ಆಧಾರ್‌ ತಿದ್ದುಪಡಿಗೆ ಪರದಾಟ

•ಜನ ರೊಚ್ಚಿಗೆದ್ದು ಪ್ರತಿಭಟಿಸುವ ಮುನ್ನ ವ್ಯವಸ್ಥೆ ಸರಿಪಡಿಸಲು ಒತ್ತಾಯ

Team Udayavani, Jul 30, 2019, 11:07 AM IST

uk-tdy-2

ಕುಮಟಾ: ಪ್ರಧಾನ ಅಂಚೆ ಕಚೇರಿ ಸುತ್ತಲೂ ನಿಂತಿರುವ ಸಾರ್ವಜನಿಕರು.

ಕುಮಟಾ: ಆಧಾರ ಕಾರ್ಡ್‌ ತಿದ್ದುಪಡಿ, ಹೊಸ ನೋಂದಣಿ ಇನ್ನಿತರ ಕೆಲಸಕ್ಕಾಗಿ ಟೋಕನ್‌ ಪಡೆಯುವ ಉದ್ದೇಶದಿಂದ ಇಲ್ಲಿನ ಪ್ರಧಾನ ಅಂಚೆ ಕಚೇರಿಗೆ ಸಾವಿರಾರು ಜನ ಆಗಮಿಸಿದ್ದರಿಂದ ಸರತಿ ಸಾಲಿಗೂ ಜಾಗ ಸಾಲದೇ, ನೆಲ್ಲಿಕೇರಿ ಮುಖ್ಯ ರಸ್ತೆಯಲ್ಲಿ ಕೆಲಕಾಲ ಸಂಚಾರಕ್ಕೂ ಕಿರಿಕಿರಿಯಾದ ಘಟನೆ ನಡೆದಿದೆ.

ಆಧಾರ ಕಾರ್ಡ್‌ ಸಂಬಂಧ ಪ್ರಧಾನ ಅಂಚೆ ಕಚೇರಿ ನೋಂದಣಿ ವಿಭಾಗದಲ್ಲಿ 15 ದಿನ ಮುಂಚಿತವಾಗಿ ಟೋಕನ್‌ ಪಡೆದವರಲ್ಲಿ ಪ್ರತಿನಿತ್ಯ 50ಕ್ಕೂ ಹೆಚ್ಚು ಜನರ ಆಧಾರ್‌ ಕೆಲಸ ಮಾಡಿಕೊಡಲಾಗುತ್ತಿದೆ. ಇಡೀ ತಾಲೂಕಿನ ಜನರು ಇಲ್ಲಿ ಬರುವುದರಿಂದ ಒತ್ತಡ ವಿಪರೀತವಾಗಿದ್ದು, ಟೋಕನ್‌ ನೀಡುವ ದಿನದ ಮುಂಚಿನ ರಾತ್ರಿಯೇ ಬಂದು ಬಾಗಿಲು ತೆಗೆಯುವುದನ್ನೇ ಕಾಯುತ್ತಾ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಹೀಗಾಗಿಯೇ ಸೋಮವಾರ ಬೆಳಗ್ಗೆ ಸಾವಿರಾರು ಜನ ಅಂಚೆಕಚೇರಿ ಬಳಿ ಜಮಾಯಿಸಿ ಟೋಕನ್‌ಗಾಗಿ ಸರತಿಯಲ್ಲಿ ನಿಂತರು. ಕಚೇರಿಯ ವಿಶಾಲವಾದ ಆವಾರದಲ್ಲಿಯೂ ಜಾಗ ಸಾಲದೇ ನೆಲ್ಲಿಕೇರಿ ಮುಖ್ಯ ರಸ್ತೆ ಮೇಲೂ ಜನ ಜಮಾಯಿಸತೊಡಗಿದ್ದರಿಂದ ಜನ-ವಾಹನ ಸಂಚಾರಕ್ಕೆ ಕಿರಿಕಿರಿ ಅನುಭವಿಸುವಂತಾಯಿತು. ವೃದ್ಧರು, ಅಂಗವಿಕಲರು, ಮಹಿಳೆಯರು, ಮಕ್ಕಳನ್ನು ಕರೆತಂದವರು ಸೇರಿದಂತೆ ಸಾವಿರಾರು ಜನರು ತಾಸುಗಟ್ಟಲೆ ಸರತಿಯಲ್ಲಿ ನಿಲ್ಲಲು ಅಸಾಧ್ಯವೆಂದರಿತು ಕೆಲವರು ಮರಳಿ ನಡೆದರು. ಆದರೂ ಅಂಚೆ ಕಚೇರಿ ಆವಾರ ಟೋಕನ್‌ ಸಾಲಿನಿಂದ ಗಿಜಿಗುಡುತ್ತಿತ್ತು.

ಟೋಕನ್‌ಗಾಗಿ ಕಾಯುತ್ತಿದ್ದ ರಾಜೇಂದ್ರ ನಾಯಕ ಮಾತನಾಡಿ, ನಿಯಮಾವಳಿ ಪ್ರಕಾರ ಪ್ರತಿಯೊಬ್ಬರಿಗೂ ಆಧಾರ್‌ ಕಾರ್ಡ ಎಲ್ಲದಕ್ಕೂ ಬೇಕು. ಆದರೆ ಆಧಾರ ಕೇಂದ್ರಗಳು ಮಾತ್ರ ಇಲ್ಲ. ಇದು ಗಂಭೀರ ಸಮಸ್ಯೆಯಾಗಿದ್ದು, ಆಡಳಿತ ವ್ಯವಸ್ಥೆ ಇದನ್ನು ಸರಿಪಡಿಸಬೇಕು ಎಂದು ತಿಳಿಸಿದರು.

ಟಾಪ್ ನ್ಯೂಸ್

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.