ಶ್ರಮವಹಿಸಿ ವ್ಯಾಸಂಗ ಮಾಡಿದ್ರೆ ಮಾತ್ರ ಯಶಸ್ಸು
ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಬಸಪ್ಪ ಸಲಹೆ
Team Udayavani, Jul 29, 2019, 10:35 AM IST
ಚಾಮರಾಜನಗರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಭೆ ಇದ್ದರಷ್ಟೇ ಅವಕಾಶಗಳು ದೊರೆಯಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಶ್ರಮ ವಹಿಸಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕಗಳನ್ನು ಗಳಿಸಿ ತಮ್ಮ ಜೀವನ ರೂಪಿಸಿಕೊಳ್ಳಬೇಕು ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ, ಬಸವೇಶ್ವರ ಪತ್ತಿನ ಸಹಕಾರ ಸಂಘ ಹಾಗೂ ಸಂಗಮ ಗೃಹ ನಿರ್ಮಾಣ ಸಹಕಾರ ಸಂಘಗಳು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಬಸಪ್ಪ ಸಲಹೆ ನೀಡಿದರು.
ಜಿಲ್ಲಾ ವೀರಶೈವ- ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಬಸವೇಶ್ವರ ಪತ್ತಿನ ಸಹಕಾರ ಮತ್ತು ಸಂಗಮ ಗೃಹ ನಿರ್ಮಾಣ ಸಹಕಾರ ಸಂಘದ ವತಿ ಯಿಂದ ನಗರದ ನಂದಿ ಭವನದಲ್ಲಿ ನಡೆದ ವೀರಶೈವ ಲಿಂಗಾಯತ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶ್ರಮ ವಹಿಸಿ ಓದಿ: ವಿದ್ಯಾರ್ಥಿಯ ಸಾಧನೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರತಿಭಾ ಪುರಸ್ಕಾರವನ್ನು ನೀಡಲಾಗುತ್ತಿದೆ. ಇದು ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಬೇಕು. ಎಸ್ಎಸ್ಎಲ್ಸಿ, ಪಿಯುಸಿ ನಂತರ ಉತ್ತಮ ವ್ಯಾಸಂಗ ನಡೆಸಿ ಉದ್ಯೋಗಕ್ಕೆ ಅವಕಾಶವಿರುವ ಕೋರ್ಸ್ಗಳನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಬೇಕು. ಶ್ರಮ ವಹಿಸಿ ಓದಿ, ಉನ್ನತ ಅಂಕಗಳನ್ನು ಗಳಿಸಿ ಜೀವನದಲ್ಲಿ ಮುಂದೆ ಬರಬೇಕು ಎಂದು ಹೇಳಿದರು.
ಸದಸ್ಯರಿಗೆ ನಿವೇಶನ: ಮೂರೂ ಸಂಘಗಳು ಜಿಲ್ಲೆಯಲ್ಲಿ ಸದಸ್ಯರ ಆಶೋತ್ತರವಾಗಿ ಸ್ಪಂದಿಸುವ ಮೂಲಕ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿವೆ. ಬಸವೇಶ್ವರ ಪತ್ತಿನ ಸಹಕಾರ ಸಂಘದಿಂದ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವ ಮೂಲಕ ಸದಸ್ಯರ ಆರ್ಥಿಕ ಮಟ್ಟ ಸುಧಾರಿಸುವ ಕೆಲಸ ಮಾಡಲಾಗುತ್ತಿದೆ. ಮರಿಯಾಲದ ಬಳಿ ಸಂಘದ ಸದಸ್ಯರಿಗೆ ನಿವೇಶನ ನೀಡಲಾಗಿದೆ ಎಂದರು.
