ಪ್ರತಿ ಕುಟುಂಬಕ್ಕಿದೆ 100 ಮಾನವ ದಿನಗಳ ಕೆಲಸ

•ಗ್ರಾಮೀಣ ಪ್ರದೇಶದ ಅರ್ಹ ಪ್ರತಿ ಕುಟುಂಬಕ್ಕಿದೆ ಉದ್ಯೋಗ ಚೀಟಿ ಹೊಂದುವ ಹಕ್ಕು

Team Udayavani, Jul 31, 2019, 12:25 PM IST

hv-tdy-2

ಹಾವೇರಿ: ಸಾಮಾಜಿಕ ಲೆಕ್ಕ ಪರಿಶೋಧಕ ಸಂಪತ್ತಕುಮಾರ ಪೂಜಾರ ಮಾತನಾಡಿದರು.

ಹಾವೇರಿ: ಯಲಗಚ್ಚ ಗ್ರಾಮದಲ್ಲಿ ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೋಜಗಾರ್‌ ಹಾಗೂ 1ನೇ ಸುತ್ತಿನ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮ ಸಭೆ ನಡೆಯಿತು.

ತಾಲೂಕು ಸಾಮಾಜಿಕ ಲೆಕ್ಕ ಪರಿಶೊಧಕ ಸಂಪತ್ತಕುಮಾರ ಪೂಜಾರ ಮಾತನಾಡಿ, ಸಾಮಾಜಿಕ ಪರಿಶೋಧನೆಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ಮಂಡಿಸಿ, ನಂತರ ಯೋಜನೆಯಡಿ ಇರುವ ವೈಯಕ್ತಿಕ ಕಾಮಗಾರಿಗಳ ಬಗ್ಗೆ ಮತ್ತು ಸಾಮಾಜಿಕ ಭದ್ರತಾ ಯೋಜನೆಯ ಬಗ್ಗೆ ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಅರ್ಹ ಪ್ರತಿ ಕುಟುಂಬವು ಉದ್ಯೋಗ ಚೀಟಿ ಹೊಂದುವ ಹಕ್ಕು ಹೊಂದಿರುತ್ತಾರೆ. ಉದ್ಯೋಗ ಚೀಟಿಯಲ್ಲಿ ಹೆಸರಿರುವ ಕುಟುಂಬದ ಎಲ್ಲ ವಯಸ್ಕರು, ಅಕುಶಲ ದೈಹಿಕ ಕೆಲಸಕ್ಕಾಗಿ ಅರ್ಜಿ ಸಲ್ಲಿಸಲು ಹಕ್ಕುಳ್ಳವರಾಗಿರುತ್ತಾರೆ. ಒಂದು ಆರ್ಥಿಕ ವರ್ಷದಲ್ಲಿ ಒಂದು ಕುಟುಂಬ 100 ಮಾನವ ದಿನಗಳ ಕೆಲಸಕ್ಕಾಗಿ ಅರ್ಜಿ ಸಲ್ಲಿಸಲು ಹಕ್ಕುಳ್ಳವರಾಗಿರುತ್ತಾರೆ. ಮಹಿಳೆಯರಿಗೆ ಮತ್ತು ಪುರುಷ‌ರಿಗೆ ಸಮಾನ ಕೂಲಿ, ಕೆಲಸಕ್ಕೆ ಬೇಡಿಕೆ ಸಲ್ಲಿಸಿದ ಹದಿನೈದು ದಿನದೊಳಗೆ ಉದ್ಯೋಗ ನೀಡದಿದ್ದಲ್ಲಿ ನಿರುದ್ಯೋಗ ಭತ್ಯೆಗೆ ಅವಕಾಶವಿರುತ್ತದೆ. ವಾರಾಂತ್ಯದಲ್ಲಿ ಕೂಲಿಯನ್ನು ಪಾವತಿಸಬೇಕು. ತಪ್ಪಿದ್ದಲ್ಲಿ ಕೂಲಿ ವಿಳಂಬ ಪರಿಹಾರ ಭತ್ಯೆ ಪಡೆಯಲು ಅವಕಾಶವಿರುತ್ತದೆ. ಕೂಲಿ ಹಣ ನೇರವಾಗಿ ಖಾತೆಗೆ ಜಮೆ ಮಾಡಲಾಗುವುದು. ಕೆಲಸ ಮಾಡುವ ಸ್ಥಳದಲ್ಲಿ 6 ವರ್ಷದೊಳಗಿನ 5ಕ್ಕಿಂತ ಹೆಚ್ಚು ಮಕ್ಕಳು ಬಂದಲ್ಲಿ ಮಕ್ಕಳ ನಿರ್ವಹಣೆಗೆ ಒಬ್ಬರಿಗೆ ಅವಕಾಶ ಹಾಗೂ ಅವರಿಗೂ ಆ ದಿನದ ಭತ್ಯೆ ನೀಡಲಾಗುವುದು ಎಂದರು.

