ಪಿಒಪಿ ಮೂರ್ತಿಗಳ ಮಾರಾಟ ನಿರ್ಬಂಧ


Team Udayavani, Aug 1, 2019, 3:05 AM IST

pop

ಬೆಂಗಳೂರು: ಗಣೇಶ ಚತುರ್ಥಿಯಂದು ಪಿಒಪಿ ಹಾಗೂ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ಬಳಸಬಾರದು ಎಂದು ಹೈಕೋರ್ಟ್‌ ಆದೇಶಿಸಿದ್ದರೂ ನಗರದಲ್ಲಿ ಕಡಿವಾಣ ಬಿದ್ದಿಲ್ಲ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮೇಯರ್‌ ಗಂಗಾಂಬಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂಬಂಧ ಬುಧವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಪಿಒಪಿ ಗಣೇಶ ಮೂರ್ತಿಗಳನ್ನು ಕೂರಿಸಲು ಹಾಗೂ ಕೆರೆಗಳಲ್ಲಿ ವಿಸರ್ಜನೆ ಮಾಡಲು ಅನುಮತಿ ಕೊಡಬಾರದು. ನಗರದಲ್ಲಿ ತಯಾರಿ, ಮಾರಾಟ, ಸಂಗ್ರಹಸಿಟ್ಟಿರುವ ಗೋಡನ್‌ಗಳಿಗೆ ಭೇಟಿ ನೀಡಿ ಎಲ್ಲಾ ಗಣೇಶ ಮೂರ್ತಿಗಳನ್ನು ಜಪ್ತಿ ಮಾಡಿ ಪಾಲಿಕೆ ನಿಗದಿಪಡಿಸಿರುವ ಸ್ಥಳಕ್ಕೆ ಕೊಂಡೊಯ್ಯಬೇಕು. ಅದಕ್ಕೆ ಬೇಕಾದ ವಾಹನ ವ್ಯವಸ್ಥೆಯನ್ನು ಪಾಲಿಕೆಯಿಂದಲೇ ಕಲ್ಪಿಸಲಾಗುವುದು.

ಜಪ್ತಿ ಮಾಡುವ ವೇಳೆ ಪೊಲೀಸ್‌ ಭದ್ರತೆ ಕಲ್ಪಿಸಲು ನಗರ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆಯಲಾಗುವುದು ಎಂದು ಹೇಳಿದರು. ನಗರಕ್ಕೆ ಹೊರರಾಜ್ಯ ಮತ್ತು ಹೊರ ನಗರಗಳಿಂದ ಪಿಒಪಿ ಗಣೇಶ ಮೂರ್ತಿಗಳನ್ನು ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ, ಪೊಲೀಸ್‌ ಸಿಬ್ಬಂದಿಗಳನ್ನು ಚೆಕ್‌ಪೋಸ್ಟ್‌ಗಳಲ್ಲಿ ನಿಯೋಜನೆ ಮಾಡುವಂತೆಯೂ ಆಯುಕ್ತರಲ್ಲಿ ಮನವಿ ಮಾಡಲಾಗಿದೆ ಎಂದು ಹೇಳಿದರು.

ಈ ಬಾರಿ ನಗರದಲ್ಲಿ ಯಾವುದೇ ಕಾರಣಕ್ಕೂ ಪಿಒಪಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡುವಂತಿಲ್ಲ. ಪಾದಾಚಾರಿ ಮಾರ್ಗದಲ್ಲಿ ಗಣೇಶ ಮೂರ್ತಿಗಳನ್ನಿಟ್ಟು ಮಾರಾಟ ಮಾಡಲು ಅನುಮತಿ ಕೊಡಬೇಡಿ. ಗಣೇಶ ಮೂರ್ತಿ ತಯಾರಿಸಲು ಪರವಾನಗಿ ನೀಡಕೂಡದು. ಜೊತಗೆ ಪಿಒಪಿ ಗಣೇಶ ಮೂರ್ತಿಗಳನ್ನು ಕೂರಿಸಲು ಅನುಮತಿ ನೀಡಬಾರದು ಎಂದರು.

ತಾತ್ಕಾಲಿಕ ಹೊಂಡಗಳ ನಿರ್ಮಾಣ: ನಗರದಲ್ಲಿರುವ ಪ್ರಮುಖ ಕೆರೆಗಳ ಬಳಿ ತಾತ್ಕಾಲಿಕ ಹೊಂಡಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು. ಜೊತೆಗೆ ಆ ಸ್ಥಳಗಳಲ್ಲಿ ಬ್ಯಾರಿಕೇಡ್‌, ವಿದ್ಯುತ್‌ ದೀಪಗಳ ಅಳವಡಿಕೆ, ಸಿಸಿ ಕ್ಯಾಮರಾ ಅಳವಡಿಕೆ ಮಾಡಬೇಕು. ಗಣೇಶ ವಿಸರ್ಜನಾ ವಾಹನ ಎಲ್ಲೆಲ್ಲಿ ನಿರ್ಮಾಣ ಮಾಡಬೇಕು ಎಂಬ ಪಟ್ಟಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌ ಸ್ಪಷ್ಟಪಡಿಸಿದರು.

ಏಕಗವಾಕ್ಷಿ ಪದ್ಧತಿ: ಕಳೆದ ವರ್ಷದಂತೆ ಈ ಬಾರಿಯೂ ಕೂಡ ಬಿಬಿಎಂಪಿ, ಬೆಸ್ಕಾಂ, ಪೊಲೀಸ್‌ ಇಲಾಖೆಯಿಂದ ಏಕಗವಾಕ್ಷಿ ಪದ್ಧತಿಯಲ್ಲೇ ಗಣೇಶ ಮೂರ್ತಿಗಳನ್ನು ಕೂರಿಸಲು ಅನುವು ಮಾಡಿಕೊಡಲಾಗುವುದು. ಪಾಲಿಕೆ ವ್ಯಾಪ್ತಿಯಲ್ಲಿ ಕೂರಿಸುವ ಗಣೇಶ ಮೂರ್ತಿಗಳಿಗೆ ನೆಲ ಬಾಡಿಗೆಯನ್ನು ಸಂಗ್ರಹಿಸುವುದಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.