ಅಪರಾಧ ತಗ್ಗಿಸಲು ಜಂಟಿ ಕಾರ್ಯಾಚರಣೆ

ನಗರದಲ್ಲಿ ಶನಿವಾರ ರಾತ್ರಿ 11ರಿಂದ ಮುಂಜಾನೆ ನಾಲ್ಕು ಗಂಟೆವರೆಗೆ ವಾಹನಗಳ ತಪಾಸಣೆ

Team Udayavani, Jul 29, 2019, 7:52 AM IST

bng-tdy-5

ಅನುಮಾನಾಸ್ಪದ ವರ್ತನೆ ತೋರಿದ ಕೆಲವರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಯಿತು.

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ಹಿನ್ನೆಲೆಯಲ್ಲಿ ನಗರ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ಪೊಲೀಸರು ಹಾಗೂ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಜಂಟಿಯಾಗಿ ಶನಿವಾರ ರಾತ್ರಿಯಿಡಿ ವಿಶೇಷ ಕಾರ್ಯಾಚರಣೆ ನಡೆಸಿದರು.

ನಗರ ಪೊಲೀಸ್‌ ಆಯುಕ್ತ ಆಲೋಕ್‌ ಕುಮಾರ್‌, ಸಿಸಿಬಿ, ಸಂಚಾರ ಹಾಗೂ ಕಾನೂನು ಸುವ್ಯವಸ್ಥೆ ವಿಭಾಗದ ಎಲ್ಲ ಡಿಸಿಪಿ, ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ಗಳು ಸೇರಿ ಎಲ್ಲ ಹಂತದ ಸಿಬ್ಬಂದಿ ಶನಿವಾರ ರಾತ್ರಿ 11 ಗಂಟೆಯಿಂದ ಮುಂಜಾನೆ ನಾಲ್ಕು ಗಂಟೆವರೆಗೂ ತಮ್ಮ ವ್ಯಾಪ್ತಿಗಳಲ್ಲಿ ಗಸ್ತು ತಿರುಗಿದರು. ನಗರದ ಎಲ್ಲ ಪ್ರಮುಖ ರಸ್ತೆಗಳು, ಜಂಕ್ಷನ್‌ಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ವಾಹನಗಳ ತಪಾಸಣೆ ನಡೆಸಿದರು.

ವಿಶೇಷವಾಗಿ ಹೊಂಡಾ ಆಕ್ಟಿವಾ, ಪಲ್ಸರ್‌ ಬೈಕ್‌ಗಳನ್ನು ತಡೆದು ತಪಾಸಣೆ ನಡೆಸಿದರು. ಈ ವೇಳೆ ಅನುಮಾನಾಸ್ಪದವಾಗಿ ವರ್ತಿಸಿದ ವ್ಯಕ್ತಿಗಳು ಹಾಗೂ ಅವರ ವಾಹನಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ಯಲಾಯಿತು. ನಂತರ ಅವರ ಪೂರ್ವಾಪರ ವಿಚಾರಿಸಿ ವಾಹನಗಳ ಮೂಲ ದಾಖಲೆಗಳನ್ನು ಪರಿಶೀಲಿಸಿ ಬಿಡುಗಡೆ ಮಾಡಿದರು. ಇದರೊಂದಿಗೆ ನಗರದಲ್ಲಿರುವ ನೂರಾರು ಹೊಯ್ಸಳ, ಚಿತಾ ಹಾಗೂ ಇತರೆ ವಾಹನಗಳು ಎಲ್ಲೆಡೆ ಗಸ್ತು ತಿರುಗುತ್ತಿದ್ದವು. ಈ ವಿಶೇಷ ಕಾರ್ಯಾಚರಣೆ ವೇಳೆ 499ಕ್ಕೂ ಹೆಚ್ಚು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿ, ಸುಮಾರು 500ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು ಎಂದು ಪೊಲೀಸರು ಹೇಳಿದರು.

120ಕ್ಕೂ ಹೆಚ್ಚು ಕಡೆ ನಾಕಾಬಂದಿ: ಪ್ರತಿ ಶನಿವಾರ ಎಲ್ಲ ವಲಯಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತದೆ. ಆದರೆ, ಈ ಬಾರಿ ನಗರದೆಲ್ಲೆಡೆ ಸುಮಾರು 120ಕ್ಕೂ ಹೆಚ್ಚು ಪ್ರಮುಖ ಪ್ರದೇಶಗಳಲ್ಲಿ ನಾಕಾಬಂದಿ ಹಾಕಲಾಯಿತು. ನಗರ ಪೊಲೀಸ್‌ ಆಯುಕ್ತ ಆಲೋಕ್‌ ಕುಮಾರ್‌ ಎಲ್ಲ ನಾಕಾಬಂದಿ ಸ್ಥಳಗಳಿಗೆ ಖುದ್ದು ಭೇಟಿ ನೀಡಿ, ಅಧಿಕಾರಗಳ ಜತೆ ಕಾರ್ಯಾಚರಣೆ ಬಗ್ಗೆ ಚರ್ಚಿಸಿದರು. ಈ ವೇಳೆ ಕೆಲ ವಾಹನ ಸವಾರರರನ್ನು ಸ್ವತಃ ಆಯುಕ್ತರೇ ವಿಚಾರಣೆ ನಡೆಸಿದರು.

ಸರ, ವಾಹನ ಕಳ್ಳರ ಮೇಲೆ ನಿಗಾ: ಕಳವು ಮಾಡಿದ ವಾಹನಗಳಿಂದಲೇ ಆರೋಪಿಗಳು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಪದೇ ಪದೆ ಅಪರಾಧ ಪ್ರಕರಣಗಳಲ್ಲಿ ತೊಡಗುವ, ರಾತ್ರಿ ವೇಳೆ ಮಾತ್ರ ಸುಲಿಗೆ, ದರೋಡೆ ಮುಂತಾದ ಕೃತ್ಯಗಳನ್ನು ನಡೆಸುವವರಿಗೆ ಈ ಕಾರ್ಯಾಚರಣೆ ಮೂಲಕ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸರು ಹೇಳಿದರು.

ಡಿಸ್‌ಪ್ಲೇ ಕಾರ್ಡ್‌ ಇಲ್ಲದ 63 ಆಟೋ ಜಪ್ತಿ:

ನಗರ ಸಂಚಾರ ಪೊಲೀಸರು ಶನಿವಾರ ರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ಚಾಲಕ, ಬೈಕ್‌ ಸವಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜತೆಗೆ ಡಿಸ್‌ಪ್ಲೇ ಕಾರ್ಡ್‌ ಇಲ್ಲದೆ ಆಟೋ ಚಾಲನೆ ಮಾಡುತ್ತಿದ್ದ ಚಾಲಕರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು 63 ಆಟೋ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದರು.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.