ಉನ್ನತ ಶಿಕ್ಷಣದಿಂದ ದೂರವಾಗುವ ಭೀತಿಯಲ್ಲಿ ಗ್ರಾಮೀಣ ವಿದ್ಯಾರ್ಥಿನಿಯರು

ಬಾಲಕಿಯರ ವಸತಿ ನಿಲಯದ ಕೊರತೆ ; ಗ್ರಾಮೀಣ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಹೊಡೆತ

Team Udayavani, Jul 30, 2019, 5:02 AM IST

2144A

ಸಾಂದರ್ಭಿಕ ಚಿತ್ರ

ಉಡುಪಿ: ಶಿಕ್ಷಣ ಕಾಶಿ ಖ್ಯಾತಿಯ ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣದಿಂದ ವಂಚಿತರಾಗುವ ಭೀತಿ ಎದುರಾಗಿದೆ.

ಕುಂದಾಪುರ, ಬೈಂದೂರು, ಸಿದ್ಧಾಪುರ, ಹೆಬ್ರಿ ಸೇರಿದಂತೆ ವಿವಿಧ ಪ್ರದೇಶಗಳಿಂದ ಉಡುಪಿ ಸರಿಸುಮಾರು 30ರಿಂದ 40 ಕಿ.ಮೀ. ದೂರವಿದೆ. ಈ ಪ್ರದೇಶ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಪಡೆಯಲು ಮುಂದಾಗುತ್ತಿದ್ದಾರೆ. ಅವರಲ್ಲಿ ಶೇ.90ರಷ್ಟು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರು ಸರಕಾರಿ ವಸತಿ ನಿಲಯ ನಂಬಿ ಶಿಕ್ಷಣ ಪಡೆಯಲು ಮುಂದಾಗುತ್ತಿದ್ದಾರೆ. ಆದರೆ ನಗರದಲ್ಲಿ ಬಾಲಕಿಯರ ವಸತಿ ನಿಲಯ ಕೊರತೆಯಿದ್ದು, ಎಲ್ಲರಿಗೂ ಸರಕಾರಿ ವಸತಿ ನಿಲಯಗಳಿಗೆ ಪ್ರವೇಶ ಸಿಗದೆ ಇರುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣದಿಂದ ದೂರ ಉಳಿಯುವ ಸಾಧ್ಯತೆಗಳು ಹೆಚ್ಚಾಗುತ್ತಿವೆ.

ಬೇಡಿಕೆಗೆ ತಕ್ಕಂತೆ ವಸತಿ ನಿಲಯವಿಲ್ಲ
ಜಿಲ್ಲೆಯ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾಕ ಇಲಾಖೆಯಲ್ಲಿ ಮೆಟ್ರಿಕ್‌ ಅನಂತರದ ಬಾಲಕಿಯರ ಹಾಸ್ಟೆಲ್‌ಗ‌ಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಆದರೆ ಬೇಡಿಕೆಗೆ ತಕ್ಕಂತೆ ಹಾಸ್ಟೆಲ್‌ಗ‌ಳು ಇಲ್ಲ.

ಜನಪ್ರತಿನಿಧಿಗಳ ಬೆನ್ನತ್ತುವ ವಿದ್ಯಾರ್ಥಿಗಳು
ವಿದ್ಯಾಸಿರಿ ಯೋಜನೆಯಡಿ ಹಾಸ್ಟೆಲ್‌ ವಂಚಿತ ವಿದ್ಯಾರ್ಥಿಗೆ 1,500 ರೂ. ವಿತರಿಸಲಾಗುತ್ತದೆ. ಮೆರಿಟ್‌ ಆಧಾರದ ಮೇಲೆ ವಿದ್ಯಾರ್ಥಿ ವೇತನ ವಿತರಿಸಲಾಗುತ್ತಿದೆ. ಆದರೆ ಉಡುಪಿ ನಗರದಲ್ಲಿ ಖಾಸಗಿ ವಸತಿ ನಿಲಯದಲ್ಲಿ ತಿಂಗಳಿಗೆ 2,500- 3,000 ರೂ. ತೆರಬೇಕಾಗಿರುವುದರಿಂದ ವಿದ್ಯಾರ್ಥಿಗಳು ಸರಕಾರಿ ಹಾಸ್ಟೆಲ್‌ ಸೇರ್ಪಡೆಗೆ ಶಿಫಾರಸು ಪಡೆಯಲು ಜನಪ್ರತಿನಿಧಿಗಳ ಬೆನ್ನತ್ತಿದ್ದಾರೆ.

ಬೇಡಿಕೆ ಯಾಕೆ?
ನಗರದಲ್ಲಿ ಸರಕಾರಿ ಮಹಿಳಾ ಕಾಲೇಜು, ಸ್ನಾತಕೋತ್ತರ ಕೇಂದ್ರ, ಬಾಲಕಿಯರ ಪ.ಪೂ. ಹಲವು ಮೆಡಿಕಲ್‌, ಕಾನೂನು ಸೇರಿದಂತೆ ವಿವಿಧ ಕಾಲೇಜುಗಳಿವೆ. ಶಿಕ್ಷಣ ಸಂಸ್ಥೆಯಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸ್ಟೆಲ್‌ಗ‌ಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಜತೆಗೆ ಜನರಲ್ಲಿ, ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಅರಿವು ಮೂಡಿದ್ದು, ಉನ್ನತ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು ಮುಂದೆ ಬರುತ್ತಿದ್ದಾರೆ ಎನ್ನುವುದು ಇಲಾಖೆಯ ಅವರ ಅಭಿಪ್ರಾಯ.

ಬಾಲಕಿಯ ವಸತಿ ನಿಲಯ
ಉಡುಪಿಯಲ್ಲಿ ಪ್ರಸ್ತುತ ಬನ್ನಂಜೆ, ಆದಿ ಉಡುಪಿ, ಕಿನ್ನಿಮೂಲ್ಕಿ, ಕುಂಜಿಬೆಟ್ಟು ಸೇರಿದಂತೆ ಒಟ್ಟು 7 ಬಾಲಕಿಯರ ವಸತಿ ನಿಲಯಗಳಿವೆ. ಪ್ರತಿ ವಸತಿ ನಿಲಯದ ಸಂಖ್ಯಾಬಲ ಸುಮಾರು 100 ಹತ್ತಿರವಿದೆ. ಇಲ್ಲಿ ವಸತಿ ನಿಲಯದ ಪ್ರವೇಶವನ್ನು ಮೆರಿಟ್‌ ಆಧಾರದಲ್ಲಿ ನೀಡಲಾಗುತ್ತದೆ. ಜಿಲ್ಲೆಯ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ.

ನಿರ್ಮಾಣಕ್ಕೆ ಪ್ರಸ್ತಾವನೆ
ನಗರದಲ್ಲಿ ಬಾಲಕಿಯರ ವಸತಿ ನಿಲಯಕ್ಕೆ ಹೆಚ್ಚಿನ ಬೇಡಿಕೆಯಿದೆ. ಅದನ್ನು ಮನಗಂಡು ಈಗಾಗಲೇ ಬಾಲಕಿಯರ ವಸತಿ ನಿಲಯ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
-ಗಿರಿಧರ್‌, ತಾಲೂಕು ಅಧಿಕಾರಿ, ಹಿಂದುಳಿದ ವರ್ಗಗಳ
ಇಲಾಖೆ, ಉಡುಪಿ.

-ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.