ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತದ ನಾಟಿ ಡೌಟು!

•ಕೈಕೊಟ್ಟ ಮುಂಗಾರು•ಒಂದು ಬೆಳೆಗಾಗುವಷ್ಟು ನೀರಿಲ್ಲ ಡ್ಯಾಂನಲ್ಲಿ•ದಾರಿ ಕಾಣದಂತಾದ ರೈತಾಪಿ ವರ್ಗ

Team Udayavani, Jul 29, 2019, 9:12 AM IST

kopala-tdy-1

ಗಂಗಾವತಿ: ಭೂಮಿ ಹದ ಮಾಡಿಕೊಳ್ಳುತ್ತಿರುವ ರೈತರು.

ಗಂಗಾವತಿ: ಮುಂಗಾರು ಮಳೆ ಕೈಕೊಟ್ಟಿದ್ದರಿಂದ ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಅತ್ಯಂತ ಕಡಿಮೆ ಇದ್ದು, ಮುಂಗಾರು ಬೆಳೆಗಾಗುವಷ್ಟು ನೀರು ಸಹ ಸಂಗ್ರಹವಾಗಿಲ್ಲ. ಮತ್ತೂಮ್ಮೆ ರೈತಾಪಿ ವರ್ಗ ಸಂಕಷ್ಟದಲ್ಲಿದ್ದು, ಅಚ್ಚುಕಟ್ಟು ಪ್ರದೇಶದ ಬಹುತೇಕ ಗ್ರಾಮೀಣ ಜನರು ದುಡಿಮೆಗಾಗಿ ಬೆಂಗಳೂರು ಸೇರಿ ವಿವಿಧೆಡೆ ಗುಳೆ ಹೊರಟಿದ್ದಾರೆ.

ಪ್ರಸ್ತುತ ತುಂಗಭದ್ರಾ ಡ್ಯಾಂ ನಲ್ಲಿ 25 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಕಳೆದ ವರ್ಷ 93 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ತಡವಾಗಿದ್ದರಿಂದ ಜುಲೈ ಅಂತ್ಯವಾದರೂ ಜಲಾಶಯ ಬರಿದಾಗಿದೆ. ಇದರಿಂದ ಅಚ್ಚುಕಟ್ಟು ಪ್ರದೇಶದ ರೈತರು ಭತ್ತ ನಾಟಿ ಮಾಡದೇ ಪ್ರತಿ ದಿನ ಜಲಾಶಯದ ನೀರಿನ ಮಟ್ಟವನ್ನು ನೋಡುವಂತಾಗಿದೆ. ಮುಂಗಾರು ಭತ್ತದ ನಾಟಿ ರೈತರ ಕೈಸೇರಲು ಕನಿಷ್ಠ 45 ಟಿಎಂಸಿ ಅಡಿ ನೀರು ಬೇಕಾಗುತ್ತದೆ. ಜಲಾಶಯದಲ್ಲಿ ಇದೀಗ 25 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಒಳಹರಿವು ಸಹ ಕಳೆದ ವರ್ಷಕ್ಕೆ ಹೋಲಿಸಿದರೆ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ.

ಅಚ್ಚುಕಟ್ಟು ಪ್ರದೇಶದಲ್ಲಿ ಸುಮಾರು 12 ಲಕ್ಷ ಎಕರೆ ಪ್ರದೇಶ ನೀರಾವರಿಗೊಳಪಟ್ಟಿದ್ದು, ಸರಕಾರ ನಿಯಮಗಳ ಪ್ರಕಾರ 8 ಲಕ್ಷ ಎಕರೆ ಪ್ರದೇಶ ನೀರಾವರಿ ಪ್ರದೇಶವಾಗಿದೆ. ಕಳೆದ ವರ್ಷವೂ ಸಹ ಸರಕಾರ ನಿರ್ಲಕ್ಷ ್ಯದ ಪರಿಣಾಮವಾಗಿ ಆಗಸ್ಟ್‌ ಎರಡನೇ ವಾರ ಮುಂಗಾರು ಹಂಗಾಮಿನ ನೀರನ್ನು ಕಾಲುವೆಗೆ ಹರಿಸಲಾಗಿತ್ತು. ರೈತರು ಮುಂಗಡವಾಗಿ ಭತ್ತದ ಸಸಿ ಮಡಿ (ಭತ್ತದ ಸಸಿ) ಹಾಕಿದ್ದರಿಂದ ಆಗಸ್ಟ್‌ ಕೊನೆಯ ವಾರದ ವೇಳೆಗೆ ಭತ್ತದ ನಾಟಿ ಕಾರ್ಯ ಮುಗಿಸಿದ್ದರು.

