ಅರ್ಕಾವತಿ ನದಿ ಸೇತುವೆಗೆ ರಸ್ತೆಯೇ ಇಲ್ಲ

ಇಚ್ಛಾಶಕ್ತಿ ಕೊರತೆಯಿಂದ ಸೇತುವೆ ಅಪೂರ್ಣ • ವಾಹನ ಚಾಲಕರು ಎಚ್ಚರ ತಪ್ಪಿದರೆ ಅನಾಹುತ

Team Udayavani, Jul 30, 2019, 4:16 PM IST

rn-tdy-1

ರಾಮನಗರದ ನಾಲಬಂದ್‌ ವಾರ್ಡ್‌ಯಲ್ಲಿ ಸೇತುವೆಗೆ ಅಪ್ರೋಚ್ ರಸ್ತೆ ನಿರ್ಮಾಣವಾಗಿಲ್ಲ.

ರಾಮನಗರ: ನಗರದ ಮೂಲಕ ಹಾದು ಹೋಗಿರುವ ಅರ್ಕಾವತಿ ನದಿಗೆ ನಿರ್ಮಿಸಿರುವ 2 ಕಿರು ಸೇತುವೆಗಳಿಗೆ ಅಪ್ರೋಚ್ ರಸ್ತೆಗಳು ನಿರ್ಮಾಣವಾಗದೆ, ಶಾಪಗ್ರಸ್ತವಾಗಿ ಮುಂದುವರಿದಿದೆ! ರಾಜಕೀಯ ಇಚ್ಚಾಶಕ್ತಿ ಕೊರತೆ ಕಾರಣ ಎರಡೂ ಸೇತುವೆಗಳು ಪೂರ್ಣಗೊಂಡಿಲ್ಲ ಎಂಬ ದೂರು ನಾಗರಿಕರಿಂದ ಕೇಳಿ ಬರುತ್ತಿದೆ.

ನಗರದ ಛತ್ರದ ಬೀದಿಯಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಪಕ್ಕದ ರಸ್ತೆಯಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ರಸ್ತೆಗೆ ಸಂಪರ್ಕ ಕಲ್ಪಿಸಲು ಅರ್ಕಾವತಿ ನದಿಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲು ಬರೋಬ್ಬರಿ 8 ವರ್ಷ ಬೇಕಾಯಿತು. ಆದರೆ, ಸೇತುವೆಗೆ ಅಪ್ರೋಚ್ ರಸ್ತೆ ನಿರ್ಮಾಣವಾಗದೇ ಸೇತುವೆ ಬಳಕೆಗೆ ಯೋಗವಾಗಿಲ್ಲ. ಆದರೆ, ಇತ್ತೀಚೆಗೆ ನಗರಸಭೆಯ ಕೆಲವು ಅಧಿಕಾರಿಗಳು ಕಟ್ಟಡ ತ್ಯಾಜ್ಯವನ್ನು ಸುರಿದು ದ್ವಿಚಕ್ರ ವಾಹನಗಳು ಮತ್ತು ಪಾದಚಾರಿಗಳು ಓಡಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ. ಆದರೆ, ಇದು ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ವಾಹನ ಚಾಲಕರು ಎಚ್ಚರ ತಪ್ಪಿದರೆ ಅನಾಹುತ ತಪ್ಪಿದ್ದಲ್ಲ.

ಯೋಜನೆ ಜಾರಿಗೆ ಇಚ್ಛಾಶಕ್ತಿ ಕೊರತೆ: ಹಾಲಿ ರಸ್ತೆ ಒತ್ತುವರಿ ಬಗ್ಗೆ ಕೆಲ ವರ್ಷಗಳು ತಗಾದೆ ಇತ್ತು. ಸದ್ಯ ಇದು ನಿವಾರಣೆ ಆಗಿದೆ. 73 ಲಕ್ಷ ರೂ. ವೆಚ್ಚದಲ್ಲಿ ಅಪ್ರೋಚ್ ರಸ್ತೆ ನಿರ್ಮಿಸಲು ನಗರಸಭೆಯ ಅಧಿಕಾರಿಗಳು ಯೋಜನೆ ಸಿದ್ಧಪಡಿಸಿದ್ದರು. ಇದಕ್ಕೆ ಬೇಕಾದ ಡಿಪಿಆರ್‌ಗೆ ತಾಂತ್ರಿಕ ಒಪ್ಪಿಗೆ ಸಿಕ್ಕಿದೆ. ಇನ್ನೇನಿದ್ದರು ಚುನಾಯಿತ ಪ್ರತಿನಿಧಿಗಳ ಒಪ್ಪಿಗೆ ಮಾತ್ರ. ನಗರಸಭೆಯಲ್ಲಿ ಚುನಾಯಿತ ಪುರಪಿತೃಗಳು ಚುನಾವಣೆಯಲ್ಲಿ ಆಯ್ಕೆಯಾಗಿ ಬರಬೇಕಾಗಿದೆ.

