ಅಭಿಯಾನದ ಪ್ರೇರಣೆ: ಹಲವಡೆ ಮಳೆಕೊಯ್ಲು ಅಳವಡಿಕೆ, ಕಾರ್ಯಾಗಾರ

'ಮನೆ ಮನೆಗೆ ಮಳೆಕೊಯ್ಲು ' ಉದಯವಾಣಿ ಅಭಿಯಾನದ ಯಶಸ್ಸು

Team Udayavani, Jul 31, 2019, 5:12 AM IST

23

ಮಹಾನಗರ: ಉದಯವಾಣಿಯ ಮನೆ ಮನೆಗೆ ಮಳೆಕೊಯ್ಲು ಅಭಿಯಾನವು ಜಿಲ್ಲೆಯಾದ್ಯಂತ ನೀರಿನ ಬಗ್ಗೆ ಜನರಲ್ಲಿ ಸಾಕ್ಷರತೆ ಮೂಡಿಸುತ್ತಿದ್ದು, ಮಳೆ ನೀರನ್ನು ಹಿಡಿದಿಟ್ಟು ಬಳಸುವ ಕುರಿತಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದೆ. ಇದಕ್ಕೆ ಪೂರಕ ಸ್ಪಂದನೆ ನೀಡುತ್ತಿರುವ ವಿವಿಧ ಸಂಘ – ಸಂಸ್ಥೆಗಳು ಪತ್ರಿಕೆಯೊಂದಿಗೆ ಕೈ ಜೋಡಿಸುತ್ತಿದೆ.

ಪತ್ರಿಕೆ ಆರಂಭಿಸಿದ ಅಭಿಯಾನದಿಂದ ಪ್ರೇರಣೆಗೊಂಡು ಹಲವಾರು ಮಂದಿ ಮಳೆಕೊಯ್ಲು ಅಳವಡಿಸಿಕೊಳ್ಳುತ್ತಿದ್ದಾರೆ. ಮಂಗಳವಾರ ಕಾವೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಳೆಕೊಯ್ಲು ಕುರಿತಂತೆ ರಾಜ್ಯಮಟ್ಟದ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದಲ್ಲಿ ಶಿಕ್ಷಕರು, ನಾಗರಿಕರು ಸಹಿತ ಹಲವಾರು ಮಂದಿ ಮಾಹಿತಿ ಪಡೆದುಕೊಂಡರು.

ಉಪನ್ಯಾಸ
ಬುಧವಾರ ಸಂಜೆ 6 ಗಂಟೆಗೆ ಮಂಗಳೂರು ಮ್ಯಾನೇಜ್‌ಮೆಂಟ್
ಆಸೋಸಿಯೇಶನ್‌ ವತಿಯಿಂದ ಎಸ್‌ಡಿಎಂ ಸ್ನಾತಕೋತ್ತರ ಉದ್ಯಮಾಡಳಿತ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಸಹಯೋಗದೊಂದಿಗೆ ಮಳೆಕೊಯ್ಲು ಉಪನ್ಯಾಸ ಎಸ್‌ಡಿಎಂ ಎಂಬಿಎ ಹಾಲ್ನಲ್ಲಿ ನಡೆಯಲಿದೆ. ಇದರೊಂದಿಗೆ ಸೈಂಟ್ ಆ್ಯಗ್ನೆಸ್‌ ಕಾಲೇಜು ಉದಯವಾಣಿ ಸಹಯೋಗದೊಂದಿಗೆ ಬೆಳಗ್ಗೆ 11.15ಕ್ಕೆ ಕಾಲೇಜಿನಲ್ಲಿ ಮಳೆಕೊಯ್ಲು ಅರಿವು ಕಾರ್ಯಕ್ರಮ ಆಯೋಜಿಸಿದೆ.

ಅಭಿಯಾನದ ಪ್ರೇರಣೆಯಿಂದ ಮಳೆಕೊಯ್ಲು ಅಳವಡಿಕೆ
ಬಿಜೈನ ಕದ್ರಿಕಂಬಳ ರಸ್ತೆಯ ಉಮೇಶ್‌ ಶೆಣೈ ಮತ್ತು ಚಂದ್ರಕಲಾ ಶೆಣೈ ದಂಪತಿ ಕೆಲವು ದಿನಗಳ ಹಿಂದೆ ತಮ್ಮ ಮನೆಯಲ್ಲಿ ಮಳೆಕೊಯ್ಲು ವ್ಯವಸ್ಥೆಯನ್ನು ಅಳವಡಿಸಿದ್ದಾರೆ.

