ಕೃಷಿಗೆ ಮುನ್ನ ಮಣ್ಣು ಪರೀಕ್ಷೆ ನಡೆಸುವುದು ಅಗತ್ಯ

ಭೂಮಿಯಲ್ಲಿ ಕಾರ್ಬನ್‌ ಪ್ರಮಾಣ ಕಡಿಮೆಯಾದರೆ ಬೆಳೆ ಕಷ್ಟ • ರೈತರಿಗೆ ಸಹಜ ಬೇಸಾಯ ಶಾಲೆ ವಿಜ್ಞಾನಿ ಡಾ.ಮಂಜುನಾಥ್‌ ಸಲಹೆ

Team Udayavani, Jul 29, 2019, 12:31 PM IST

TK-TDY-2

ತುಮಕೂರು: ಭೂಮಿಯಲ್ಲಿ ಕಾರ್ಬನ್‌ ಪ್ರಮಾಣ ಕಡಿಮೆಯಾದರೆ ಎಷ್ಟು ನೀರು ಹಾಯಿಸಿದರೂ ವ್ಯರ್ಥವಾಗುತ್ತದೆ. ಕೃಷಿ ಮಾಡುವ ಮುಂಚೆ ಮಣ್ಣು ಪರೀಕ್ಷೆ ಮಾಡಲೇ ಬೇಕು ಎಂದು ಸಹಜ ಬೇಸಾಯ ಶಾಲೆ ವಿಜ್ಞಾನಿ ಡಾ.ಎಚ್.ಮಂಜುನಾಥ್‌ ತಿಳಿಸಿದರು.

ನಗರದ ಸರ್‌.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಭವನದಲ್ಲಿ ಭಾನುವಾರ ರಾಜ್ಯ ವಿಜ್ಞಾನ ಮತ್ತು ತಂತ್ರ ವಿದ್ಯಾಮಂಡಳಿ, ತುಮಕೂರು ವಿಜ್ಞಾನ ಕೇಂದ್ರ, ಸಹಜ ಬೇಸಾಯ ಶಾಲೆ, ಜೀವನಾಡಿ ಯುವ ಬಳಗ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಜಿಲ್ಲೆಯ ಜಲ ಬಿಕ್ಕಟ್ಟು, ಕಾರಣಗಳು, ಪರಿಹಾರಗಳು ಕುರಿತ ಜಿಲ್ಲಾ ಜಲಾಸಕ್ತರ ಜಲದಜಾಡು ಸಮಾವೇಶದಲ್ಲಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯಲ್ಲಿ ಗ್ರಾಮೀಣ ಸಮುದಾಯದ ಕೃಷಿಭೂಮಿ ಮತ್ತು ರೈತ ಜಲಾನಯನ ಪ್ರದೇಶದ ಅವಿಭಾಜ್ಯ ಅಂಗ ವಿಷಯ ಕುರಿತು ಮಾತನಾಡಿದರು.

ಮಣ್ಣಿನಲ್ಲಿರುವ ಕಾರ್ಬನ್‌ ಪ್ರಮಾಣದ ಬಗ್ಗೆ ವಿಜ್ಞಾನಿಗಳು ವಿವಿಯಲ್ಲಿ ಕುಳಿತು ಚರ್ಚೆ ನಡೆಸುತ್ತಾರೆ. ಕಾರ್ಬನ್‌ ಪ್ರಮಾಣ ಹೆಚ್ಚಿಸುವ ಕುರಿತು ರೈತರು ಮನಸ್ಸು ಮಾಡುತ್ತಿಲ್ಲ. ಸರ್ಕಾರದ ಪ್ರಕಾರ ಕೃಷಿ ಭೂಮಿಯಲ್ಲಿ 0.75 ಕಾರ್ಬನ್‌ ಡೈ ಆಕ್ಸೆ ೖಡ್‌ ಪ್ರಮಾಣ ಇರಬೇಕು. ಜಿಲ್ಲೆಯ ಕೃಷಿ ಭೂಮಿಲ್ಲಿ ಕೇವಲ 0.3 ಇದೆ. ಹೀಗಾಗಿ ಭೂಮಿಯಲ್ಲಿ ನೀರಿನ ಪ್ರಮಾಣ ಹಿಡಿದಿಟ್ಟುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ವ್ಯರ್ಥ ನೀರು ಮರುಬಳಕೆ ಮಾಡಿ: ರೈತರು ಹೇಮಾವತಿ, ಎತ್ತಿನಹೊಳೆ ಹಾಗೂ ಭದ್ರಾ ಯೋಜನೆಯ ನೀರು ಆಧಾರಿತ ಕೃಷಿಗೆ ಅಂಟಿಕೊಳ್ಳಬಾರದು. ಮನೆಯಿಂದ ಬರುವ ವ್ಯರ್ಥ ನೀರು ಮರುಬಳಕೆ ಮಾಡಿಕೊಂಡು ಕೃಷಿ ಮಾಡಬೇಕು. ಒಂದು ದಿನಕ್ಕೆ ಒಬ್ಬ ಮನುಷ್ಯನಿಗೆ 125 ಲೀಟರ್‌ ನೀರು ಬೇಕು. ಈ ನೀರಿನಲ್ಲಿ ಸಬ್‌ ಸಾಯಿಲ್ ಇರ್ರಿಗೇಷನ್‌ ಮಾಡಿ ಒಂದು ಮರಕ್ಕೆ 2.5 ಲೀಟರ್‌ ನೀರು ಕೊಡಬಹುದು ಎಂದು ತಿಳಿಸಿದರು.

