ಯಾತ್ರಿ ನಿವಾಸಗಳ ಉದ್ಘಾಟನೆ ಯಾವಾಗ?

•ಮೂಲ ಸೌಲಭ್ಯ ಪೂರೈಕೆಗೆ ಬೇಕು ಹೆಚ್ಚಿನ ಅನುದಾನ•ಭಕ್ತರ ಬಳಕೆಗೆ ದೊರೆಯದ ನಿವಾಸಗಳು

Team Udayavani, Jul 29, 2019, 8:57 AM IST

gadaga-tdy-2

ನರೇಗಲ್ಲ: ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಜಾರಿಯಾದರೆ ಮಾತ್ರ ಆ ಯೋಜನೆಗಳಿಗೆ ಸಾರ್ಥಕತೆ ಬರುವುದು. ಆದರೆ ಯೋಜನೆಗಳು ಸಮರ್ಪಕ ಅನುಷ್ಠಾನವಾಗದಿದ್ದರೆ ಹೆಬ್ಬಂಡೆ ಮೇಲೆ ನೀರು ಸುರಿದಂತಾಗುತ್ತದೆ. ಇದಕ್ಕೆ ನಿಡಗುಂದಿ, ಮಾರನಬಸರಿ ಹಾಗೂ ಅಬ್ಬಿಗೇರಿ ಗ್ರಾಮಗಳಲ್ಲಿ ನಿರ್ಮಾಣವಾಗಿರುವ ಯಾತ್ರಿ ನಿವಾಸಗಳೇ ಉತ್ತಮ ನಿದರ್ಶನ.

ಕಾಮಗಾರಿ ಪೂರ್ಣಗೊಂಡು ವರ್ಷ ಕಳೆದರೂ ಇನ್ನು ಉದ್ಘಾಟನೆಯಾಗದೇ ಭಕ್ತರ ಬಳಕೆಗೆ ಬಾರದಂತಾಗಿದೆ.

ಹೋಬಳಿ ವ್ಯಾಪ್ತಿಯ ನಿಡಗುಂದಿಯಲ್ಲಿನ ಇಟಗಿ ಭೀಮಾಂಬಿಕಾ ದೇವಿ ದೇವಸ್ಥಾನ ಆವರಣದಲ್ಲಿ, ಮಾರನಬಸರಿ ಮುರುಘರಾಜೇಂದ್ರ ಮಠದಲ್ಲಿ, ಅಬ್ಬಿಗೇರಿ ಹಿರೇಮಠ ಆವರಣದಲ್ಲಿ ಯಾತ್ರಿ ನಿವಾಸಗಳು ತಲೆಯೆತ್ತಿವೆ. ನಿಡಗುಂದಿ ಯಾತ್ರಿ ನಿವಾಸಕ್ಕೆ ಅಂದಾಜು 50 ಲಕ್ಷ, ಮಾರನಬಸರಿಗೆ ಯಾತ್ರಿ ನಿವಾಸಕ್ಕೆ 25 ಲಕ್ಷ, ಅಬ್ಬಿಗೇರಿ ಯಾತ್ರಿ ನಿವಾಸಕ್ಕೆ 25 ಲಕ್ಷ ರೂ. ಖರ್ಚು ಮಾಡಲಾಗಿದೆ. ಮಠಗಳಿಗೆ ಬರುವ ಭಕ್ತರಿಗೆ ಅನುಕೂಲವಾಗಲಿ ಎನ್ನುವುದಕ್ಕಾಗಿ ಶಾಸಕರ ಅನುದಾನದಲ್ಲಿ ನಿರ್ಮಾಣ ಮಾಡಲಾಗಿದೆ. ಆದರೆ ಅವುಗಳು ಭಕ್ತರ ಬಳಕೆಗೆ ದೊರೆಯದಿರುವುದು ನಿರಾಸೆ ಮೂಡಿಸಿವೆ.

ಹಸ್ತಾಂತರ ಹಂತದಲ್ಲಿ ಕಟ್ಟಡಗಳು: 2016-17ನೇ ಸಾಲಿನ ವಿಶೇಷ ಅನುದಾನದಲ್ಲಿ ಮೂರು ಕಡೆಗಳಲ್ಲಿ 1 ಕೋಟಿಗೂ ಹೆಚ್ಚು ಹಣ ಬಳಸಿ ಯಾತ್ರಿ ನಿವಾಸಗಳನ್ನು ಕೆಎಲ್ಐಆರ್‌ಡಿಎಲ್ ಇಲಾಖೆಯವರು ಮಾಡಿದ್ದಾರೆ. ಈಗ ಅವರು ಸಂಬಂಧಿಸಿದ ಪ್ರವಾಸೋದ್ಯಮ ಇಲಾಖೆಗೆ ಕಾಮಗಾರಿಗಳು ಮುಗಿದಿವೆ. ಕಟ್ಟಡಗಳನ್ನು ಹಸ್ತಾಂತರ ಮಾಡಿಕೊಳ್ಳಿ ಎಂದು ಹೇಳುವ ಹಂತದಲ್ಲಿದೆ. ಇದಕ್ಕೆ ಉದ್ಘಾಟನೆ ಭಾಗ್ಯ ಬರಬೇಕಾಗಿದೆ. ಇದಕ್ಕಾಗಿ ಈ ಭಾಗದ ಜನಪ್ರತಿನಿಧಿಗಳು ಬಂದು ಈ ಕಾರ್ಯ ನಡೆಸಬೇಕಿರುವುದರಿಂದ ಅವರಿಗಾಗಿ ಕಾಯುತ್ತಿವೆ ಯಾತ್ರಿ ನಿವಾಸಗಳು.

