370ನೇ ವಿಧಿ ಚರ್ಚೆಗೆ ಕಾವುಕೊಟ್ಟ ಆದೇಶಗಳು
Team Udayavani, Jul 30, 2019, 5:12 AM IST
ಶ್ರೀನಗರ: ಜಮ್ಮು ಕಾಶ್ಮೀರಕ್ಕೆ ಇತ್ತೀಚೆಗೆ 10 ಸಾವಿರ ಹೆಚ್ಚುವರಿ ಸೇನಾ ಸಿಬ್ಬಂದಿಯನ್ನು ಕಳುಹಿಸಿದ ಕೇಂದ್ರ ಸರ್ಕಾರದ ನಿರ್ಧಾರದ ಜೊತೆಗೆ ರಾಜ್ಯದಲ್ಲಿ ಎಷ್ಟು ಮಸೀದಿಗಳಿವೆ ಮತ್ತು ರಾಜ್ಯದಲ್ಲಿ ಟ್ಯಾಕ್ಸಿಗಳ ಸಂಖ್ಯೆ ಹಾಗೂ ಪೆಟ್ರೋಲ್ ಪಂಪ್ಗ್ಳ ಸಾಮರ್ಥ್ಯ ಎಷ್ಟಿದೆ ಎಂದು ವರದಿ ನೀಡುವಂತೆ ಆಡಳಿತಾಧಿಕಾರಿಗಳು ನೋಟಿಸ್ ನೀಡಿದ್ದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಅಷ್ಟೇ ಅಲ್ಲ, ಇದು ರಾಜ್ಯದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ಹಿಂಪಡೆಯುವ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿದೆ ಎಂಬ ಚರ್ಚೆಗೂ ಕಾವು ನೀಡಿದೆ. ಈ ವಿಚಾರದ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಭೇಟಿಗಾಗಿ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಹಾಗೂ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಸಮಯ ಕೇಳಿದ್ದರೆ, ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆಯುವಂತೆ ಮನವಿ ಮಾಡಿ ಎಂದು ಫಾರೂಕ್ ಅಬ್ದುಲ್ಲಾರನ್ನು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆಗ್ರಹಿಸಿದ್ದಾರೆ.
ಈ ಮಧ್ಯೆ ಇದಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಎನ್ಸಿ ಮತ್ತು ಪಿಡಿಪಿ ಅನಗತ್ಯವಾಗಿ ಗದ್ದಲ ಎಬ್ಬಿಸುತ್ತಿವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