ಮಳೆಗಾಲದಲ್ಲೂ ಟ್ಯಾಂಕರ್‌ ನೀರು!

ನೀರು ಸಂಗ್ರಹಗಾರ ಸಂಪೂರ್ಣ ಖಾಲಿ•ತಾಂತ್ರಿಕ ದೋಷ-ಜನರಿಗೆ ತಲೆನೋವು

Team Udayavani, Jul 31, 2019, 12:03 PM IST

31-JUly-18

ನಗರದ ವಿವಿಧ ಬಡಾವಣೆಗಳಿಗೆ ಟ್ಯಾಂಕರ್‌ ನೀರು ಪೂರೈಸಲಾಗುತ್ತಿದೆ.

ಸಾಗರ: ತಾಲೂಕಿನಾದ್ಯಂತ ಮಳೆ ಎಡೆ ಬಿಡದೆ ಸುರಿಯುತ್ತಿದೆ. ಲಿಂಗನಮಕ್ಕಿ ಜಲಾಶಯದ ಸಾಕಷ್ಟು ನೀರಿದೆ. ನಗರದ ಈ ಹಿಂದಿನ ಕುಡಿಯುವ ನೀರಿನ ಮೂಲವಾಗಿದ್ದ ಬಸವನ ಹೊಳೆ ಆಣೆಕಟ್ಟೆಯಲ್ಲೂ ನೀರಿನ ಸಂಗ್ರಹವಿದೆ. ಆದರೂ ನಗರದ ಹಲವು ವಾರ್ಡ್‌ಗಳಲ್ಲಿ ಜನರಿಗೆ ಟ್ಯಾಂಕರ್‌ ಮೂಲಕ ನೀರು ಕೊಡುವ ಪರಿಸ್ಥಿತಿ ಮೂರ್‍ನಾಲ್ಕು ದಿನಗಳಿಂದ ನಿರ್ಮಾಣವಾಗಿದೆ. ಮಂಗಳವಾರ ವಿನೋಬಾ ನಗರದ ವಾರ್ಡ್‌ ಸದಸ್ಯ ತಮ್ಮ ವಾರ್ಡ್‌ನ ನಾಗರಿಕರಿಗಾಗಿ ಟ್ಯಾಂಕರ್‌ ನೀರು ತರಿಸಿ ಸಮಸ್ಯೆಯ ತಾತ್ಕಾಲಿಕ ಪರಿಹಾರಕ್ಕೆ ಮುಂದಾಗಿದ್ದಾರೆ.

ನಗರದ ನೆಹರೂ ಮೈದಾನ ಹಾಗೂ ಸಂತೆ ಮೈದಾನದಲ್ಲಿನ 10 ಲಕ್ಷ ಲೀ. ಸಾಮರ್ಥ್ಯದ ಬೃಹತ್‌ ನೀರು ಸಂಗ್ರಹಗಾರ ಬರಿದಾಗಿ ವಾರಗಳಾಗುತ್ತಿದೆ. ಮಂಗಳವಾರವೂ ಅದನ್ನು ತುಂಬಿಸುವ ಕೆಲಸ ಯಶಸ್ವಿಯಾಗಿಲ್ಲ. ಆದ್ದರಿಂದ ವಿನೋಬಾನಗರ, ಜೊಸೆಫ್‌ ನಗರ, ನೆಹರೂ ಮುಂತಾದ ಪ್ರದೇಶದ ಮನೆಗಳಿಗೆ ನಗರಸಭೆ ನೀರು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಕಾರ್ಗಲ್ ಸಮೀಪದ ಅಂಬುಗಳಲೆ ಬಳಿಯಿಂದ ಶರಾವತಿ ನೀರು ಸರಬರಾಜು ಮಾಡುವ ಬೃಹತ್‌ ಯೋಜನೆ ಕಾರ್ಯರೂಪಕ್ಕೆ ಬಂದರೂ ಸಾಗರದ ನಿವಾಸಿಗಳಿಗೆ ನೀರಿನ ಸಮಸ್ಯೆ ತಪ್ಪಿಲ್ಲ.

ಶರಾವತಿ ಹಿನ್ನೀರಿನಿಂದ ನೀರು ಸರಬರಾಜು ಮಾಡುವ ಯೋಜನೆ ಪ್ರಾರಂಭವಾದಾಗಿನಿಂದಲೂ ಒಂದಿಲ್ಲೊಂದು ತಾಂತ್ರಿಕ ದೋಷ ಬಾಧಿಸುತ್ತಿದೆ. ಪ್ರಾರಂಭದಲ್ಲಿ ಪಂಪ್‌ ಹಾಳಾಗುತ್ತಿತ್ತು. ಈಗ ಅಂಬುಗಳಲೆಯ ಬಳಿ ಟ್ರಾನ್ಸ್‌ಫಾರ್ಮರ್‌ ಸಮಸ್ಯೆ ಎಂದು ನಗರಸಭೆ ಅಧಿಕಾರಿಗಳು ಹೇಳುತ್ತಿದ್ದಾರೆ. ಈ ಕಾರಣದಿಂದ ಸಾಗರದ 2 ಬೃಹತ್‌ ಟ್ಯಾಂಕ್‌ಗಳಿಗೆ ನೀರು ಸರಬರಾಜು ಇಲ್ಲ. ಅವುಗಳಿಂದ ನೀರು ಒದಗಿಸುವ ನಗರದ ಬಹುತೇಕ ಪ್ರದೇಶಗಳಿಗೆ ನೀರು ಸರಬರಾಜು ಇಲ್ಲದೇ ಆರು ದಿನಗಳಾಗಿವೆ.