ಈ ವರ್ಷ ಬೇಸಗೆಯಲ್ಲಿ ಇವರ ಮನೆ ಬಾವಿಯಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿದಿತ್ತು. ಇದ್ದ ಸ್ವಲ್ಪ ನೀರು ಕೆಂಬಣ್ಣದಿಂದ ಕೂಡಿ, ಕುಡಿಯುವ ಉದ್ದೇಶಕ್ಕೆ ಬಳಕೆ ಮಾಡಲು ಸಾಧ್ಯವಾಗಲಿಲ್ಲ. ಇದೇ ಸಮಯ ಉದಯವಾಣಿ ಸುದಿನದಲ್ಲಿ ಮನೆಮನೆಗೆ ಮಳೆಕೊಯ್ಲು ಅಭಿಯಾನವನ್ನು ಗಮನಿಸಿ, ತಮ್ಮ ಮನೆಯಲ್ಲಿಯೂ ಈ ವ್ಯವಸ್ಥೆಯನ್ನು ಅಳವಡಿಸಿದ್ದಾರೆ. ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಇದೀಗ ಬಾವಿ ತುಂಬಾ ನೀರಿದೆ. ಮನೆಯ ಮೇಲ್ಛಾವಣಿಯಿಂದ ಬಿದ್ದ ನೀರನ್ನು ಪೈಪ್‌ ಮುಖೇನ ಬಾವಿಗೆ ಸಂಪರ್ಕ ಕಲ್ಪಿಸಿದ್ದಾರೆ. ಬಾವಿ ಬಳಿ ಫಿಲ್ಟರ್‌ ಅಳವಡಿಸಿದ್ದು, ಶುದ್ಧ ನೀರು ಬಾವಿಗೆ ಬೀಳುತ್ತಿದೆ.

ಶರವು ದೇವಸ್ಥಾನದ ಬಾವಿಗೂ ಮಳೆಕೊಯ್ಲು

ನಗರದ ಶರವು ಮಹಾಗಣಪತಿ ದೇವಸ್ಥಾನ ರಸ್ತೆಯಲ್ಲಿರುವ ಉಮಾಮಹೇಶ್ವರ ದೇವಸ್ಥಾನದಲ್ಲಿ ಬಾವಿಗೆ ಮಳೆಕೊಯ್ಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಇಲ್ಲಿ ಒಂದು ಸಣ್ಣ ಬಾವಿಯಿಂದ ಮೂರು ಬಾವಿಗೆ ಸಂಪರ್ಕ ಇದೆ. ಛಾವಣಿ ನೀರನ್ನು ಫಿಲ್ಟರ್‌ ವ್ಯವಸ್ಥೆ ಮಾಡಿ ಬಾವಿಗೆ ಬಿಡಲಾಗಿದೆ. ಸುಮಾರು ಒಂದು ತಿಂಗಳ ಹಿಂದೆ ಬಾವಿಯಗೆ ಈ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ದೇವಸ್ಥಾನದಲ್ಲಿ ನೀರಿಗೆ ಸಮಸ್ಯೆ ಇಲ್ಲ. ಆದರೆ, ‘ಉದಯವಾಣಿ’ ಮಳೆಕೊಯ್ಲು ಅಭಿಯಾನ ನೋಡಿದ ಬಳಿಕ ಮಳೆಕೊಯ್ಲು ವ್ಯವಸ್ಥೆ ಮಾಡಬೇಕೆಂಬ ಇಚ್ಛೆಯಾಯಿತು. ಮಳೆಕೊಯ್ಲು ವ್ಯವಸ್ಥೆಯಿಂದ ಹೆಚ್ಚು ನೀರು ಲಾಭವಾಗಲಿದೆ’ ಎನ್ನುತ್ತಾರೆ ಉಮಾಮಹೇಶ್ವರ ದೇವಸ್ಥಾನದ ವ್ಯವಸ್ಥಾಪಕ ನಿರಂಜನ ರಾವ್‌.

ನೀವೂ ಅಳವಡಿಸಿ, ವಾಟ್ಸಪ್‌ ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಈಗ ಕಾರ್ಯೋನ್ಮುಖರಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆಗಳಲ್ಲಿ ಅಳವಡಿಸುತ್ತಿದ್ದಾರೆ. ‘ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆಗಳಲ್ಲಿ ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೋ ಸಮೇತ ನಮಗೆ ವಿವರವನ್ನು ವಾಟ್ಸಪ್‌ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ. 9900567000

 

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.