ಆಮೆಗತಿಯಲ್ಲಿ ಸಾಗಿದ ಪ್ಲಾಟ್ಫಾರಂ ಕಾಮಗಾರಿ

ಕೋಲಾರ ಮಾರ್ಗದ ರೈಲ್ವೆ ಕಾಮಗಾರಿ ಕಳಪೆ • ಇಲಾಖೆ ವಿರುದ್ಧ ಪ್ರಯಾಣಿಕರ ಆಕ್ರೋಶ

Team Udayavani, Jul 31, 2019, 2:07 PM IST

kolar–tdy-3

ಬಂಗಾರಪೇಟೆ ಪಟ್ಟಣ ರೈಲ್ವೆ ಜಂಕ್ಷನ್‌ನಲ್ಲಿ ನಡೆಯುತ್ತಿರುವ ಕೋಲಾರ ಮಾರ್ಗದ ರೈಲ್ವೆ ಪ್ಲಾಟ್ಫಾರಂ ಕಾಮಗಾರಿ ಕುಂಟುತ್ತಾ ಸಾಗಿದೆ.

ಬಂಗಾರಪೇಟೆ: ಪಟ್ಟಣದಲ್ಲಿ ಕೋಲಾರ ರೈಲ್ವೆ ಪ್ಲಾಟ್ಫಾರಂ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಅಲ್ಲದೆ, ಕಾಮಗಾರಿ ಇನ್ನೂ ಮುಗಿದೇ ಇಲ್ಲ,. ಅಷ್ಟರಲ್ಲಾಗಲೇ ಅಲ್ಲಲ್ಲಿ ಸಿಮೆಂಟ್ ಬಿರುಕು ಬಿಟ್ಟು ಕಳಪೆ ಪ್ರದರ್ಶನ ವಾಗಿದೆ. ಆದರೂ ಸಂಬಂಧಪಟ್ಟ ರೈಲ್ವೆ ಇಲಾಖೆ ಅಧಿ ಕಾರಿಗಳು ಕ್ರಮ ಜರುಗಿಸದೇ ಕಣ್ಣು ಮುಚ್ಚಿ ಕುಳಿತಿದ್ದಾರೆ.

ವರ್ಷದಿಂದ ನಡೆಯುತ್ತಿರುವ ಈ ಕಾಮಗಾರಿ ಇನ್ನು ಪೂರ್ಣಗೊಳಿಸಿಲ್ಲ, ಕಾಮಗಾರಿ ಸ್ಥಗಿತವಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ. ಒಂದು ಭಾಗದಲ್ಲಿ ಪ್ಲಾಟ್ಫಾರಂ ಕಾಮಗಾರಿ ನಡೆದಿದ್ದು, ಅದೂ ಕಳಪೆಯಾಗಿದೆ, ಕೆಲವು ಕಡೆ ಪ್ಲಾಟ್ಫಾರಂ ಬಿರುಕು ಬಿಟ್ಟಿದ್ದು, ಉದ್ಘಾಟ ನೆಗೆ ಮುಂಚೆಯೇ ಈ ರೀತಿಯಾಗಿರುವುದು ಖಂಡ ನೀಯ. ಈ ಬಗ್ಗೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿರು ವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಅದೇ ರೀತಿ ಕೋಲಾರ ಪ್ಲಾಟ್ಫಾರಂ ಕಾಮಗಾರಿ ಮಾಡುವಾಗ ಅವೈಜ್ಞಾನಿಕವಾಗಿ ಇದ್ದ ರೈಲ್ವೆಗೇಟ್ ಅನ್ನು ಬಂದ್‌ ಮಾಡಿದ್ದು, ಅರ್ಧ ಕಿ.ಮೀ. ಸುತ್ತಿಕೊಂಡು ಹೋಗಬೇಕಾಗಿದೆ. ಕೊಂಕಣ ಸುತ್ತಿ ಮೈಲಾರಕ್ಕೆ ಬಂದಂತಾಗಿದೆ. ಕೋಲಾರ ಮತ್ತು ಬೂದಿಕೋಟೆ ಎರಡು ರೈಲ್ವೆ ಗೇಟ್ ಸುತ್ತಿಕೊಂಡು ಬರುವ ವೇಳೆಗೆ ಪ್ರಯಾಣಿಕರು ಸುಸ್ತಾಗುತ್ತಾರೆ. ಪ್ರತಿ ದಿನ ಕೆಲಸಕ್ಕೆ ಹೋಗುವವರಿಗೆ, ಕೂಲಿ ಕಾರ್ಮಿಕರಿಗೆ ಅಸ್ಪತ್ರೆಗೆ ಹೋಗುವವರಿಗೆ ತುಂಬಾ ತೊಂದರೆಯಾಗುತ್ತಿದೆ. ಬೂದಿಕೋಟೆ ಮಾಲೂರು ಕಡೆಗೆ ಹೋಗುವ ಪ್ರಯಾಣಿ ಕರಿಗೂ ತೊಂದರೆ ಉಂಟಾಗಿದೆ.

