‘ಡಿಯರ್‌ ಕಾಮ್ರೆಡ್‌’ ತೆಲುಗು ಅವತರಣಿಕೆ ಪ್ರದರ್ಶನಕ್ಕೆ ವಿರೋಧ

ಕನ್ನಡ ಡಬ್ಬಿಂಗ್‌ ಸಿನಿಮಾ ಪ್ರದರ್ಶನಕ್ಕೆ ಕರವೇ ಆಗ್ರಹ • ಸಂಜಯ ಚಿತ್ರಮಂದಿರದ ಎದುರು ಪ್ರತಿಭಟನೆ

Team Udayavani, Jul 30, 2019, 4:09 PM IST

mandya-tdy-2

ಮಂಡ್ಯದ ಸಂಜಯ ಚಿತ್ರಮಂದಿರದ ಮುಂದೆ 'ಡಿಯರ್‌ ಕಾಮ್ರೆಡ್‌' ಚಿತ್ರದ ಕನ್ನಡ ಅವತರಣಿಕೆ ಪ್ರದರ್ಶಿಸುವಂತೆ ಒತ್ತಾಯಿಸಿ ಕರ್ನಾಟಕ ಹಿತರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಂಡ್ಯ: ಡಿಯರ್‌ ಕಾಮ್ರೆಡ್‌ ಕನ್ನಡ ಆವೃತ್ತಿ ಇದ್ದರೂ ತೆಲುಗು ಅವತರಣಿಕೆಯಲ್ಲಿ ಚಿತ್ರ ಪ್ರದರ್ಶಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ಸೋಮವಾರ ನಗರದ ಸಂಜಯ ಚಿತ್ರಮಂದಿರದ ಬಳಿ ಪ್ರತಿಭಟನೆ ನಡೆಸಿದರು.

ಚಿತ್ರಮಂದಿರದ ಎದುರು ಜಮಾಯಿಸಿದ ರಕ್ಷಣಾ ವೇದಿಕೆ ಕಾರ್ಯಕರ್ತರು ಡಿಯರ್‌ ಕಾಮ್ರೆಡ್‌ ಸಿನಿಮಾವನ್ನು ತೆಲುಗು ಅವತರಣಿಕೆ ಬದಲು ಕನ್ನಡ ಅವತರಣಿಕೆಯಲ್ಲಿ ಪ್ರದರ್ಶಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿದರು.

ವಿಶ್ವದ ಎಲ್ಲ ಸಿನಿಮಾ, ಜ್ಞಾನ ಎಲ್ಲವೂ ಕನ್ನಡ ಭಾಷೆಯಲ್ಲೇ ಬರಬೇಕು. ಇದರಿಂದ ಕನ್ನಡ ಭಾಷೆ ಬೆಳೆಯುತ್ತದೆ. ಇದರ ಭಾಗವಾಗಿಯೇ ಕನ್ನಡ ಸಿನಿಮಾ ರಂಗದಲ್ಲಿ ಅಘೋಷಿತ ನಿಷೇಧ ಹೇರಿದ್ದ ಡಬ್ಬಿಂಗ್‌ ಸಿನಿಮಾ ಜಾರಿಗೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಈ ಹೋರಾಟದ ಭಾಗವಾಗಿಯೇ ಡಿಯರ್‌ ಕಾಮ್ರೆಡ್‌ ಚಿತ್ರವನ್ನು ಕನ್ನಡಕ್ಕೆ ಡಬ್‌ ಮಾಡಲಾಗಿದೆ ಎಂದು ವೇದಿಕೆ ಅಧ್ಯಕ್ಷ ಹೆಚ್.ಡಿ.ಜಯರಾಂ ಹೇಳಿದರು.

ಮಂಡ್ಯ ಜಿಲ್ಲೆ ಕರ್ನಾಟಕದಲ್ಲಿ ಶೇ.90ರಷ್ಟು ಕನ್ನಡ ಮಾತನಾಡುವ ಕನ್ನಡಿಗರಿರುವ ಜಿಲ್ಲೆಯಾಗಿದೆ. ನಂದಾ ಚಿತ್ರಮಂದಿರದಲ್ಲಿ ಡಿಯರ್‌ ಕಾಮ್ರೆಡ್‌ ಸಿನಿಮಾದ ಕನ್ನಡ ಅವತರಣಿಕೆ ಪ್ರದರ್ಶಿತವಾಗುತ್ತಿದೆ. ಹೀಗಿರುವಾಗ ಸಂಜಯ ಚಿತ್ರಮಂದಿರದಲ್ಲಿ ಅದೇ ಸಿನಿಮಾದ ತೆಲುಗು ಅವತರಣಿಕೆ ಪ್ರದರ್ಶಿಸುವ ಅನಿವಾರ್ಯತೆ ಏನಿದೆ. ಪರಭಾಷಾ ಚಿತ್ರಗಳಿಂದ ಕನ್ನಡ ಸಿನಿಮಾಗಳಿಗೆ ಚಿತ್ರಮಂದಿರಗಳು ಸಿಗದಂತ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ. ತಕ್ಷಣದಿಂದ ತೆಲುಗು ಬದಲಿಗೆ ಕನ್ನಡ ಆವೃತ್ತಿಯನ್ನೇ ಪ್ರದರ್ಶಿಸುವಂತೆ ಒತ್ತಾಯಿಸಿದರು.

ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಬಿಡುಗಡೆಯಾಗುವ ಎಲ್ಲ ಪರಭಾಷಾ ಚಿತ್ರಗಳು ಕನ್ನಡದಲ್ಲೇ ಡಬ್‌ ಆಗಿ ಪ್ರದರ್ಶನಗೊಳ್ಳಬೇಕು. ತಪ್ಪಿದಲ್ಲಿ ಪ್ರದರ್ಶನ ತಡೆಹಿಡಿಯಲಾಗುವುದು ಎಂದು ಈ ಮೂಲಕ ಎಚ್ಚರಿಸಲಾಯಿತು. ಚಿತ್ರಮಂದಿರದ ವ್ಯವಸ್ಥಾಪಕ ಕುಶಾಲ್ ಗೌಡ ಮನವಿ ಸ್ವೀಕರಿಸಿ ಇಂದು ಸಂಜೆಯಿಂದಲೇ ಕನ್ನಡ ಆವೃತ್ತಿಯಲ್ಲಿ ಸಿನಿಮಾ ಪ್ರದರ್ಶನ ಮಾಡುವ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಸ್ಥಗಿತಗೊಳಿಸಲಾಯಿತು.

ಪ್ರತಿಭಟನೆಯಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಸಂಪತ್‌ ಕುಮಾರ್‌, ಕಾವೇರಿ ಕಣಿವೆ ರೈತ ಒಕ್ಕೂಟದ ಜಿ.ಬಿ.ನವೀನ್‌ಕುಮಾರ್‌, ಎಂ,ಬಿ,ನಾಗಣ್ಣಗೌಡ, ಗಿರೀಗೌಡ, ಚಿತ್ರ ನಿರ್ದೇಶಕ ರವಿಕೀರ್ತಿ, ವಿಶ್ವಾಸ್‌ ಇತರರಿದ್ದರು.

ಟಾಪ್ ನ್ಯೂಸ್

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.