ಸುಧಾಕರ್ ಅನರ್ಹಗೊಂಡ ಜಿಲ್ಲೆಯ ಮೊದಲ ಶಾಸಕ
ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಶಾಸಕ • ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅನರ್ಹ ಅಸ್ತ್ರ
Team Udayavani, Jul 29, 2019, 10:58 AM IST
ಚಿಕ್ಕಬಳ್ಳಾಪುರ: ಜಿಲ್ಲೆ ರಾಜಕಾರಣದ ಇತಿಹಾಸದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಅನರ್ಹಗೊಂಡ ಶಾಸಕ ಎಂಬ ಅಪ ಖ್ಯಾತಿಗೆ ಈಗ ಚಿಕ್ಕಬಳ್ಳಾಪುರ ಮೊದಲ ಶಾಸಕ ಡಾ.ಕೆ.ಸುಧಾಕರ್ ಒಳಗಾಗಿದ್ದು, ರಾಜ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಅನರ್ಹ ಪ್ರಕರಣ ಈಗ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಗೆ ಕಾರಣವಾಗಿದೆ.
ಭಾನುವಾರ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ತುರ್ತು ಸುದ್ದಿಗೋಷ್ಠಿ ನಡೆಸಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಸುಧಾಕರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ನ 14 ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ಹೊರಡಿಸಿದ ಆದೇಶ ರಾಜ್ಯ ರಾಜಕೀಯ ವಲಯದಲ್ಲಿ ಮಾತ್ರವಲ್ಲದೇ ಜಿಲ್ಲೆಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ತಂದಿದೆ.
ಅತೃಪ್ತರಿಗೆ ಬಿಗ್ ಶಾಕ್: ರಾಜ್ಯ ಕಾಂಗ್ರೆಸ್, ಜೆಡಿಎಸ್ನ 14 ತಿಂಗಳ ಮೈತ್ರಿ ಸರ್ಕಾರದ ಪತನಕ್ಕೆ ರಾಜೀನಾಮೆ ಮೂಲಕ ಕಾರಣವಾದ 17 ಮಂದಿ ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಶಾಸಕರು ಮೈತ್ರಿ ಸರ್ಕಾರ ಪತನಗೊಂಡರೂ ಮುಂಬೈನಿಂದ ವಾಪಸ್ಸು ಆಗಿಲ್ಲ.
ಆದರೆ ಸರ್ಕಾರದ ಪತನಕ್ಕೆ ಕಾರಣವಾದ ತಮ್ಮ ಪಕ್ಷಗಳ ಶಾಸಕರನ್ನು ಅನರ್ಹಗೊಳಿಸುವಂತೆ ಆಯಾ ಪಕ್ಷಗಳ ಶಾಸ ಕಾಂಗ ಪಕ್ಷದ ನಾಯಕರು ಸ್ಪೀಕರ್ಗೆ ನೀಡಿದ್ದ ದೂರಿನ ಅನ್ವಯ ಸ್ಪೀಕರ್ ವಿಚಾರಣೆ ನಡೆಸಿ ಅನರ್ಹದ ಅಸ್ತ್ರ ಬಳಸುವ ಮೂಲಕ ಅತೃಪ್ತ ಶಾಸಕರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಅನರ್ಹಗೊಂಡಿ ರುವ ಶಾಸಕರ ಪೈಕಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ಶಾಸ ಸುಧಾಕರ್ ಕೂಡ ಒಬ್ಬರು ಎನ್ನುವುದು ಗಮರ್ನಾಹ ಸಂಗತಿ.
ಅನರ್ಹ ಕುಖ್ಯಾತಿ: ಚಿಕ್ಕಬಳ್ಳಾಪುರ ಜಿಲ್ಲೆಯ ರಾಜಕಾರಣದಲ್ಲಿ ಈ ರೀತಿಯ ಯಾವ ಶಾಸಕರು ಕೂಡ ಪಕ್ಷ ವಿರೋಧಿ ಚಟುವಟಿಕೆಗಳಿಂದ ಅನರ್ಹಗೊಂಡ ಉದಾಹರಣೆ ಇಲ್ಲ. ಪಕ್ಷ ವಿರೋಧಿ ಚಟುವಟಿಕೆಗಳಿಂದ ಪಕ್ಷದಿಂದ ಉಚ್ಛಾಟನೆ ಸೇರಿ ದಂತೆ ಚುನಾವಣೆಗಳ ಸಂದರ್ಭದಲ್ಲಿ ಭಿ ಪಾರಂ ಕಳೆದು ಕೊಂಡಿರುವುದು ಬಿಟ್ಟರೆ ಅಧಿಕಾರದಲ್ಲಿರುವಾಗಲೇ ಶಾಸಕ ಸ್ಥಾನದಿಂದ ಅನರ್ಹಗೊಂಡ ಕುಖ್ಯಾತಿಗೆ ಡಾ.ಕೆ.ಸುಧಾಕರ್ ಒಳಗಾಗಿದ್ದಾರೆ.
