕ್ಷೇತ್ರಗಳ ಕಾರ್ಯಕರ್ತರು, ಮುಖಂಡರ ಸಭೆ ನಡೆಸಿದರು.

ಮತ್ತೆ ಕಣ್ಣೀರು ಹಾಕಿದ ಗೌಡರು

ಮೈತ್ರಿ ಸರ್ಕಾರದಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಸ್ಥಾನಮಾನ ಕೊಡಲು ಆಗಿಲ್ಲ ಎಂದು ಹೇಳಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕಣ್ಣೀರು ಹಾಕಿದರು. ಭಾನುವಾರ ಜೆ.ಪಿ. ಭವನದಲ್ಲಿ ಮಹಾಲಕ್ಷ್ಮೀಲೇಔಟ್ ಹಾಗೂ ಯಶವಂತರಪುರ ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರ ಸಭೆ ಬಳಿಕ ಮಾತನಾಡಿ, ‘ ಪಕ್ಷ ಉಳಿಸಲು ಯಾವುದೇ ಅಧಿಕಾರ, ಆಮಿಷಕ್ಕೆ ಒಳಗಾಗದೇ ಕಾರ್ಯಕರ್ತರು ನನ್ನ ಜೊತೆ ಸಹಕರಿಸಿದ್ದಾರೆ. ನನ್ನ ತಪ್ಪನ್ನು ನಾನು ಒಪ್ಪಿಕೊಳ್ಳುತ್ತೇನೆ’ ಎಂದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಯಾರನ್ನೂ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಮಾಡಿರಲಿಲ್ಲ. ನನಗಾಗಿ ಹೋರಾಡಿದ ಕಾರ್ಯಕರ್ತರಿಗೆ ನಾನು ಯಾವುದೇ ಸ್ಥಾನಮಾನ ನೀಡಿರಲಿಲ್ಲ . ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಮೂರನೇ ಒಂದು ಭಾಗ ಎಂಬ ಒಪ್ಪಂದದ ಮೇಲೆ ಕೆಲವು ಸದಸ್ಯರನ್ನು ನೇಮಕ ಮಾಡಿದ್ದೇವೆ. ಹೆಚ್ಚಿನ ಕಾರ್ಯಕರ್ತರು, ಮುಖಂಡರಿಗೆ ಅವಕಾಶ ಮಾಡಿಕೊಡಲು ಆಗಲಿಲ್ಲ, ಕ್ಷಮೆ ಕೇಳ್ತೇನೆ ಎಂದು ದೇವೇಗೌಡರು ಕಣ್ಣೀರು ಹಾಕಿದರು. ಕುಮಾರಸ್ವಾಮಿ ಪರಿಸ್ಥಿತಿ ಚೆನ್ನಾಗಿರಲಿಲ್ಲ. ತುಂಬಾ ಕಷ್ಟದಲ್ಲಿ ಸರ್ಕಾರ ನಡೆಸಿದರು. ಆ ನೋವು ಏನು ಅಂತ ನನಗೆ ಗೊತ್ತು ಎಂದು ದೇವೇಗೌಡರು ಭಾವುಕರಾದರು.
‘ಕೈ’ ವಿರುದ್ಧ ಕುಪೇಂದ್ರ ರೆಡ್ಡಿ ಕೋಪ

‘ಕಾಂಗ್ರೆಸ್‌ ನಾಯಕರು ತಮ್ಮ ಶಾಸಕರನ್ನು ಹಿಡಿದಿಟ್ಟುಕೊಂಡಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಅವರು ಸರಿಯಾಗಿ ಇದ್ದಿದ್ದರೆ ಸರ್ಕಾರ ಬೀಳುತ್ತಿರಲಿಲ್ಲ’ ಎಂದು ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಚುನಾವಣೆ ವೇಳೆ ಜೆಡಿಎಸ್‌ ಬಿಜೆಪಿಯ ಬಿ ಟೀಂ ಎಂದರು. ಇದರಿಂದ ನಮಗೆ ಬರಬೇಕಿದ್ದ ಮುಸ್ಲಿಂ ಮತಗಳು ದೂರ ಆದವು. ಅವರು ಈ ಮಾತು ಹೇಳಿಲ್ಲ ಅಂದಿದ್ದರೆ ಇವತ್ತು ಯಶವಂತಪುರದಲ್ಲಿ ಜವರಾಯಿಗೌಡ ಸೋಲುತ್ತಿರಲಿಲ್ಲ ಎಂದು ಹೇಳಿದರು. ಇದೇ ವೇಳೆ, ಎಸ್‌.ಟಿ.ಸೋಮಶೇಖರ್‌ ಬಂದಾಗ ಅವರ ಬಳಿ ಚುನಾವಣೆ ಲೆಕ್ಕ ಕೇಳಬೇಕು ಎಂದು ರೆಡ್ಡಿ ಕಾರ್ಯಕರ್ತರಿಗೆ ಕರೆ ನೀಡಿದರು.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.