ಕೆಲಸವನ್ನು ಸಾಧ್ಯವಾದಷ್ಟು ಕಾರ್ಮಿಕರ ಗ್ರಾಮದ ಪರಿಮಿತಿಯಲ್ಲ್ಲಿಯೇ ಒದಗಿಸಲಾಗುವುದು. ಐದು ಕಿಲೋಮೀಟರ್‌ ಗಿಂತಲೂ ಹೆಚ್ಚಿನ ವ್ಯಾಪ್ತಿಯಲ್ಲಿ ಉದ್ಯೋಗ ಒದಗಿಸಿದಲ್ಲಿ ಸಾರಿಗೆ ಮತ್ತು ಜೀವನ ನಿರ್ವಹಣಾ ವೆಚ್ಚಕ್ಕಾಗಿ ಕೂಲಿ ದರದ ಶೇ. 10ರಷ್ಟನ್ನು ಹೆಚ್ಚುವರಿಯಾಗಿ ನೀಡಲಾಗುವುದು. ಉದ್ಯೋಗ ಚೀಟಿಯಲ್ಲಿ ನೊಂದಾಯಿತ ಕುಟುಂಬದ ಸದಸ್ಯರು ವಾರ್ಷಿಕ 100 ದಿನಗಳ ಕೆಲಸದ ಬೇಡಿಕೆಯನ್ನು ತಮ್ಮ ಇಚ್ಚೆಗನುಸಾರವಾಗಿ ಯಾವ ಸಮಯದಲ್ಲಾದರೂ ಪಡೆಯಬಹುದು. ನಮೂನೆ -6 ರಲ್ಲಿ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸಿದ ನಂತರ ಸೂಚಿಸಿದ ಸ್ಥಳದಲ್ಲಿ ಮತ್ತು ಸಮಯದಲ್ಲಿ ಹಾಜರಾಗಿ ನಿಗಧಿಪಡಿಸಿದ ಕೆಲಸವನ್ನು ನಿರ್ವಹಿಸುವುದು. ವಿಕಲಚೇತನರಿಗೆ ಮತ್ತು 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೆಲಸದ ಪ್ರಮಾಣದಲ್ಲಿ ಶೇ. 50 ರಿಯಾಯಿತಿ ನೀಡಲಾಗುತ್ತದೆ ಎಂದು ತಿಳಿಸಿದರು.

ತಾಲೂಕು ಪಂಚಾಯಿತಿಯ ತಾಲೂಕು ಮಾಹಿತಿ ಶಿಕ್ಷಣ ಮತ್ತು ಸಂವಹನ ಅಧಿಕಾರಿ ಜಿ.ಎಸ್‌. ಬೆನ್ನೂರ ಮಾತನಾಡಿ, ರೋಜಗಾರ ದಿವಸವನ್ನು ಒಂದು ತಿಂಗಳಲ್ಲಿ ಕನಿಷ್ಠ ಒಂದು ಬಾರಿ ವಾರ್ಡ್‌ ಮಟ್ಟದಲ್ಲಿ ಆಯೋಜಿಸಬೇಕು. ಹಂತವಾರು ಪ್ರಗತಿಯಲ್ಲಿರುವ ವಿವಿಧ ವಸತಿ ಯೋಜನೆ ಅಡಿ (ಮನೆ ನಿರ್ಮಾಣ ಕಾಮಗಾರಿಗೆ) ಪ್ರತಿಯೊಬ್ಬ ಫಲಾನುಭವಿಗೆ 90 ಮಾನವ ದಿನಗಳ ಮೊತ್ತವನ್ನು ಸಂಬಧಪಟ್ಟ ಫಲಾನುಭವಿಗೆ ಪಾವತಿಸಲಾಗುವುದು ಎಂದರು.

ರೋಜಗಾರ್‌ ದಿವಸವನ್ನು ವಾರ್ಡಿನ ಶಾಲೆಗಳಲ್ಲಿ, ಗ್ರಾಮ ಪಂಚಾಯಿತಿ ಭವನಗಳಲ್ಲಿ, ಸ್ವಸಹಾಯ ಸಂಘಗಳಲ್ಲಿ, ರಾಜೀವಗಾಂಧಿ ಸೇವಾಕೇಂದ್ರಗಳಲ್ಲಿ ನಡೆಸಬಹುದಾಗಿದೆ. ನಿಗದಿತ ಸಂಖ್ಯೆಯಲ್ಲಿ ಉದ್ಯೋಗದ ಬೇಡಿಕೆ ಇರುವಂತೆ ನೋಡಿಕೊಳ್ಳುವುದು ಮತ್ತು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ವ್ಯಕ್ತಿಗತ ಫಲಾನುಭವಿಗಳಿಗೆ ಪ್ಯಾಕೇಜ್‌ ಮಾದರಿಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಬಹುದು ಎಂದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗಪ್ಪ ಕೋಣನವರ, ಉಪಾಧ್ಯಕ್ಷೆ ಶಾಂತವ್ವ ಬಸಾಪೂರ, ಸದಸ್ಯರು, ಉದ್ಯೋಗ ಚೀಟಿ ಪಡೆದ ಕೂಲಿ ಕಾರ್ಮಿಕರು, ಜನಪ್ರತಿನಿಧಿಗಳು, ತಾಲೂಕುಮಟ್ಟದ ಶಿಶು ಯೋಜನಾಧಿಕಾರಿ ಉಮಾ ಕೆ.ಎಸ್‌., ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೋಮಶೇಖರ ಯರೇಶಿಮಿ ನಿರೂಪಿಸಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.