ಕಡಿಮೆ ನೀರಿನಲ್ಲಿ ಬೆಳೆ ಬೆಳೆಯಿರಿ: ಕರ್ನಾಟಕ ಪ್ರಾಕೃತಿಕ ವಿಕೋಪ ನಿರ್ವಹಣಾ ಸಮಿತಿ ವಿಶೇಷ ನಿರ್ದೇಶಕ ಡಾ.ವಿ.ಎಸ್‌.ಪ್ರಕಾಶ್‌ ಮಾತನಾಡಿ, ತುಮಕೂರಲ್ಲಿ 13 ಎಂಎಂ ಮಳೆ ಬೀಳುತ್ತದೆ. ವರ್ಷ ದಲ್ಲಿ 15 ಬಾರಿ ಇಷ್ಟು ಮಳೆ ಆಗಬಹುದು. ಶೇ.70ರಷ್ಟು ಜನರು 1.5 ಎಕರೆಭೂಮಿ ಹೊಂದಿದ್ದಾರೆ. 1 ಎಕರೆ ಭತ್ತ ಬೆಳೆಯುವುದನ್ನು ಕಡಿಮೆ ಮಾಡಿದರೆ 2 ಸಾವಿರ ಜನಸಂಖ್ಯೆ ಇರುವ ಗ್ರಾಮಕ್ಕೆ ಕುಡಿಯುವ ನೀರು ಒದಗಿಸಬಹುದು. ಸರ್ಕಾರ ಗ್ರಾಮೀಣ ಪ್ರದೇಶದ ಹಿಡುವಳಿದಾರರಿಗೆ ಜಾಗೃತಿ ಮೂಡಿಸಲು ಹಾಗೂ ತಲುಪಿಸುವಲ್ಲಿ ವೈಫ‌ಲ್ಯ ಕಾಣುತ್ತಿದೆ. ಭತ್ತ ಬೆಳೆಯುವ ಬದಲಾಗಿ ಕಡಿಮೆ ನೀರು ಪಡೆಯುವ ಬೆಳೆ ಬೆಳೆಯಲು ರೈತರ ಮನವೊಲಿಸಬೇಕು ಎಂದು ಸಲಹೆ ನೀಡಿದರು. ಪರಸರವಾದಿ ಸಿ.ಯತಿರಾಜ್‌ ಮಾತನಾಡಿ, ಸರ್ಕಾರ ಘನ ತ್ಯಾಜ್ಯ ವಿಲೇವಾರಿ ಮಾಡಲು ಭೂಮಿಗೆ ಹಣ ಸುರಿಯುತ್ತಿದೆ. ನಿರ್ವಹಣೆಗೆ ಹೆಚ್ಚು ಭೂಮಿ ಬೇಕು. ರೈತರು ಭೂಮಿ ನೀಡುತ್ತಿಲ್ಲ. ಹೀಗಾಗಿ ಕೃಷಿ ಭೂಮಿಗೆ ಘನತ್ಯಾಜ್ಯ ಬಳಕೆ ಮಾಡಲು ಯೋಜನೆ ರೂಪಿಸಬೇಕು. ತ್ಯಾಜ್ಯ ಸಂಸ್ಕರಣೆ, ಘಟಕ ವಿಶ್ಲೇಷಣೆ ಮಾಡಿ ಕೃಷಿಗೆ ಬಳಸಬಹುದು ಎಂದರು. ವಿಜ್ಞಾನ ಕೇಂದ್ರದ ಅಧ್ಯಕ್ಷ ಸಿ.ವಿಶ್ವನಾಥ್‌, ರಾಮಕೃಷ್ಣ, ರಾಮಚಂದ್ರ, ಸಿ.ಕೆ.ಮಹೇಂದ್ರ, ಡಾ.ವಿ.ಎಸ್‌.ಪ್ರಕಾಶ್‌, ಎಸ್‌.ಜಿ.ಶ್ರೀ ಕಂಠೇಶ್ವರ ಸ್ವಾಮಿ, ಮಲ್ಲಿಕಾರ್ಜುನ್‌ ಇದ್ದರು.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.