ಬದಿಯಡ್ಕ- ಪೆರ್ಲ ರಸ್ತೆಯಲ್ಲಿ ವಾಹನ ಸಂಚಾರ ಅನುಮತಿ
Team Udayavani, Aug 1, 2019, 5:41 PM IST
ಬದಿಯಡ್ಕ: ಹತ್ತು ದಿನಗಳ ಹಿಂದೆ ಭೂಕುಸಿತ ಸಂಭವಿಸಿದ್ದ ಕರಿಂಬಿಲದ ಬದಿಯಡ್ಕ – ಪೆರ್ಲ ಅಂತರ್ ರಾಜ್ಯ ರಸ್ತೆಯಲ್ಲಿ ಸೀಮಿತ ಅವಧಿಗೆ ರಸ್ತೆ ಸಂಚಾರಕ್ಕೆ ಕಾಸರಗೋಡು ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ.
ಜಿಲ್ಲಾಧಿಕಾರಿಯವರ ಆದೇಶದ ಪ್ರಕಾರ ಪ್ರತೀದಿನ ಬೆಳಿಗ್ಗೆ 7 ರಿಂದ ಸಾಯಂಕಾಲ 7ರವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಅನುಮತಿಯನ್ನು ನೀಡಿದೆ.
ಈ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟಸಾಧ್ಯ ಎಂಬುದರ ಕುರಿತಾಗಿ ಮತ್ತು ಇಲ್ಲಿನ ನೈಜ ಸಮಸ್ಯೆಯ ಕುರಿತಾಗಿ ‘ಉದಯವಾಣಿ’ ಪತ್ರಿಕೆಯಲ್ಲಿ ವಿವರವಾದ ಸಚಿತ್ರ ವರದಿ ಪ್ರಕಟವಾಗಿತ್ತು.