ಯುಕೆಪಿಗೆ ಈಗಲಾದರೂ ಸಿಗುತ್ತಾ ವೇಗ!

•ನೀರಾವರಿಗೆ ಹೆಚ್ಚು ಒತ್ತು ಕೊಡಬೇಕಿದೆ ಬಿಎಸ್‌ವೈ•ನೀರಾವರಿ ಹೋರಾಟಗಾರರು-ರೈತರ ಕಾತರ

Team Udayavani, Jul 31, 2019, 11:35 AM IST

bk-tdy-3

ಬಾಗಲಕೋಟೆ: ಮೈತ್ರಿ ಸರ್ಕಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿದ್ದ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತಕ್ಕೆ ಬಿಜೆಪಿ ಸರ್ಕಾರದಲ್ಲಾದರೂ ವೇಗ ಸಿಗುತ್ತದೆಯಾ ಎಂದು ಈ ಭಾಗದ ರೈತರು, ನೀರಾವರಿ ಹೋರಾಟಗಾರರು ಕಾತರರಾಗಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ನೀರಾವರಿ ಯೋಜನೆ ಕಾಲುವೆ ನಿರ್ಮಾಣದಲ್ಲಿ ಒಂದಷ್ಟು ವೇಗ ಕಂಡಿದ್ದ ಈ ಯೋಜನೆ, ಭೂ ಸ್ವಾಧೀನ ವಿಷಯದಲ್ಲಿ ಭಾರಿ ಹಿನ್ನಡೆ ಅನುಭವಿಸಿತ್ತು. ಅದಕ್ಕೆ ಹೊಸ ಭೂ ಸ್ವಾಧೀನ ಕಾಯ್ದೆ ಸಹಿತ ಹಲವು ಕಾರಣಗಳನ್ನು ನೀಡಲಾಗಿತ್ತು. ಸರ್ಕಾರದ ವಿಳಂಬ ನೀತಿಯಿಂದ 3ನೇ ಹಂತದಲ್ಲಿ ಸ್ವಾಧೀನಗೊಳ್ಳಲಿದ್ದ ಭೂಮಿ ವಶಪಡಿಸಿಕೊಳ್ಳಲು ನಡೆಸಿದ ಪ್ರಕ್ರಿಯೆಗಳ ಅಧಿಸೂಚನೆಗಳು ರದ್ದುಗೊಂಡವು. ಹೀಗಾಗಿ ರದ್ದುಗೊಂಡ ಅಧಿಸೂಚನೆಗಳನ್ನು ಪುನಃ ಆರಂಭಿಸಿ, ಸ್ವಾಧೀನ, ಕಾಲುವೆ ನಿರ್ಮಾಣ, ಪುನರ್‌ವಸತಿ, ಪುನರ್‌ ನಿರ್ಮಾಣ ಕಾರ್ಯಕ್ಕೆ ವೇಗ ನೀಡಬೇಕಿದೆ.

ನೀರು ಕೊಟ್ಟು 9 ವರ್ಷ: ಕೃಷ್ಣಾ ನ್ಯಾಯಾಧಿಕರಣ ಎ ಸ್ಕೀಂ ನಡಿ 173 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದು, 519.60 ಮೀಟರ್‌ವರೆಗೆ ಆಲಮಟ್ಟಿ ಜಲಾಶಯದಲ್ಲಿ ನೀರು ಸಂಗ್ರಹಿಸಿ, ಬಳಸಲು ಅನುಮತಿ ಕೊಟ್ಟಿತ್ತು. ಆ ನೀರಿನಲ್ಲೇ ಈವರೆಗೆ ಕರ್ನಾಟಕ ಕೇವಲ 119 ಟಿಎಂಸಿ ಮಾತ್ರ ಸದ್ಭಳಕೆ ಮಾಡಿಕೊಂಡಿದೆ ಎಂಬ ಮಾತಿದೆ. ಅಲ್ಲದೇ ಕಳೆದ 2010ರ ಡಿಸೆಂಬರ್‌ 30ರಂದು ನ್ಯಾಯಾಧಿಕರಣದ ಅಂತಿಮ ತೀರ್ಪು ಬಂದಿದ್ದು, ರಾಜ್ಯಕ್ಕೆ 177 ಟಿಎಂಸಿ ನೀರು ಹಂಚಿಕೆ ಮಾಡಿ, ಆಲಮಟ್ಟಿ ಜಲಾಶಯವನ್ನು 524.256 ಮೀಟರ್‌ಗೆ ಎತ್ತರಿಸಲು ಅನುಮತಿ ಕೊಟ್ಟಿದೆ. 177 ಟಿಎಂಸಿ ಅಡಿ ನೀರು ಕೊಟ್ಟು, 9 ವರ್ಷವಾದರೂ ಈ ವರೆಗೆ ನೀರು ಬಳಕೆ ಮಾಡಿಕೊಂಡಿಲ್ಲ. (2010ರಿಂದ 50 ವರ್ಷದೊಳಗೆ ಸಂಪೂರ್ಣ ನೀರು ಬಳಸಿಕೊಳ್ಳಲು ನ್ಯಾಯಾಧಿಕರಣ ಸೂಚನೆ ಕೂಡ ಕೊಟ್ಟಿದೆ) ಬೇಸಿಗೆಯಲ್ಲಿ ಕೊಯ್ನಾದಿಂದ ನೀರು ಬಿಡಿ ಎಂದು ಮಹಾರಾಷ್ಟ್ರದತ್ತ ಬೇಡಿಕೆ ಇಡುವುದು ತಪ್ಪಿಲ್ಲ.

