ಬಳಕೆಗೆ ಬಾರದ 2 ಕೋಟಿ ವೆಚ್ಚದ ಭವ್ಯ ಕಟ್ಟಡ


Team Udayavani, Jul 30, 2019, 1:11 PM IST

yg-tdy-2

ಯಾದಗಿರಿ: ನಗರದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಿರ್ಮಾಣವಾಗಿರುವ ಭವ್ಯ ಕಟ್ಟಡ ಉಪಯೋಗಕ್ಕೆ ಬಾರದಿರುವುದು.

ಯಾದಗಿರಿ: ಸರ್ಕಾರಿ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ 4 ವರ್ಷಗಳ ಹಿಂದೆ ನಿರ್ಮಿಸಿದ ಕಟ್ಟಡವನ್ನು ಕಾಲೇಜು ಶಿಕ್ಷಣ ಇಲಾಖೆ ಉಪಯೋಗಿಸುವ ಗೋಜಿಗೆ ಹೋದಂತಿಲ್ಲ.

ಹೌದು. 2013-14ರಲ್ಲಿ 98 ಲಕ್ಷ ರೂ., 2014-15 ರಲ್ಲಿ 99.42 ಲಕ್ಷ ರೂ. ಒಟ್ಟಾರೆ ಅಂದಾಜು 2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಈ ಭವ್ಯ ಕಟ್ಟಡ ಉಪಯೋಗಕ್ಕೆ ಬಾರದೇ ನಿರುಪಯುಕ್ತವಾಗಿದೆ.

ಯಾದಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ವಿಭಾಗ ಇದ್ದು, ಸದ್ಯ ಸರ್ಕಾರ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಇಲಾಖೆಗಳ ಮೂಲಕ ಮೆಟ್ರಿಕ್‌ ನಂತರದ ವಸತಿ ನಿಲಯಗಳಲ್ಲಿ ಪದವಿವರೆಗಿನ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯಲು ಅವಕಾಶ ಇದೆ. ಆದರೆ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಸತಿ ಸೌಕರ್ಯ ಇಲ್ಲದಿರುವುದು ಸಾಕಷ್ಟು ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ.

ಹಾಗಾಗಿ ಪ್ರಸ್ತುತ ನಿರ್ಮಾಣಗೊಂಡು ನಿರುಪಯುಕ್ತವಾಗಿರುವ ಕಟ್ಟಡದಲ್ಲಿ ಸರ್ಕಾರ ಸಂಬಂಧಿಸಿದ ಇಲಾಖೆ ಮೂಲಕ ಪಿಜಿ ವಿದ್ಯಾರ್ಥಿಗಳಿಗಾಗಿ ವಸತಿ ನಿಲಯ ಆರಂಭಿಸಬೇಕು ಎಂಬ ಒತ್ತಾಯ ವಿದ್ಯಾರ್ಥಿಗಳಿಂದ ಕೇಳಿ ಬರುತ್ತಿದ್ದು, ಪಿಜಿ ವಿದ್ಯಾರ್ಥಿಗಳಿಗಾಗಿ ವಸತಿ ನಿಲಯದ ವ್ಯವಸ್ಥೆ ಮಾಡುವಂತೆ ಕಾಲೇಜಿನ ಪ್ರಾಂಶುಪಾಲರಿಗೆ ವಿದ್ಯಾರ್ಥಿಗಳು ಪತ್ರ ಬರೆದು ಮನವಿ ಮಾಡಿದ್ದಾರೆ.

ಈಗಾಗಲೇ ಮುದ್ನಾಳ ಬಳಿ ನೂತನ ಪರಿಶಿಷ್ಟ ಜಾತಿ ಪಂಗಡದ ವಿದ್ಯಾರ್ಥಿಗಳ ವಸತಿಯುಕ್ತ ಕಾಲೇಜು ಸಹ ಸದ್ಯ ಡಿಗ್ರಿ ಕಾಲೇಜಿನಲ್ಲಿಯೇ ಆರಂಭಿಸಲಾಗಿದ್ದು, ಇಲ್ಲಿ ಪ್ರವೇಶ ಪಡೆದ ಮಕ್ಕಳು ಅತಂತ್ರ ಸ್ಥಿತಿ ಎದುರಿಸುವಂತಾಗಿದೆ. ಕನಿಷ್ಟ ಪಕ್ಷ ವಸತಿಯುಕ್ತ ಕಾಲೇಜಿನ ವಿದ್ಯಾರ್ಥಿ ಗಳಿಗಾದರೂ ಅನುಕೂಲವಾಗುವಂತೆ ಮೇಲಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ.

ಕಟ್ಟಡ ಸಂಪೂರ್ಣವಾಗಿದೆ. ಇದರ ನಿರ್ವಹಣೆ ಕೋರಿ ಪತ್ರ ವ್ಯವಹಾರ ಮಾಡಲಾಗಿದೆ. ಸ್ನಾತಕೋತ್ತರ ವಿದ್ಯಾರ್ಥಿಗಳು ಈ ಕಟ್ಟಡದಲ್ಲಿ ವಸತಿ ಸೌಕರ್ಯ ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ. ಸಂಬಂಧಿಸಿದ ಇಲಾಖೆ ಮೂಲಕ ವಸತಿ ನಿಲಯ ಆರಂಭಿಸಿದರೆ ಮಕ್ಕಳಿಗೆ ಅನುಕೂಲವಾಗಲಿದೆ. •ಡಾ| ಶುಭಾಶ್ಚಂದ್ರ ಕೌಲಗಿ, ಪ್ರಾಂಶುಪಾಲ, ಡಿಗ್ರಿ ಕಾಲೇಜು.

ವಸತಿ ನಿಲಯದ ಕಟ್ಟಡ ಮಾತ್ರವಿದೆ. ಅದರಲ್ಲಿ ಸೂಕ್ತ ಸಲಕರಣೆಗಳಿಲ್ಲ. ವಸತಿ ನಿಲಯಕ್ಕೆ ಬೇಕಿರುವ ಸೌಕರ್ಯ ಕಲ್ಪಿಸಿದರೆ ವಸತಿಯುಕ್ತ ಕಾಲೇಜಿನ ವಿದ್ಯಾರ್ಥಿಗಳಿಗೆ ಬಳಕೆಯಾಗುತ್ತದೆ. •ಅಶೋಕ ವಾಟ್ಕರ್‌, ಪ್ರಾಂಶುಪಾಲ, ವಸತಿಯುಕ್ತ ಕಾಲೇಜು.

 

•ಅನೀಲ ಬಸೂದೆ

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.