ಬೇಸಗೆ ನೀರಿನ ಅಭಾವ ತಪ್ಪಿಸಿದ ಜಲ ಮರುಪೂರಣ


Team Udayavani, Aug 1, 2019, 6:39 AM IST

jala-marupoorana

ಉಡುಪಿ: ಉದಯವಾಣಿಯ ಮಳೆಕೊಯ್ಲು ಅಭಿಯಾನಕ್ಕೆ ಎಲ್ಲೆಡೆ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಈಗಾಗಲೇ ಹಲವಾರು ಮಂದಿ ಅನುಷ್ಠಾನಗೊಳಿಸಿಕೊಂಡಿರುವವರು ಫ‌ಲಿತಾಂಶ ಕಂಡು ಹೆಮ್ಮೆಪಡುತ್ತಿದ್ದಾರೆ. ಮಾರ್ಪಳ್ಳಿಯ ನಂದಗೋಕುಲ ಕ್ರೀಡಾಂಗಣ ಸಮೀಪದ ನಿವಾಸಿ, ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಪ್ರಾಧ್ಯಾಪಕ ಡಾ| ಆನಂದ ಆಚಾರ್ಯ ಅವರು 3 ವರ್ಷಗಳ ಹಿಂದೆ ಮನೆಯಲ್ಲಿ ಮಳೆಕೊಯ್ಲು ವಿಧಾನವನ್ನು ಅಳವಡಿಸಿಕೊಂಡು ಯಶಸ್ವಿಯಾಗಿದ್ದಾರೆ.

ಮನೆಯ ಛಾವಣಿಯ ಮೇಲಿನಿಂದ ಬೀಳುವ ಮಳೆನೀರನ್ನು ಪೈಪ್‌ಗ್ಳ ಸಹಾಯದಿಂದ ನೇರವಾಗಿ ಬಾವಿಗೆ ಬಿಡುತ್ತಿದ್ದಾರೆ. ಪೈಪ್‌ಗ್ಳ ತುದಿಗೆ ಬಲೆಗಳನ್ನು ಅಳವಡಿಸಿದ್ದು, ಕಸಕಡ್ಡಿಗಳು ಇದರಲ್ಲಿ ಶೇಖರಣೆಯಾಗುತ್ತವೆ. 4 ದಿನಗಳಿಗೊಮ್ಮೆ ಇದನ್ನು ಶುಚಿತ್ವ ಮಾಡಲಾಗುತ್ತಿದೆ. ಇವರ ಛಾವಣಿಯ ಮೇಲೆ ಬೀಳುವ ಶೇ. 95 ಮಳೆನೀರು ಬಾವಿ ಸೇರುತ್ತಿದೆ.

ಕುಡಿಯಲು ಹಾಗೂ ಮರಗಿಡಗಳಿಗೆ ಸಿಂಪಡಿಸಲು ಅವರು ಇದನ್ನು ಬಳಕೆ ಮಾಡುತ್ತಿದ್ದಾರೆ. 3 ವರ್ಷಗಳ ಹಿಂದೆ ಬೇಸಗೆಯ ಸಮಯದಲ್ಲಿ ಇವರಿಗೆ ವಿಪರೀತ ನೀರಿನ ಅಭಾವ ಉಂಟಾಗುತ್ತಿತ್ತು. ಇದನ್ನು ಮನಗಂಡು ಅವರಿಗೆ ಮಳೆಕೊಯ್ಲು ಮಾಡುವ ಉಪಾಯ ಹೊಳೆಯಿತು. ಪೈಪ್‌ ಅಳವಡಿಕೆ ಹಾಗೂ ರಾಡ್‌ಗಳನ್ನು ಹಾಕಲು ಸುಮಾರು 18ರಿಂದ 20 ಸಾವಿರ ರೂ. ಖರ್ಚಾಗಿತ್ತು.
ಆದರೆ ಈಗ ಅದರ ಪರಿಪೂರ್ಣ ಪ್ರಯೋಜನ ಲಭ್ಯವಾಗುತ್ತಿದೆ ಎಂದು ತಿಳಿಸುತ್ತಾರೆ ಅವರು.

3 ವರ್ಷಗಳ ಹಿಂದೆ ಉಡುಪಿಯಲ್ಲಿ ತೀವ್ರವಾಗಿ ನೀರಿನ ಅಭಾವ ಉಂಟಾಗಿತ್ತು. ಆದರೆ ಇದನ್ನು ಅನುಷ್ಠಾನ ಮಾಡಿದ ಅನಂತರ ಇಲ್ಲಿಯವರೆಗೂ ನೀರಿಗೆ ಯಾವುದೇ ಸಮಸ್ಯೆ ಉಂಟಾಗಲಿಲ್ಲ. ಬೇಸಗೆಯಲ್ಲಿ ಪಂಪ್‌ಗ್ಳ ಮೂಲಕ ಬಾವಿಯಿಂದ ನೀರನ್ನು ಗಿಡಗಳಿಗೆ ಹಾಯಿಸಲಾಗುತ್ತಿತ್ತು. ಆದರೂ ಕೂಡ ಮೇ ತಿಂಗಳ ಅನಂತರವೂ ಬಾವಿಯಲ್ಲಿ ಸುಮಾರು ಮುಕ್ಕಾಲು ಅಡಿಯಷ್ಟು ನೀರು ಲಭ್ಯವಿರುತ್ತದೆ.

ಹೆಚ್ಚಾಯಿತು ಒರತೆ
ಮಳೆನೀರು ಕೊಯ್ಲು ಅನುಷ್ಠಾನದಿಂದ ಇವರ ಮನೆಯ ಪಕ್ಕದಲ್ಲಿರುವ ಬಾವಿಗಳ ಒರತೆಯೂ ಹೆಚ್ಚಾಗಿದೆ. ಇದರಿಂದಾಗಿ ಬೇಸಗೆಯ ಸಮಯದಲ್ಲಿಯೂ ನೀರಿಗಾಗಿ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ. ಬಾವಿಗೆ ಬಿಟ್ಟ ನೀರು ಲಭಿಸುತ್ತದೆ. ಯಾವುದೇ ರೀತಿಯಲ್ಲಿ ದುರುಪಯೋಗವಾಗುವುದಿಲ್ಲ ಎನ್ನುತ್ತಾರೆ ಡಾ| ಆನಂದ ಆಚಾರ್ಯ ಅವರು.

ನೀವೂ ಅಳವಡಿಸಿ, ವಾಟ್ಸಪ್‌ ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆಗಳಲ್ಲಿ ಅಳವಡಿಸುತ್ತಿರುವುದು ಗಮನಕ್ಕೆ ಬಂದಿದೆ. ಇನ್ನಷ್ಟು ಮಂದಿಯನ್ನು ಜಲ ಸಂರಕ್ಷಣೆ ಯತ್ತ ತೊಡಗಿಸಲು, ನಿಮ್ಮ ಮನೆಯಲ್ಲಿ ಕೈಗೊಂಡ ಮಳೆ ಕೊಯ್ಲು ವ್ಯವಸ್ಥೆಯ ಕುರಿತು ವಿವರಿಸಿ, ಫೋಟೋ ವಾಟ್ಸಪ್‌ನಲ್ಲಿ ಕಳುಹಿಸಿ. ಅವುಗಳನ್ನು ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ.
7618774529

ಟಾಪ್ ನ್ಯೂಸ್

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.