ಬಿಎಸ್ ವೈ ವಿಶ್ವಾಸಮತ ಗೆದ್ದ ಬೆನ್ನಲ್ಲೇ ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ರಾಜೀನಾಮೆ
Team Udayavani, Jul 29, 2019, 12:14 PM IST
ಬೆಂಗಳೂರು: ಕಳೆದ 14 ತಿಂಗಳ ಕಾಲ ನಾನು ಸಂವಿಧಾನಬದ್ಧವಾಗಿ, ಆತ್ಮಸಾಕ್ಷಿಯಾಗಿ ಅನುಗುಣವಾಗಿ ಮೈತ್ರಿ ಸರಕಾರದಲ್ಲಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ ತೃಪ್ತಿ ಇದೆ. ಸರಕಾರಕ್ಕೆ ಬಹುಮತ ಇಲ್ಲದ ಕಾರಣ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ರಮೇಶ್ ಕುಮಾರ್ ತಿಳಿಸಿದ್ದಾರೆ.
ಮೈತ್ರಿ ಸರಕಾರ ಅಧಿಕಾರಕ್ಕೆ ಬಂದಾಗ ನನ್ನ ಸರ್ವಾನುಮತದಿಂದ ಸ್ಪೀಕರ್ ಆಗಿ ನೇಮಕ ಮಾಡಿದ್ದಾರೆ. 14 ತಿಂಗಳಿನಿಂದ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದೇನೆ. ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ನಾನೆಂದೂ ಯಾವುದನ್ನೂ ಬಯಸಿದವನಲ್ಲ. ಇಲಾಖೆಯ ಎಲ್ಲಾ ಸಿಬ್ಬಂದಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಸದನದಲ್ಲಿ ನನ್ನದೊಂದು ಮನವಿ ಚುನಾವಣಾ ವ್ಯವಸ್ಥೆ ಸುಧಾರಣೆ ಅಗತ್ಯ, ಈ ಬಗ್ಗೆ ಕೇಂದ್ರವನ್ನು ಒತ್ತಾಯಿಸೋಣ ಎಂದರು.
ಯಾರ ಒತ್ತಡಕ್ಕೂ ಮಣಿದಿಲ್ಲ, ನಾನು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. 10ನೇ ಶೆಡ್ಯೂಲ್ ಪುನರ್ ಪರಿಶೀಲನೆ ನಡೆಸಬೇಕಾದ ಅಗತ್ಯವಿದೆ. ಸಂಸದೀಯ ಪ್ರಜಾಪ್ರಭುತ್ವ ಉಳಿಯಬೇಕು. ಈ ನಿಟ್ಟಿನಲ್ಲಿ ನಾವು ಆಲೋಚಿಸಬೇಕಾಗಿದೆ. ಲೋಕಾಯುಕ್ತ ಕಾನೂನು ಸಹ ಸುಧಾರಣೆಯಾಗಬೇಕಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಈ ದೇಶದ ಭ್ರಷ್ಟಾಚಾರದ ಮೂಲಗಳು ಚುನಾವಣೆ. ಚುನಾವಣೆಗಳು ಸುಧಾರಣೆಯಾಗದಿದ್ದರೆ ಭ್ರಷ್ಟಾಚಾರಕ್ಕೆ ಕಡಿವಾಣ ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ
MUST WATCH
ಹೊಸ ಸೇರ್ಪಡೆ
ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ
ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು