ಭಾರತ ಈಗ ಹುಲಿರಾಯನ ಸುರಕ್ಷಿತ ತಾಣ

ಮಧ್ಯಪ್ರದೇಶ ಪ್ರಥಮ, ಕರ್ನಾಟಕಕ್ಕೆ ದ್ವಿತೀಯ ಸ್ಥಾನ 2018ರ ಅಖೀಲ ಭಾರತ ಹುಲಿ ಗಣತಿ ವರದಿಯಲ್ಲಿ ಉಲ್ಲೇಖ

Team Udayavani, Jul 30, 2019, 6:00 AM IST

a-30

ನವದೆಹಲಿ: ವಿಶ್ವದಲ್ಲೇ ಅತಿ ಹೆಚ್ಚು ಹುಲಿಗಳ ಆವಾಸ ಸ್ಥಾನವಾಗಿ ಭಾರತ ಹೊರಹೊಮ್ಮಿದೆ. 2018ರ ಅಖೀಲ ಭಾರತ ಹುಲಿ ಗಣತಿ ವರದಿಯ ಪ್ರಕಾರ, ಭಾರತದಲ್ಲಿ ಪ್ರಸಕ್ತ 2,967 ಹುಲಿಗಳಿರುವುದು ಖಾತ್ರಿಯಾಗಿದೆ. 2006ರಲ್ಲಿ 1,411 ಹುಲಿಗಳಿದ್ದವು. ಈ ಹಿನ್ನೆಲೆಯಲ್ಲಿ, ಭಾರತವು ವಿಶ್ವದಲ್ಲೇ ಹುಲಿಗಳ ಪಾಲಿನ ಅತಿ ಸುರಕ್ಷಾ ವಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಈ ಗಣತಿಯನ್ನು 2018ರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಸ್ವಯಂ ಸೇವಕರ ತಂಡ ದೇಶದ 3,81,400 ಚದರ ಕಿಮೀ ಪ್ರದೇಶ ವ್ಯಾಪ್ತಿಯಲ್ಲಿ ನಡೆಸಿತ್ತು.

ಸಂಕಲ್ಪದಿಂದ ಸಿದ್ಧಿ-ಪ್ರಧಾನಿ ಮೆಚ್ಚುಗೆ : ನವದೆಹಲಿಯಲ್ಲಿ ಹುಲಿ ಗಣತಿ ವರದಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ”ಒಂಭತ್ತು ವರ್ಷಗಳ ಹಿಂದೆ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ನಡೆದಿದ್ದ ವನ್ಯಜೀವಿ ಸಂರಕ್ಷಣೆ ಕುರಿತ ಸಮ್ಮೇಳನದಲ್ಲಿ ಎಲ್ಲಾ ರಾಷ್ಟ್ರಗಳಿಗೆ ತಮ್ಮಲ್ಲಿರುವ ಹುಲಿಯ ಸಂತತಿಯನ್ನು 2022ರೊಳಗೆ ದುಪ್ಪಟ್ಟು ಮಾಡಬೇಕೆಂದು ಕರೆ ನೀಡಲಾಗಿತ್ತು. ಭಾರತವು, ಆ ಗಡುವು ಮುಗಿಯಲು ಇನ್ನೂ ನಾಲ್ಕು ವರ್ಷ ಬಾಕಿ ಇರುವಂತೆಯೇ ಆ ಗುರಿಯನ್ನು ತಲುಪಿದೆ. ಸಂಕಲ್ಪದಿಂದ ಸಿದ್ಧಿಯಾಗುತ್ತದೆ ಎಂಬ ಮಾತಿಗೆ ಇದು ಸಾಕ್ಷಿ” ಎಂದರು.

‘ಟೈಗರ್‌ ಝಿಂದಾ ಹೈ’: ಹುಲಿ ಸಂತತಿಯ ಅಭಿವೃದ್ಧಿಯನ್ನು ಬಾಲಿವುಡ್‌ನ‌ ಎರಡು ಸಿನಿಮಾಗಳ ಶೀರ್ಷಿಕೆಗಳ ಮೂಲಕ ವಿವರಿಸಿದ ಪ್ರಧಾನಿ ಮೋದಿ, ಹಿಂದೆ ‘ಏಕ್‌ ಥಾ ಟೈಗರ್‌’ ಎಂಬ ಮಾತು ಚಾಲ್ತಿಯಲ್ಲಿತ್ತು. ಈಗ ‘ಟೈಗರ್‌ ಝಿಂದಾ ಹೈ’ ಎಂಬುದು ಸಾಬೀತಾಗಿದೆ. ಆದರೆ, ಇದು ಇಲ್ಲಿಗೇ ನಿಲ್ಲಬಾರದು. ಹುಲಿಗಳ ಸಂರಕ್ಷಣೆ ಹಾಗೂ ಅವುಗಳ ಸಂತಾನಾಭಿವೃದ್ಧಿ ಒಂದು ಕೈಂಕರ್ಯವಾಗಿ ಮುಂದುವರಿಯಬೇಕು ಎಂದು ಹೇಳಿದರು.

ಸಂರಕ್ಷಿತ ವಲಯಗಳ ಹೆಚ್ಚಳ: 2014ರಲ್ಲಿ ಭಾರತದಲ್ಲಿನ ಹುಲಿಗಳ ಸಂರಕ್ಷಿತ ವಲಯಗಳ ಸಂಖ್ಯೆ 692ರಷ್ಟಿತ್ತು. 2019ರ ಹೊತ್ತಿಗೆ ಇವು 860ರಷ್ಟಿವೆ. ಹಾಗೆಯೇ, ಹುಲಿಗಳ ಮೀಸಲು ಕೇಂದ್ರಗಳ ಸಂಖ್ಯೆಯು 2014ರಲ್ಲಿ 43ರಷ್ಟಿದ್ದರೆ, ಈ ವರ್ಷ ಅವು 100ರಷ್ಟಿವೆ ಎಂದ ಮೋದಿ, ದೇಶದ ಎಲ್ಲಾ ಜನರಿಗೆ ಸೂರು ನೀಡುವುದು ನಮ್ಮ ಸರ್ಕಾರದ ಆಶಯವಾಗಿದ್ದು, ಅದೇ ರೀತಿ ವನ್ಯಜೀವಿಗಳ ಅಭಿವೃದ್ಧಿಗೂ ಸರ್ಕಾರ ಶ್ರಮಿಸಲಿದೆ ಎಂದರು.

ಪ್ರಸ್ತುತ ಭಾರತದಲ್ಲಿರುವ ಹುಲಿಗಳ ಸಂಖ್ಯೆ
2,967: 2006ರಲ್ಲಿ ಭಾರತದಲ್ಲಿದ್ದ ಹುಲಿಗಳು
1,411: ಮಧ್ಯಪ್ರದೇಶದಲ್ಲಿರುವ ಹುಲಿಗಳ ಸಂಖ್ಯೆ
526: ಕರ್ನಾಟಕದಲ್ಲಿರುವ ಹುಲಿಗಳ ಸಂಖ್ಯೆ
524: ವರ್ಷ, ಹುಲಿಗಳ ಸಂಖ್ಯೆ

ರಾಜ್ಯಕ್ಕೆ 2ನೇ ಸ್ಥಾನ
ಮಧ್ಯಪ್ರದೇಶವು ದೇಶದಲ್ಲೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ಪ್ರಸ್ತುತ ಅಲ್ಲಿ 526 ಹುಲಿಗಳಿವೆ. 524 ಹುಲಿಗಳನ್ನು ಹೊಂದಿರುವ ಕರ್ನಾಟಕ, 2ನೇ ಸ್ಥಾನದಲ್ಲಿದೆ. ಆನಂತರದ ಸ್ಥಾನ ಉತ್ತರಾಖಂಡ (442) ರಾಜ್ಯದ್ದಾಗಿದೆ. 2014ರ ಗಣತಿ ಪ್ರಕಾರ ರಾಜ್ಯದಲ್ಲಿ 406 ಹುಲಿಗಳಿದ್ದವು. ಕಳೆದ 4 ವರ್ಷಗಳಲ್ಲಿ ಆ ಸಂಖ್ಯೆ 118 ಹೆಚ್ಚಾಗಿದೆ. ವಿಚಿತ್ರವೆಂದರೆ ಕಳೆದ ಎರಡೂ ಬಾರಿಯೂ ಕರ್ನಾಟಕವೇ ಮೊದಲ ಸ್ಥಾನದಲ್ಲಿತ್ತು.

ಟಾಪ್ ನ್ಯೂಸ್

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.