ಸಂಬಂಧಿಸಿದ ಮಂಗಳೂರಿನ ತಂತ್ರಜ್ಞರ ಮೂಲಕ ಟ್ರಾನ್ಸ್‌ಫಾರ್ಮರ್‌ ವ್ಯವಸ್ಥೆಯನ್ನು ನಗರಸಭೆ ಅಧಿಕಾರಿಗಳು ಮಾಡಿದ್ದಾರೆ. ಆನಂತರ ಸ್ವಿಚ್ ಬೋರ್ಡ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಈ ಕುರಿತು ತಜ್ಞರು ಸ್ಥಳಕ್ಕೆ ಭೇಟಿ ನೀಡುವುದನ್ನು, ಸಂಬಂಧಿಸಿದ ಬಿಡಿಭಾಗ ಅಳವಡಿಸಿ, ದುರಸ್ತಿ ಮಾಡುವುದನ್ನು ನಗರಾಡಳಿತ ಕಾಯುತ್ತಿದೆ. ಅನಿವಾರ್ಯವಾಗಿ ಸ್ಥಳೀಯ ಬೋರ್‌ವೆಲ್ಗಳಿಂದ ನೀರು ತೆಗೆದು ವಿವಿಧ ವಾರ್ಡ್‌ಗಳಿಗೆ ನಲ್ಲಿ ನೀರು ಕೊಡಲಾಗುತ್ತಿದೆ. ಈ ಸಂದರ್ಭದಲ್ಲಿ ನೀರಿನ ಶುದ್ಧೀಕರಣ ಪ್ರಕ್ರಿಯೆ ನಡೆಯುತ್ತಿದೆಯೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಈ ಹಿಂದೆ ಸಾಗರ ಪಟ್ಟಣಕ್ಕೆ ನೀರು ಪೂರೈಸುತ್ತಿದ್ದ ಬಸವನ ಹೊಳೆಯಿಂದ ನೆಹರೂ ನಗರದ ಎರಡು ಬೃಹತ್‌ ಟ್ಯಾಂಕ್‌ಗಳಿಗೆ ಇದ್ದ ಸಂಪರ್ಕ ತಪ್ಪಿಸಲಾಗಿದೆ. ಎಸ್‌.ಎನ್‌. ನಗರದ ಬೃಹತ್‌ ಟ್ಯಾಂಕ್‌ಗೆ ಬಸವನ ಹೊಳೆ ಸಂಪರ್ಕ ಇನ್ನೂ ಕಾದಿಟ್ಟುಕೊಂಡ ಹಿನ್ನೆಲೆಯಲ್ಲಿ ಆ ಭಾಗದ ಜನರಿಗೆ ಸಮಸ್ಯೆ ಬಾಧಿಸುತ್ತಿಲ್ಲ.

ಬೋರ್‌ವೆಲ್ ಸ್ವಿಚ್‌ನಲ್ಲಿ ಸಮಸ್ಯೆ:
ಆಯಾ ಭಾಗದ ನಿವಾಸಿಗಳಿಗೆ ನೀರು ಸರಬರಾಜು ಸಂಬಂಧ ಸ್ಥಳೀಯ ಕೊಳವೆ ಬಾವಿಗಳಿವೆ. ಆದರೆ ವಿನೋಬಾ ನಗರದ ನೂತನ ಬಸ್‌ ನಿಲ್ದಾಣ ಕಾಮಗಾರಿ ನಡೆಯುವ ಜಾಗದಲ್ಲಿನ ಬೋರ್‌ವೆಲ್ ಸ್ವಿಚ್ ಹಾಳಾಗಿ ಬಹಳ ಸಮಯವಾಗಿದೆ. ಬಸ್‌ ನಿಲ್ದಾಣ ಕಾಮಗಾರಿ ಸೇರಿದಂತೆ ಸ್ಥಳೀಯ ಕೆಲ ಕಾರ್ಯಗಳಿಗೆ ಅನುಕೂಲವಾಗಲೆಂದು ಈ ಸ್ವಿಚ್ಬೋರ್ಡ್‌ನ ಬಾಗಿಲು ಸದಾ ತೆಗೆದು ಇಡಲಾಗುತ್ತಿತ್ತು. ಸೂಕ್ತ ಬೀಗದ ರಕ್ಷಣೆ ಇಲ್ಲದ ಕಾರಣ ಕಂಡ ಕಂಡವರು ಸ್ವಿಚ್ಛ ಹಾಕಿ ಬೋರ್ಡ್‌ ಹಾಳಾಗಿದೆ ಎನ್ನಲಾಗುತ್ತದೆ. ಅಂತೂ ಸ್ಥಳೀಯ ವಾರ್ಡ್‌ ಪ್ರತಿನಿಧಿ ರವಿ ಉಡುಪ, ಗಣೇಶ ಪ್ರಸಾದರ ಮೇಲ್ವಿಚಾರಣೆಯಲ್ಲಿ ಸೋಮವಾರ ಸ್ವಿಚ್ ಬೋರ್ಡ್‌ ದುರಸ್ತಿ ಮಾಡಿದ್ದಾರೆ. ವಿನೋಬಾ ನಗದರ ಕೆಲ ಭಾಗಕ್ಕೆ ಸೋಮವಾರ ಮಧ್ಯಾಹ್ನದ ನಂತರ ನೀರು ಸರಬರಾಜು ಸಾಧ್ಯವಾಗಿದೆ.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.