ನಿರಂತರವಾಗಿ ಪುಣ್ಯದ ಕೆಲಸ ಮಾಡಿ: ನಗರದ ವಿರಕ್ತ ಮಠದ ಚನ್ನಬಸವಸ್ವಾಮೀಜಿ ಮಾತನಾಡಿ, ಸಹಕಾರ ಸಂಘಗಳ ಮೂಲಕ ಸಮುದಾಯದ ಬಂಧುಗಳು ಆರ್ಥಿಕ ಅಭಿವೃದ್ಧಿಯನ್ನುಹೊಂದುವ ಜೊತೆಗೆ ಸಮಾಜವನ್ನು ಜಾಗೃತಿಗೊಳಿಸುವ ಪುಣ್ಯದ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ. ಮಹಾಮನೆಯ ಮೂಲಕ ಬಸವಣ್ಣನವರ ಪರಿಕಲ್ಪನೆಯನ್ನು 21ನೇ ಶತಮಾನದಲ್ಲಿ ಪ್ರಚಲಿತಗೊಳಿಸುವ ಕಾರ್ಯಕ್ರಮಗಳು ನಡೆಯುತ್ತಿವೆ. ಎಲ್ಲ ಸದಸ್ಯರೂ ಸಹ ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಯನ್ನು ಹೊಂದಲಿ ಎಂದು ಶುಭ ಕೋರಿದರು.
ಜಿಲ್ಲೆಗೆ ಕೀರ್ತಿ ತಂದಿದ್ದಾರೆ: ಸಂಘದ ಅಧ್ಯಕ್ಷ ಪರಮೇಶ್ವರಪ್ಪ ಮಾತನಾಡಿ, ನಮ್ಮ ಸಮುದಾಯದ ಹಲವು ವಿದ್ಯಾರ್ಥಿಗಳು ಈ ಬಾರಿಯ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆಯಾಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅವರಿಗೆ ಸಂಘದ ಪರವಾಗಿ ಶುಭಾಶಯಗಳನ್ನು ತಿಳಿಸುತ್ತೇನೆ ಎಂದರು. ಇದೇ ರೀತಿಯಾಗಿ ಅವರ ಮುಂದಿನ ಭವಿಷ್ಯವು ಉಜ್ವಲವಾಗಿರಲೆಂದು ಹಾರೈಸಿದರು.
ಮೂರು ಸಂಘಗಳ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಭಾ ಪುರಸ್ಕಾರ, ನಿವೃತ್ತರಿಗೆ ಸನ್ಮಾನ, ಸಾಧಕರಿಗೆ ಅಭಿನಂದನೆ ಹಾಗೂ ಸರ್ವ ಸದಸ್ಯರ ಸಭೆಯನ್ನು ನಡೆಸಲಾಯಿತು.
ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಬಸಪ್ಪ, ಬಸವೇಶ್ವರ ಪತ್ತಿನ ಸಂಘದ ಅಧ್ಯಕ್ಷ ಯೋಗ ಪ್ರಕಾಶ್, ಸಂಗಮ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಎಲ್. ದೇವಣ್ಣ, ಸಂಘದ ಪದಾಧಿಕಾರಿಗಳಾದ ಸಿದ್ದಮಲ್ಲಪ್ಪ, ಎಚ್.ಎಂ.ಗುರುಸ್ವಾಮಿ, ಗಂಗಾಧರ್, ಕೆ.ಬಿ.ಜ್ಯೋತಿ, ಎನ್.ಮಹದೇವಸ್ವಾಮಿ, ಪಿ.ಬಸವಣ್ಣ, ಆರ್.ಜಿ. ಪುಷ್ಪಲತಾ, ಎಸ್.ಮಹದೇವಸ್ವಾಮಿ, ಜಿ.ಶಿವಮಲ್ಲಪ್ಪ, ವಿ.ನಂದೀಶ್, ಶಂಭುಲಿಂಗಸ್ವಾಮಿ, ಜಿ.ನಾಗರಾಜು, ನಾಗರಾಜಪ್ಪ, ಎಂ.ಕುಮಾರ್, ಜಯಶಂಕರಮೂರ್ತಿ, ಎಸ್.ಶಂಭುಲಿಂಗಪ್ಪ, ಅರ್ಕಪ್ಪ, ಪ್ರಸಾದ್, ಪರಶಿವಮೂರ್ತಿ ಸೇರಿದಂತೆ ಸಮುದಾಯದ ಮುಖಂಡರು ಮತ್ತು ವಿದ್ಯಾರ್ಥಿಗಳ ಪೋಷಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್