ಆಧಾರ ನೋಂದಣಿಗೆ ಹರಸಾಹಸ

•ಹೆಚ್ಚಿನ ಕೇಂದ್ರ ತೆರೆಯದ ಸರಕಾರ•ಪ್ರತಿಯೊಂದು ಕೆಲಸಕ್ಕೂ ಆಧಾರ್‌ ಕಾರ್ಡ್‌ ಅಗತ್ಯ

Team Udayavani, Jul 31, 2019, 12:59 PM IST

uk-tdy-3

ಭಟ್ಕಳ: ಆಧಾರ ಕಾರ್ಡ್‌ ನೋಂದಣಿಗಾಗಿ ಸರತಿ ಸಾಲಿನಲ್ಲಿ ನಿಂತ ಜನ.

ಭಟ್ಕಳ: ತಾಲೂಕಿನಲ್ಲಿ ಆಧಾರ ಕಾರ್ಡ್‌ ನೋಂದಣಿ, ತಿದ್ದುಪಡಿಗಾಗಿ ಹರಸಾಹಸ ಪಡಬೇಕಾಗಿ ಬಂದಿದೆ. ಒಂದೆಡೆ ಸರಕಾರ ಎಲ್ಲದಕ್ಕೂ ಆಧಾರ ಕಾರ್ಡ ಕೇಳಿದರೆ, ಇನ್ನೊಂದೆಡೆ ಆಧಾರ ಸೆಂಟರ್‌ಗಳನ್ನೆಲ್ಲ ಮುಚ್ಚಿ ಕೇವಲ ನೆಮ್ಮದಿ ಕೇಂದ್ರ ಮತ್ತು ಅಂಚೆ ಕಚೇರಿಗಳಲ್ಲಿ ಮಾತ್ರ ಆಧಾರ ಕಾರ್ಡ್‌ ನೀಡುವ ಹಾಗೂ ತಿದ್ದುಪಡಿ ಮಾಡಲಾಗುತ್ತಿದ್ದು, ಇದರಿಂದ ಜನ ಸಂಕಟ ಪಡುವಂತಾಗಿದೆ.

ಈ ಹಿಂದೆ ಗ್ರಾಪಂ ಮಟ್ಟದಲ್ಲಿ ಆಧಾರ ಕಾರ್ಡ್‌ ನೋಂದಣಿ ಮಾಡಲಾಗುತ್ತಿದ್ದರೆ ನಂತರದ ದಿನಗಳಲ್ಲಿ ಅವುಗಳನ್ನು ಕೂಡಾ ಬಂದ್‌ ಮಾಡಲಾಯಿತು. ಅಂದು ಆಧಾರ ಕಾರ್ಡ್‌ ಎಲ್ಲ ಕಡೆಗಳಲ್ಲಿಯೂ ಕಡ್ಡಾಯವಲ್ಲದ ಕಾರಣ ಜನತೆ ಹೆಚ್ಚು ಆಸಕ್ತಿ ತೋರಿಸಿಲ್ಲವಾಗಿತ್ತು. ಇಂದು ಆಧಾರ್‌ ಕಡ್ಡಾಯಗೊಳಿಸಿದ ಸರಕಾರ ಆಧಾರ್‌ ಕೇಂದ್ರಗಳನ್ನು ಹೆಚ್ಚುವರಿಯಾಗಿ ತೆರೆದಿಲ್ಲ. ಇದರಿಂದ ನಾಗರಿಕರು ಪರದಾಡುವಂತಾಗಿದೆ.

ಇಲ್ಲಿನ ನೆಮ್ಮದಿ ಕೇಂದ್ರದಲ್ಲಿ ಆಧಾರ ನೋಂದಣಿ, ತಿದ್ದುಪಡಿಗೆ ದಿನಕ್ಕೆ ಕೇವಲ 30 ಜನರಿಗೆ ಮಾತ್ರ ಅವಕಾಶವಿದ್ದು ಟೋಕನ್‌ ಪದ್ಧತಿಯಿಂದ ಜನತೆಗೆ ಅವಕಾಶ ಮಾಡಿಕೊಡುತ್ತಿದ್ದಾರೆ. ದಿನಾಲೂ ನೂರಾರು ಜನ ಟೋಕನ್‌ ಪಡೆಯಲು ಬರುತ್ತಿರುವುದರಿಂದ ಮೊದಲು ಬಂದವರಿಗೆ ಮೊದಲ ಆದ್ಯತೆ ಎನ್ನುವುದರಿಂದ ಬೆಳಗಿನಜಾವ 3 ಗಂಟೆಗೆ ಸರತಿ ಸಾಲು ಆರಂಭವಾಗುತ್ತದೆ. ಇದೇ ರೀತಿ ಅಂಚೆ ಕಚೇರಿ ಎದರು ಕೂಡಾ ಬೆಳಗಿನ ಜಾವ 3-4 ಗಂಟೆಗೆ ಸರತಿಯ ಸಾಲು ಆರಂಭವಾಗುತ್ತಿದೆ. ಮಳೆಯನ್ನೂ ಲೆಕ್ಕಿಸದೇ ಚಿಕ್ಕ ಮಕ್ಕಳೊಂದಿಗೆ ಕೂಡಾ ಅನೇಕರು ಬಂದು ಇಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನಲ್ಲಿ ಕೇವಲ ನೆಮ್ಮದಿ ಕೇಂದ್ರ ಮತ್ತು ಅಂಚೆ ಕಚೇರಿಗಳು ಮಾತ್ರ ಆಧಾರ ಕಾರ್ಡ್‌ ನೋಂದಣಿಗೆ ಕೇಂದ್ರಗಳಾಗಿದ್ದರಿಂದ ಜನತೆಯ ನೆಮ್ಮದಿಯೇ ಹಾಳಾಗಿ ಹೋಗಿದೆ.

ಆಧಾರ್‌ ಕಾರ್ಡ ಪಡೆಯುವಲ್ಲಿ ಹಾಗೂ ತಿದ್ದುಪಡಿ ಮಾಡಿಸುವಲ್ಲಿ ಆಗುತ್ತಿರುವ ತೊಂದರೆ ಜಿಲ್ಲಾಡಳಿತದ ಗಮನದಲ್ಲಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಮಾತ್ರ ಜನತೆಯ ಕುರಿತು ಇವರಿಗಿರುವ ಕಾಳಜಿ ವ್ಯಕ್ತವಾಗುತ್ತದೆ. ತಾಲೂಕಾ ಆಡಳಿತವೂ ಸಹ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕೂಡಾ ಮಾಡದಿರುವುದು ಜನತೆಯನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದಂತಾಗಿದೆ.

ಟಾಪ್ ನ್ಯೂಸ್

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

Brahmavar ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಮೃತ್ಯು

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ

2-kumta

Kumta: ಯುವತಿಯ ಪ್ರಿಯಕರನಿಗೆ ಚಾಕು ಇರಿದು ಹಲ್ಲೆ ಮಾಡಿದ ಮಾಜಿ ಪ್ರಿಯಕರ

2-sirsi

Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.