ಹೆಚ್ಚಿನ ಅನುದಾನ ಅವಶ್ಯ: ಕಟ್ಟಡಗಳೇನೂ ನಿರ್ಮಾಣವಾಗಿವೆ. ಅಲ್ಲಿ ನೀರು, ಕಾಂಪೌಂಡ್‌ ನಿರ್ಮಾಣ ಸೇರಿದಂತೆ ಇತರ ಸೌಲಭ್ಯಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಬೇಕಾಗಿರುವುದು ಈಗಿನ ಪರಿಸ್ಥಿತಿ ನೋಡಿದರೆ ಗೊತ್ತಾಗುತ್ತದೆ.

ಭಕ್ತರು ಮಠಗಳಿಗೆ ಬಂದು ವಾಸ್ತವ್ಯ ಮಾಡಿದಾಗ ಅವರಿಗೆ ಬೇಕಾದ ಸೌಲಭ್ಯಗಳು ಇಲ್ಲದಿರುವುದರಿಂದ ಭಕ್ತರಿಗೆ ತೊಂದರೆಯಾಗುವುದನ್ನು ಮನಗಂಡು ಸಂಬಂಧಪಟ್ಟ ಇಲಾಖೆಯವರು ತಕ್ಷಣವೇ ಈ ಮೂರು ಗ್ರಾಮಗಳ ಯಾತ್ರಿ ನಿವಾಸಗಳ ಕಡೆಗೆ ಗಮನ ಹರಿಸಿ ಅಲ್ಲಿಗೆ ಬರುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆನ್ನುವುದು ಭಕ್ತರ ಒತ್ತಾಯವಾಗಿದೆ.

ನಿಡಗುಂದಿ, ಮಾರನಬಸರಿ ಹಾಗೂ ಅಬ್ಬಿಗೇರಿ ಗ್ರಾಮಗಳಲ್ಲಿ ನಿರ್ಮಾಣವಾಗಿರುವ ಯಾತ್ರಿ ನಿವಾಸಗಳು ಉದ್ಘಾಟನೆ ಹಂತದಲ್ಲಿವೆ ಎನ್ನುವುದು ನನ್ನ ಗಮನಕ್ಕೆ ಬಂದಿಲ್ಲ. ಆಯಾ ಗ್ರಾಮಗಳ ಜನತೆ, ಮಠಗಳ ಶ್ರೀಗಳು ಹಾಗೂ ಇಲಾಖೆ ಅಧಿಕಾರಿಗಳಿಗೆ ಸಂಪರ್ಕಿಸಿ ಶೀಘ್ರದಲ್ಲಿಯೇ ಅವುಗಳ ಉದ್ಘಾಟನೆ ಮಾಡಿ ಭಕ್ತರ ಅನುಕೂಲಕ್ಕೆ ನೆರವು ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಸೇವೆ ಮಾಡುವೆ.•ಕಳಕಪ್ಪ ಬಂಡಿ, ಶಾಸಕ, ರೋಣ

ಸರ್ಕಾರ ನಿಗದಿಪಡಿಸಿದ ಸಮಯದಲ್ಲಿ ಇಲಾಖೆ ವತಿಯಿಂದ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಇನ್ನು ಪ್ರವಾಸೋದ್ಯಮ ಇಲಾಖೆಗೆ ಕಟ್ಟಡಗಳ ಹಸ್ತಾಂತರಗೊಳಿಸುವ ಕಾರ್ಯ ಬಾಕಿ ಇದೆ.•ಆರ್‌. ಶ್ರೀನಿವಾಸ, ಕೆಆರ್‌ಐಡಿಎಲ್ ಕಾರ್ಯನಿರ್ವಾಹಕ ಅಭಿಯಂತರ

 

•ಸಿಕಂದರ ಎಂ. ಆರಿ

ಟಾಪ್ ನ್ಯೂಸ್

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

hemanth-soren

Arrest ಪ್ರಶ್ನಿಸಿ ಹೇಮಂತ್‌ ಸೊರೇನ್‌ ಸುಪ್ರೀಂ ಮೊರೆ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.