ಮುಂಗಾರು ಹಂಗಾಮಿನ ಭತ್ತದ ಬೆಳೆ ಜುಲೈ ಮೊದಲ ವಾರದಲ್ಲಿ ನಾಟಿಯಾದರೆ ಮುಂದಿನ ಚಳಿಗಾಲಕ್ಕೆ ಸಿಗದೇ ಉತ್ತಮ ಇಳುವರಿ ಬರುತ್ತದೆ. ಚಳಿಗಾಲದಲ್ಲಿ ಭತ್ತ ತೆನೆ ಬಿಚ್ಚುವಾಗ ಚಳಿಗೆ ಸಿಕ್ಕು ತೆನೆ ಸರಿಯಾಗಿ ಬೆಳೆಯುವುದಿಲ್ಲ. ಪ್ರತಿ ವರ್ಷ ಚಳಿಗಾಲ ಆರಂಭಕ್ಕೂ ಮೊದಲು ಭತ್ತ ತೆನೆ ಬಿಚ್ಚುವ ಹಾಗೆ ರೈತರು ನಾಟಿ ಮಾಡುವುದು ಅಚ್ಚುಕಟ್ಟು ಪ್ರದೇಶದ ರೈತರ ರೂಢಿಯಾಗಿದೆ. ಈ ಭಾರಿ ಇನ್ನೂ ಸಹ ಡ್ಯಾಂನಲ್ಲಿ ನೀರು ಸಂಗ್ರಹವಾಗಿಲ್ಲ. ಆದರೂ ಕೆಲ ರೈತರು ಆಗಷ್ಟ ಕೊನೆಯ ವಾರಕ್ಕೆ ಡ್ಯಾಂಗೆ ನೀರು ಬಂದು ಕಾಲುವೆಗಳಿಗೆ ಹರಿಸುತ್ತಾರೆಂಬ ನಂಬಿಕೆಯಿಂದ ಸಸಿ ಮಡಿ ಹಾಕಿದ್ದಾರೆ. ಇನ್ನೂ ಸ್ವಲ್ಪ ರೈತರು ನದಿ ದಂಡೆ ಮತ್ತು ಪಂಪ್‌ ಸೆಟ್ ಹೊಂದಿರುವವರು ಈಗಾಗಲೇ ಭತ್ತ ನಾಟಿ ಮಾಡಿದ್ದಾರೆ. ಈ ಪ್ರಮಾಣ ಶೇ.05ರಷ್ಟು ಮಾತ್ರ ಕಾಲುವೆಯಿಂದಲೇ ಅತೀ ಹೆಚ್ಚು ನೀರಾವರಿ ಪ್ರದೇಶ ಇರುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ಕುಡಿಯುವ ನೀರಿನ ನೆಪದಲ್ಲಿ ಪೋಲು: ಕುಡಿಯುವ ನೆಪದಲ್ಲಿ ಎಡದಂಡೆ ಕಾಲುವೆಗೆ ಸುಮಾರು 1.5 ಟಿಎಂಸಿ ಅಡಿಯಷ್ಟು ನೀರನ್ನು ಹರಿಸಲಾಗುತ್ತಿದ್ದು ಮೇಲ್ಭಾಗದಲ್ಲಿ ಬಹುತೇಕ ಉಪಕಾಲುವೆಯ ಮೂಲಕ ನೀರು ಪೋಲಾಗುತ್ತಿದೆ. ಇದರಿಂದ ಪ್ರಸ್ತುತ ಡ್ಯಾಂನಲ್ಲಿ ಸಂಗ್ರಹವಾದ ನೀರನ್ನು ಅಧಿಕಾರಿಗಳು ಸರಿಯಾದ ನಿರ್ವಹಣೆಯಿಲ್ಲದೇ ಪೋಲು ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ರೈತರು ವ್ಯಾಪಕ ಟೀಕೆ ಮಾಡುತ್ತಿದ್ದಾರೆ.

ರಾಯಚೂರು, ಮಾನ್ವಿ, ಸಿಂಧನೂರು ಭಾಗದಲ್ಲಿರುವ ಕೆರೆ ಕೃಷಿ ಹೊಂಡಗಳನ್ನು ಭರ್ತಿ ಮಾಡಿ ಕೂಡಲೇ ಕಾಲುವೆ ನೀರನ್ನು ನಿಲ್ಲಿಸಿ 50 ಟಿಎಂಸಿ ಅಡಿ ನೀರು ಸಂಗ್ರಹವಾದ ಕೂಡಲೇ ರೈತರಿಗೆ ನೀರು ಹರಿಸಲು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನ ಹಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಗ್ರಾಮೀಣ ಭಾಗದ ಜನರೆಲ್ಲ ದುಡಿಯಲು ಗುಳೆ:

ಏತ ನೀರಾವರಿ: ನಿಯಮ ಉಲ್ಲಂಘಿಸಿದ ಅಧಿಕಾರಿಗಳು

ಕೃಷಿ ಹಾಗೂ ಕುಡಿಯುವ ನೀರಿಗಾಗಿ ತುಂಗಭದ್ರಾ ಡ್ಯಾಂ ನಿರ್ಮಾಣಗೊಂಡಿದ್ದು, ಡ್ಯಾಂ ನಿರ್ಮಾಣದ ನಂತರ ಸುಮಾರು 68 ವರ್ಷಗಳ ಕಾಲ ಡ್ಯಾಂ ಜುಲೈ ಮೊದಲ ವಾರದೊಳಗೆ ಭರ್ತಿಯಾಗಿ ಎರಡನೇ ವಾರ ಕಾಲುವೆ ಮೂಲಕ ರೈತರ ಹೊಲಗದ್ದೆಗಳಿಗೆ ನೀರು ಹರಿಸಲಾಗುತ್ತಿತ್ತು. ಡ್ಯಾಂ ಮೇಲ್ಭಾಗದ ಕೆಲವು ರಾಜಕಾರಣಿಗಳಿಂದಾಗಿ ಕೆಲ ಯೋಜನೆಗಳು ಆರಂಭವಾಗಿ ಡ್ಯಾಂಗೆ ಸರಿಯಾಗಿ ನೀರು ಹರಿದು ಬರುವುದು ನಿಲ್ಲುವಂತಾಗಿದೆ. ಮೇಲ್ಭಾಗದಲ್ಲಿ ನಿರ್ಮಾಣಗೊಂಡಿರುವ ಕೆರೆ ತುಂಬಿಸುವ ಯೋಜನೆಗಳು, ಸಿಂಗಟಾಲೂರು, ಹುಲಿಗುಡ್ಡ ಸೇರಿ ಇತರೆ ಕೆಲ ಏತನೀರಾವರಿಗಳಿಗೆ ಡ್ಯಾಂ ಭರ್ತಿಯಾದ ನಂತರ ನೀರನ್ನು ಹರಿಸಬೇಕೆಂಬ ನಿಯಮವಿದ್ದರೂ ಇದನ್ನು ಉಲ್ಲಂಘಿಸಿ ಒಳಹರಿವು ಆರಂಭವಾದ ಕೂಡಲೇ ಏತನೀರಾವರಿ ಮೂಲಕ ನೀರನ್ನು ಸಂಗ್ರಹ ಮಾಡುವುದರಿಂದ ಕಳೆದ 5 ವರ್ಷಗಳಿಂದ ತುಂಗಭದ್ರಾ ಡ್ಯಾಂ ಭರ್ತಿಯಾಗುತ್ತಿಲ್ಲ. ಇದರಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಸಂಕಷ್ಟ ಎದುರಾಗಿದೆ.
ಡ್ಯಾಂ ಮೇಲ್ಭಾಗದಲ್ಲಿ ಅವೈಜ್ಞಾನಿಕವಾಗಿ ಒಳಹರಿವಿನ ನೀರನ್ನು ಬಳಸುತ್ತಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ 5 ವರ್ಷಗಳಿಂದ ತೀವ್ರ ಅನ್ಯಾಯವಾಗುತ್ತಿದೆ. ಮಳೆ ಅಥವಾ ಡ್ಯಾಂ ಭರ್ತಿಯಾದ ನಂತರವೇ ಮೇಲ್ಭಾಗದ ನೀರಾವರಿ ಯೋಜನೆಗಳಿಗೆ ನೀರನ್ನು ಹರಿಸಬೇಕಾಗಿದ್ದು, ಅಧಿಕಾರಿಗಳು ಅಲ್ಲಿಯ ಜನಪ್ರತಿನಿಧಿಗಳಿಂದ ಡ್ಯಾಂಗೆ ಒಳಹರಿವು ಇಲ್ಲವಾಗಿದೆ. ಜತೆಗೆ ಡ್ಯಾಂನಲ್ಲಿರುವ ನೀರನ್ನು ಅಕ್ರಮವಾಗಿ ಕೈಗಾರಿಕೆಗಳು ಬಳಸುತ್ತಿರುವುದರಿಂದ ಕೆಳಭಾಗದ ರೈತರಿಗೆ ನೀರು ಸಿಗದಂತಾಗಿದೆ. ಕುಡಿಯುವ ನೀರಿಗಾಗಿ ತುಂಗಭದ್ರಾ ಡ್ಯಾಂ ನಿರ್ಮಿಸಿದಂತಾಗಿದೆ.•ತಿಮ್ಮಣ್ಣ ಕನಕರಡ್ಡಿ, ಸಿಂಗನಾಳ ರೈತ
•ಕೆ.ನಿಂಗಜ್ಜ

ಟಾಪ್ ನ್ಯೂಸ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

The Safest Online Gaming Sites: Shielding Your Gaming Experience

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Casino Financial Institution Repayment Methods: A Comprehensive Guide

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.