ಸುಧಾಕರ್ ಮುಂದಿನ ರಾಜಕೀಯ ನಡೆ ಕುರಿತು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕಳೆದ 2018ರ ವಿಧಾನಸಭೆಯ ಸಾರ್ವ ತ್ರಿಕ ಚುನಾವಣೆಯಲ್ಲಿ 30 ಸಾವಿರ ಅತ್ಯಧಿಕ ಮತಗಳ ಅಂತರ ದಿಂದ ಸತತ ಎರಡನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು.
ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅತೃಪ್ತಗೊಂಡು ಕೊನೆ ಗಳಿಗೆಯಲ್ಲಿ ಕೈಗೆ ಬಂದ ಮಹತ್ವದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳದೇ ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಸಾರಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸರ್ಕಾರದ ಪತನಕ್ಕೆ ವರು ಸಹ ಕಾರಣರಾಗಿದ್ದರು.
ರಾಜಕೀಯ ಭವಿಷ್ಯ ಡೋಲಾಯಮಾನ: ಸದ್ಯ ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಸುಧಾಕರ್ರ ಮುಂದಿನ ರಾಜಕೀಯ ಭವಿಷ್ಯ ಸದ್ಯಕ್ಕೆ ಡೋಲಾಯಮಾನವಾಗಿದೆ. ಅನರ್ಹದ ಬಗ್ಗೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದರೂ ಸಹ ಪ್ರಕರಣ ಇತ್ಯರ್ಥವಾಗುವವರೆಗೂ ಕ್ಷೇತ್ರದಲ್ಲಿ ಎದುರಾಗುವ ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಹೀಗಾಗಿ ಸುಧಾಕರ್ ಸದ್ಯಕ್ಕೆ ರಾಜಕೀಯ ಅನಿಶ್ಚಿತತೆಯ ಕಾರ್ಮೋಡ ದಲ್ಲಿ ಕಾಲ ಕಳೆಯಬೇಕಿದೆ. ಇನ್ನೂ ಸುಧಾಕರ್ ಅನರ್ಹ ಪ್ರಕರಣ ಅವರ ಬೆಂಬಲಿಗರನ್ನು ಚಿಂತೆಗೀಡು ಮಾಡಿದೆ.
ಸ್ಪೀಕರ್ ತೀರ್ಪಿಗೆ ಪರ, ವಿರೋಧ: ಸದ್ಯ ಅತೃಪ್ತ ಶಾಸಕರ ಅನರ್ಹ ಪ್ರಕರಣ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಸ್ಪೀಕರ್ ನಡೆ ಬಗ್ಗೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಕೂಡ ಪರ, ವಿರೋಧ ಚರ್ಚೆ ಆಗುತ್ತಿದೆ. ಮತ್ತೂಂದು ಕ್ಷೇತ್ರದ ಕೆಲ ಹಳೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸ್ಪೀಕರ್ ಆದೇಶ ಸಂತಸ ತಂದಿದೆ. ಸುಧಾಕರ್ಗೆ ತಕ್ಕಪಾಠ ಆಗಬೇಕಿದೆ.
ಪಕ್ಷದಿಂದ ಗೆದ್ದು ಪಕ್ಷಕ್ಕೆ ಮೋಸ ಮಾಡಿದರೆ ಯಾರು ಕ್ಷಮಿಸುವುದಿಲ್ಲ. ಸ್ಪೀಕರ್ ಎಲ್ಲಾ ಪಕ್ಷ ವಿರೋಧಿ ಚಟುವಟಿಕೆಗಳಿಗೆ ತಕ್ಕಪಾಠ ಕಲಿಸಿದ್ದಾರೆಂಬ ಮಾತು ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಕ್ಷೇತ್ರಕ್ಕೆ ಉಪ ಚುನಾವಣೆ ಖಚಿತ: ಸದ್ಯಕ್ಕೆ ಸ್ಪೀಕರ್ ಆದೇಶ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಬರುವುದು ಖಚಿತವಾಗಿದೆ. ಸ್ಪೀಕರ್ ಆದೇಶ ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರೂ ಇತ್ಯರ್ಥ ಆಗುವುದು ತಡವಾಗಬಹುದು. ಇದರಿಂದ ಅನರ್ಹಗೊಂಡ ಶಾಸಕರ ಕ್ಷೇತ್ರಗಳಿಗೆ ಶೀಘ್ರ ಉಪ ಚುನಾವಣೆ ನಡೆಯಬಹುದು ಎನ್ನಲಾಗುತ್ತಿದೆ. ಸುಧಾಕರ್ ರಾಜೀನಾಮೆ ಕೊಟ್ಟ ದಿನದಿಂದಲೂ ಟಿಕೆಟ್ಗಾಗಿ ರಾಜಕೀಯ ಪಕ್ಷಗಳ ನಾಯಕರ ಕದ ತಟ್ಟಿದ್ದಾರೆ.
● ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!