ಈ ರೈಲ್ವೆ ಗೇಟ್ ನಿರ್ಮಾಣ ಮಾಡುವಾಗ ಅವೈಜ್ಞಾನಿಕವಾಗಿ ರಸ್ತೆ ಮಾಡಿದ್ದು, ಇದರಿಂದ ತಗ್ಗು ಪ್ರದೇಶಕ್ಕೆ ನೀರು ನುಗ್ಗಿ ಸಾರ್ವಜನಿಕರು ಪರದಾಡು ವಂತಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ರೈಲ್ವೆ ಅಧಿಕಾರಿ ಗಳ ವಿರುದ್ಧ ಪ್ರತಿಭಟನೆ ಮಾಡಲಾಗಿತ್ತು. ಆದರೆ, ಇದಕ್ಕೆಲ್ಲ ರೈಲ್ವೆ ಇಲಾಖೆ ಕಿವಿಗೊಡುತ್ತಿಲ್ಲ.

ಸ್ಥಳೀಯ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಆಕ್ರೋಶಗೊಂಡು, ಕಾರ್ಯಕ್ರಮವೊಂದರಲ್ಲಿ ಸಂಸದ ಎಸ್‌.ಮುನಿಸ್ವಾಮಿಗೆ ಸೂಚಿಸಿ ರೈಲ್ವೆ ಗೇಟ್ ಅನ್ನು ಈ ಹಿಂದೆ ಇದ್ದ ಕಡೆ ತೆರೆಯಬೇಕು, ಇಲ್ಲವಾದಲ್ಲಿ ಸಾರ್ವಜನಿಕರೊಂದಿಗೆ ಸಾವಿರಾರು ಸಂಖ್ಯೆಯಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಕೆಯನ್ನು ಸಹ ನೀಡಿದ್ದರು. ಆದರೆ, ಇದುವರೆಗೂ ಯಾವುದೇ ಬದಲಾವಣೆಗಳಾಗದೇ ಪ್ರಯಾಣಿಕರು, ಸಾರ್ವಜನಿಕರು ಪರದಾಡುವಂತಾಗಿದೆ.

ಇನ್ನು ರೈಲ್ವೆ ಇಲಾಖೆ ನಿರ್ಮಾಣ ಮಾಡಿರುವ ಅಂಡರ್‌ಪಾಸ್‌ಗಳು ಮಳೆ ಬಂದಲ್ಲಿ ನದಿಗಳಂತೆ ನೀರು ತುಂಬಿ ವಾಹನ ಸವಾರರು, ಹಳ್ಳಿಗಳಿಗೆ ಹೋಗುವ ಗ್ರಾಮಸ್ಥರು ಪರದಾಡುವಂತಾಗಿದೆ. ಈ ಬಗ್ಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ರೈಲ್ವೆ ಅಧಿಕಾರಿಗಳು ಗಮನ ಹರಿಸದೇ ಇರುವುದು ವಿಪರ್ಯಾಸವೇ ಸರಿ. ಕಾಮಗಾರಿ ಪೂರ್ಣಗೊಳಿಸುವ ನೆಪದಲ್ಲಿ ಸಾರ್ವಜನಿಕರಿಗೆ ಅನಾನುಕೂಲ ಮಾಡುವುದು ಸರಿಯೇ? ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

● ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.