ಅನ್ನದಾತನಿಗೆ ಹೊರೆಯಾದ ಕೂಲಿ

ಕೃಷಿ ಚಟುವಟಿಕೆಗೆ ಕಾರ್ಮಿಕರ ಕೊರತೆ

Team Udayavani, Aug 1, 2019, 10:51 AM IST

1-Agust-10

ಮುದಗಲ್ಲ: ಆಶಿಹಾಳದ ಹೊಲವೊಂದರಲ್ಲಿ ಬಿತ್ತನೆಯಲ್ಲಿ ತೊಡಗಿದ್ದ ರೈತರು.

ದೇವಪ್ಪ ರಾಠೊಡ
ಮುದಗಲ್ಲ:
ಪಟ್ಟಣ ಸೇರಿದಂತೆ ನಾಗರಹಾಳ ಹೋಬಳಿ ವ್ಯಾಪ್ತಿಯಲ್ಲಿ ಉತ್ತಮ ಮಳೆ ಸುರಿದ ಪರಿಣಾಮ ಕೃಷಿ ಚಟುವಟಿಕೆ ಆರಂಭವಾಗಿದೆ. ಒಂದೆಡೆ ಕೂಲಿ ಕಾರ್ಮಿಕರ ಕೊರತೆ ಎದುರಾಗಿದ್ದರೆ, ದುಪ್ಪಟ್ಟು ಕೂಲಿ ರೈತರಿಗೆ ಹೊರೆಯಾಗಿ ಪರಿಣಮಿಸಿದೆ.

ಮುಂಗಾರು ಮಳೆ ಸುಮಾರು ಒಂದು ತಿಂಗಳು ತಡವಾಗಿ ಆರಂಭವಾಗಿದ್ದು, ಇತ್ತೀಚೆಗಷ್ಟೇ ಈ ಭಾಗದಲ್ಲಿ ಉತ್ತಮ ಮಳೆ ಸುರಿದಿದೆ. ಈಗ ಬಿತ್ತನೆಗೆ ಪೂರಕ ವಾತಾವರಣ ನಿರ್ಮಾಣವಾಗಿದೆ. ಈ ಭಾಗದಲ್ಲಿ ಕೃಷಿಕರು ಹೆಚ್ಚಿರುವುದರಿಂದ ಏಕಕಾಲಕ್ಕೆ ಬಿತ್ತನೆ ಚಟುವಟಿಕೆ ಶುರುವಾಗಿದೆ. ಸಣ್ಣ ರೈತರು ಕುಟುಂಬದ ಸದಸ್ಯರೊಂದಿಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದರೆ, ದೊಡ್ಡ ದೊಡ್ಡ ರೈತರು ಕೂಲಿಕಾರರನ್ನು ಅವಲಂಬಿಸಿದ್ದಾರೆ. ಹೀಗಾಗಿ ಕಾರ್ಮಿಕರ ಕೊರತೆ ಎದುರಾಗಿದ್ದು, ಸಹಜವಾಗಿಯೇ ಹೆಚ್ಚಿನ ಕೂಲಿಗೆ ಬೇಡಿಕೆ ಇಡುತ್ತಿದ್ದಾರೆ. ಬಿತ್ತನೆ ಬೀಜ, ರಸಗೊಬ್ಬರ, ಬೇಸಾಯ ಹಾಗೂ ಕೂಲಿಗಾಗಿ ಸಾವಿರಾರು ರೂಪಾಯಿ ಮೀಸಲಿಡಬೇಕಾಗಿದೆ. ವರ್ಷದಿಂದ ವರ್ಷಕ್ಕೆ ಕೂಲಿ ದರ ಹೆಚ್ಚುತ್ತಿದ್ದು ರೈತರಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ವರ್ಷದ ಹಿಂದೆ 100 ರೂ. ಇದ್ದ ಕೂಲಿ ಈಗ 200, 250ಕ್ಕೆ ತಲುಪಿದೆ ಎನ್ನುತ್ತಾರೆ ಅಡವಿಬಾವಿ ಗ್ರಾಮದ ರೈತ ಬಸನಗೌಡ ಮಾಲಿಪಾಟೀಲ.

ಕಾರ್ಮಿಕರ ಕೊರತೆ: ಇಷ್ಟು ದಿನ ಮಳೆ ಇಲ್ಲದ್ದಕ್ಕೆ ಈ ಭಾಗದ ಗ್ರಾಮ ಮತ್ತು ತಾಂಡಾಗಳಲ್ಲಿನ ಸಣ್ಣ ರೈತರು, ಕೃಷಿ ಕಾರ್ಮಿಕರು ಉದ್ಯೋಗ ಅರಸಿ ದೂರದ ಮಹಾನಗರಗಳಿಗೆ ಗುಳೆ ಹೋಗಿದ್ದಾರೆ. ಇನ್ನು ಸ್ಥಳೀಯವಾಗಿ ಇರುವವರು ಕೆಲವೆಡೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸದಲ್ಲಿ ತೊಡಗಿದ್ದಾರೆ. ಹೀಗಾಗಿ ಕೃಷಿ ಚಟುವಟಿಕೆಗೆ ಕೃಷಿ ಕಾರ್ಮಿಕರ ಕೊರತೆ ಎದುರಾಗಿದೆ ಎನ್ನುತ್ತಾರೆ ರೈತರು.