ಜಿಲ್ಲಾಧಿಕಾರಿಗಳು ಸದ್ಯ ನಗರಸಭೆಯ ಆಡಳಿತಾಧಿಕಾರಿಗಳು ಆಗಿದ್ದಾರೆ. ಹೀಗಾಗಿ ಸದರಿ ಯೋಜನೆಗೆ ಸ್ಥಳೀಯ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಹಸಿರು ನಿಶಾನೆ ತೋರಿಸಬೇಕಾಗಿದೆ. ನಗರಸಭೆಯ ಅಧಿಕಾರಿಗಳು ಅನುಮೋದನೆ ಪಡೆಯಲು ಪ್ರಯತ್ನ ನಡೆಸಿರುವುದಾಗಿ ಗೊತ್ತಾಗಿದೆ. ರಾಜ್ಯ ರಾಜಕಾರಣದಲ್ಲಾಗುತ್ತಿರುವ ಬೆಳವಣಿಗೆಗಳಿಂದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಆರೋಪಗಳಿಗೆ ಸದರಿ ಸೇತುವೆಯ ಕಾಮಗಾರಿಯೂ ಒಂದು ಉದಾಹರಣೆ ಎಂದು ನಾಗರಿಕರು ಹರಿಹಾಯುತ್ತಿದ್ದಾರೆ.

ರಸ್ತೆ ನಿರ್ಮಿಸಲು ಸ್ಥಳದ ಕೊರತೆ: ನಗರದ ನಾಲಬಂದವಾಡಿಯಿಂದ ನ್ಯಾಯಾಲಯ ರಸ್ತೆಗೆ ಸಂಪರ್ಕ ಕಲ್ಪಿಸುವ ಸೇತುವೆಗೂ ಅಪ್ರೋಚ್ ರಸ್ತೆ ನಿರ್ಮಾಣವಾಗಿಲ್ಲ. ಇಲ್ಲಿ ಸ್ಥಳದ ಕೊರತೆ ಕಾರಣ ಅಪ್ರೋಚ್ ರಸ್ತೆ ನಿರ್ಮಾಣವಾಗಿಲ್ಲ ಎಂದು ಗೊತ್ತಾಗಿದೆ. 1994ರಲ್ಲಿ ಬೇಡಿಕೆ ಉದ್ಬವವಾಗಿ ಕೆಲ ವರ್ಷಗಳ ನಂತರ ಸೇತುವೆ ನಿರ್ಮಾಣ ಕಾಮಗಾರಿ ಆರಂಭವಾಯಿತಾದರು, ಪಿಲ್ಲರಗಳ ನಿರ್ಮಾಣ ನಂತರ ಕಾಮಗಾರಿ ಸ್ಥಗಿತವಾಯಿತು.

2011ರಲ್ಲಿ 8ನೇ ವಾರ್ಡ್‌ನ ನಗರಸಭಾ ಸದಸ್ಯರಾಗಿದ್ದ ಜೆ.ಮುಕುಂದರಾಜ್‌ ಕಾಳಜಿವಹಿಸಿ, ಸೇತುವೆ ಕಾಮಗಾರಿ ಪೂರ್ಣಗೊಳಿಸಿದರು. ಆದರೆ, ನಾಲಬಂದವಾಡಿ ಕಡೆಯ ಸೇತುವೆ ಬಳಿ ಇರುವುದೆಲ್ಲ ಖಾಸಗಿ ಸ್ಥಳ, ಅಪ್ರೋಚ್ ರಸ್ತೆಗೆ ಮೊದಲು ಸ್ಥಳ ಮಾಡಿಕೊಂಡು ನಂತರ ಸೇತುವೆ ನಿರ್ಮಿಸಬೇಕಿತ್ತು. ಇದು ಅಧಿಕಾರಿಗಳು ಮಾಡಿದ ಎಡವಟ್ಟು ಎಂಬುದು ಈ ಭಾಗದ ನಾಗರಿಕರ ದೂರು.

ನಾಲಬಂದವಾಡಿ ಸೇತುವೆಗೂ ಅಪ್ರೋಚ್ ರಸ್ತೆ ತತ್ಕಾಲಿಕವಾಗಿದ್ದು, ಹಲವಾರು ವರ್ಷಗಳಿಂದ ಈ ಸೇತುವೆಯನ್ನು ಜನರು ಬಳಸುತ್ತಿದ್ದಾರೆ. ಪಾದಚಾರಿಗಳ ಓಡಾಟಕ್ಕೆಂದು ನಿರ್ಮಾಣವಾಗಿರುವ ಈ ಸೇತುವೆಯ ಮೇಲೆ ದ್ವಿಚಕ್ರ ವಾಹನಗಳು ನಿರಂತರವಾಗಿ ಸಂಚರಿಸುತ್ತಿವೆ.

ಸ್ಥಳೀಯ ಶಾಸಕರು ಕಾಳಜಿವಹಿಸಿ ಈ ಎರಡೂ ಸೇತುವೆಗಳ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ಪಾದಚಾರಿಗಳು ಮತ್ತು ವಾಹನ ಸವಾರರು ಸುರಕ್ಷಿತವಾಗಿ ಈ ಸೇತುವೆಯನ್ನು ಬಳಕೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

 

● ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.