ಯೋಜನಾ ವೆಚ್ಚ ಮೂರು ಪಟ್ಟು ಹೆಚ್ಚಳ: ಇಡೀ ರಾಜ್ಯದಲ್ಲೇ ಅತಿ ದೊಡ್ಡ ನೀರಾವರಿ ಯೋಜನೆ ಎಂಬ ಹೆಸರು ಯುಕೆಪಿಗಿದೆ. 3ನೇ ಹಂತದಲ್ಲಿ 1,23,640 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. 94,640 ಎಕರೆ ಹಿನ್ನೀರಿನಲ್ಲಿ ಮುಳುಗಡೆಯಾದರೆ, 4,315 ಎಕರೆ ಪುನರ್‌ ವಸತಿ ಕೇಂದ್ರಗಳ ನಿರ್ಮಾಣಕ್ಕಾಗಿ ಅಗತ್ಯವಿದೆ. ಕಾಲುವೆ ನಿರ್ಮಾಣಕ್ಕಾಗಿ 24,685 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಹೀಗೆ 12 ಗ್ರಾಮಗಳು ಪೂರ್ಣ, 10 ಗ್ರಾಮಗಳು ಭಾಗಶಃ ಮುಳುಗಡೆಯಾಗುವ ಜತೆಗೆ 1,23,640 ಎಕರೆ ಭೂಮಿ, ಆಲಮಟ್ಟಿ ಜಲಾಶಯ 524.256 ಮೀಟರ್‌ಗೆ ಎತ್ತರಿಸಿದಾಗ ಕಳೆದುಕೊಳ್ಳಬೇಕಾಗುತ್ತದೆ. ಈ 3ನೇ ಹಂತದ ಯೋಜನೆಗೆ 2012ರ ಜನವರಿ 24ರಂದು 17,206.39 ಕೋಟಿ ಮೊತ್ತದ ಸಮಗ್ರ ಯೋಜನಾ ವರದಿಗೆ ಅಂದಿನ ಬಿಜೆಪಿ ಸರ್ಕಾರ ಒಪ್ಪಿಗೆ ನೀಡಿತ್ತು. ಆದರೀಗ ಈ ಯೋಜನಾ ವೆಚ್ಚದ ಮೂರು ಪಟ್ಟು ಹೆಚ್ಚಳವಾಗಿದೆ. ಭೂಸ್ವಾಧೀನಕ್ಕಾಗಿಯೇ 50 ಸಾವಿರ ಕೋಟಿ ಅನುದಾನ ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ.

 

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewqe

Bagalkote; ಬಾಗಿಲು ತೆರೆಯದ‌ ಮಹಿಳೆ: ಆ್ಯಸಿಡ್ ಎರಚಿದ ಪ್ರೇಮಿ!

Rabkavi ಬನಹಟ್ಟಿ ಕೆರೆ: ಅನಾಹುತಗಳು ನಡೆಯದಂತೆ ಕ್ರಮ ಅಗತ್ಯ

Rabkavi ಬನಹಟ್ಟಿ ಕೆರೆ: ಅನಾಹುತಗಳು ನಡೆಯದಂತೆ ಕ್ರಮ ಅಗತ್ಯ

kರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ

ರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ

Rayanna Brigade ಪುನಾರಂಭಕ್ಕೆ ಚಿಂತನೆ; ಕೆ.ಎಸ್‌. ಈಶ್ವರಪ್ಪ

Rayanna Brigade ಪುನಾರಂಭಕ್ಕೆ ಚಿಂತನೆ; ಕೆ.ಎಸ್‌. ಈಶ್ವರಪ್ಪ

Jamakhandi ಐಬಿಯಲ್ಲಿ ಪಾರ್ಟಿ: ಐವರು ಅಧಿಕಾರಿಗಳ ಅಮಾನತು

Jamakhandi ಐಬಿಯಲ್ಲಿ ಪಾರ್ಟಿ: ಐವರು ಅಧಿಕಾರಿಗಳ ಅಮಾನತು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.