ಬೆಳೆಗೆ ಜೀವ ಕಳೆ: ಖೈರವಾಡಗಿ, ಕಾಚಾಪುರ, ಬಯ್ನಾಪುರ, ಅಮದಿಹಾಳ, ಉಪ್ಪಾರ ನಂದಿಹಾಳ ಹಾಗೂ ನಾಗರಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಜೂನ್‌ ತಿಂಗಳಲ್ಲಿಯೇ ಉತ್ತಮ ಮಳೆ ಸುರಿದ ಕಾರಣ ರೈತರು ಹರ್ಷದಿಂದ ಬಿತ್ತನೆ ಆರಂಭಿಸಿದ್ದರು. ಬಿತ್ತನೆ ಮಾಡಿ 25 ದಿನಗಳೇ ಕಳೆದಿದ್ದವು. ಮತ್ತೆ ಮಧ್ಯದಲ್ಲಿ ಮಳೆ ಕೈಕೊಟ್ಟ ಕಾರಣ ಆತಂಕಗೊಂಡಿದ್ದರು. ಆದರೆ ಕಳೆದ ವಾರದಿಂದ ಉತ್ತಮ ಮಳೆ ಸುರಿದ ಕಾರಣ ಬೆಳೆಗಳಿಗೆ ಜೀವಕಳೆ ಬಂದಿದೆ. ಹತ್ತಿ, ತೊಗರಿ, ಸಜ್ಜಿ, ಹೆಸರು, ಮೆಕ್ಕೆಜೋಳ, ಎಳ್ಳು ಬೆಳೆ ಚೆನ್ನಾಗಿ ಬಂದಿದೆ. ಕೂಲಿಕಾರರ ಸಮಸ್ಯೆ ನಡುವೆಯೂ ಎಡೆಕುಂಟೆ, ಕಸ ತಗೆಯುವುದು, ರಸಗೊಬ್ಬರ ಬಳಕೆ ಕಾರ್ಯದಲ್ಲಿ ರೈತರು ತೊಡಗಿದ್ದಾರೆ.

ಎತ್ತುಗಳಿಗೆ ಬೇಡಿಕೆ: ರೈತರ ಮಿತ್ರ ಎನ್ನಿಸಿಕೊಂಡಿರುವ ಎತ್ತುಗಳಿಗೆ ಬೇಡಿಕೆ ಹೆಚ್ಚಿದೆ. ಮಳೆ ಸುರಿದಾಗ ಭೂಮಿ ಹದಗೊಳಿಸಲು, ಬಿತ್ತನೆ ಮಾಡಲು, ಎಡೆಕುಂಟಿಗೆ ರಾಸುಗಳು ಬೇಕೇಬೇಕು. ರೈತರು ರಾಸುಗಳನ್ನು ಬಾಡಿಗೆ ಪಡೆಯಲು ದಿನ ಒಂದಕ್ಕೆ 1000 ದಿಂದ 1500 ರೂ. ನೀಡಬೇಕಾಗಿದೆ. ಎಂದು ಆಶಿಹಾಳ ತಾಂಡಾದ ರೈತ ಮಾನಪ್ಪ ರಾಮದಾಸಪ್ಪ ತಿಳಿಸಿದ್ದಾರೆ.

ಭೂ ರಹಿತರು ನಗರ ಪ್ರದೇಶಗಳಿಗೆ ಗುಳೆ ಹೋಗಿದ್ದಾರೆ. ಇಲ್ಲಿಯೇ ಇರುವ ಕೆಲ ಕೂಲಿ ಕಾರ್ಮಿಕರು ನರೇಗಾ ಕೆಲಸದಲ್ಲಿ ತೊಡಗಿದ್ದಾರೆ. ಹೀಗಾಗಿ ಕೃಷಿ ಚಟುವಟಿಕೆಗೆ ಕೂಲಿಕಾರರ ಕೊರತೆ ಎದುರಾಗಿದೆ.
ದೇವಪ್ಪ ತೊಂಡಿಹಾಳ ,
ರೈತ

ಮುಂಗಾರು ತಡವಾದರೂ ಉತ್ತಮ ಮಳೆಯಾಗಿದ್ದರಿಂದ ಬೆಳೆ ಚೆನ್ನಾಗಿಬಂದಿದೆ. ರೈತರು ಕೃಷಿ ಇಲಾಖೆ ಮಾರ್ಗದರ್ಶನದಲ್ಲಿ ಕೃಷಿಯಲ್ಲಿ ತೊಡಗಿ ಹೆಚ್ಚಿನ ಇಳುವರಿ ಪಡೆಯಬಹುದು.
ವೆಂಕಟೇಶ ಕುಲಕರ್ಣಿ,
ಕೃಷಿ ಅಧಿಕಾರಿ

ಟಾಪ್ ನ್ಯೂಸ್

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.