ಸಕ್ರಿಯಗೊಂಡ ಮೀನುಗಾರಿಕೆ: ಬೆಸ್ತರಲ್ಲಿ ಹೊಸ ಚೈತನ್ಯ

ಟ್ರಾಲಿಂಗ್‌ ಮೀನುಗಾರಿಕೆಗೆ ನಿಷೇಧ ಅವಧಿ ಅಂತ್ಯ

Team Udayavani, Aug 2, 2019, 5:04 AM IST

01KSDE10

ಕಾಸರಗೋಡು: ಐವತ್ತೆರಡು ದಿನಗಳ ರಜೆಯ ಬಳಿಕ ಆ. 1ರಿಂದ ಯಾಂತ್ರೀಕೃತ ಮೀನುಗಾರಿಕೆ ಆರಂಭಗೊಂಡಿದ್ದು, ಮೀನುಗಾರಿಕೆ ಯಲ್ಲಿ ತೊಡಗಿರುವ ಬೆಸ್ತರಿಗೆ ಹೊಸ ಚೈತನ್ಯ ಬಂದಿದೆ. ಗುರುವಾರ ಬಹುತೇಕ ಯಾಂತ್ರೀಕೃತ ಬೋಟ್‌ಗಳು ಸಮುದ್ರಕ್ಕಿಳಿದಿದ್ದು, ಮೀನುಗಾರಿಕೆ ಮತ್ತೆ ಆರಂಭಿಸಿವೆ. ಶೆಡ್‌ಗಳಲ್ಲಿದ್ದ ಅಥವಾ ಲಂಗರು ಹಾಕಿ ದಡದಲ್ಲಿ ನಿಲ್ಲಿಸಿದ್ದ ಬೋಟ್‌ಗಳನ್ನು ಸಿದ್ಧಪಡಿಸುವ ಪ್ರಕ್ರಿಯೆಯೂ ನಡೆಯುತ್ತಿದ್ದು, ಕೆಲವೇ ದಿನಗಳಲ್ಲಿ ಕಾಸರಗೋಡಿನಲ್ಲೂ ಆಳ ಸಮುದ್ರ ಮೀನುಗಾರಿಕೆ ಸಕ್ರಿಯಗೊಳ್ಳಲಿದೆ.

ಆಳ ಸಮುದ್ರದತ್ತ ಮೀನುಗಾರರು
ಜು. 31ರ ಮಧ್ಯರಾತ್ರಿ ಟ್ರಾಲಿಂಗ್‌ ನಿಷೇಧ ಕಾಲಾವಧಿ ಕೊನೆಗೊಂಡಿದ್ದು, ಬೆಸ್ತರಲ್ಲಿ ಹಬ್ಬದ ವಾತಾವರಣ ಕಂಡು ಬಂದಿದೆ. ಕಳೆದ 52 ದಿನಗಳಿಂದ ಸಾಂಪ್ರದಾಯಿಕ ದೋಣಿಗಳಲ್ಲಿ ಬಲೆ ಬೀಸಿ ಸಮುದ್ರ ದಡದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಬೆಸ್ತರು ಇದೀಗ ಆಳ ಸಮುದ್ರಕ್ಕೆ ತೆರಳುತ್ತಿದ್ದಾರೆ.

ಮೀನು ಖರೀದಿ ಸಕ್ರಿಯ
ಮೀನುಗಾರಿಕೆಗೆ ತೆರಳಿದ್ದ ಬೋಟುಗಳು ಭಾರೀ ಮೀನು ಸಹಿತ ದಡ ಸೇರಿವೆ. ಬೋಟ್‌ಗಳಲ್ಲಿ ಬಂದ ಮೀನು ಖರೀದಿಸಲು ನೂರಾರು ಮಂದಿ ಮಹಿಳೆಯರು ಸಮುದ್ರ ಕಿನಾರೆಗೆ ತಲುಪಿದ್ದು, ಮೀನು ಖರೀದಿಯಲ್ಲಿ ಸಕ್ರಿಯರಾಗಿದ್ದಾರೆ. ಮೀನು ಖರೀದಿಸಿ ಮಾರುಕಟ್ಟೆಯಲ್ಲಿ ಮೀನು ಮಾರಾಟ ಮಾಡುವ ಹುಮ್ಮಸ್ಸಿನಲ್ಲಿದ್ದಾರೆ. ಸಣ್ಣ ಮತ್ತು ದೊಡ್ಡ ಗಾತ್ರದ ಯಾಂತ್ರೀಕೃತ ಬೋಟ್‌ಗಳು ಮೀನುಗಾರಿಕೆಯಲ್ಲಿ ತೊಡಗಿವೆ.

ಮುಂದಿನ ಕೆಲವೇ ದಿನಗಳಲ್ಲಿ ಎಲ್ಲ ಬೋಟ್‌ಗಳೂ ಕೂಡ ಮೀನುಗಾರಿಕೆಗೆ ತೆರಳಲಿವೆ. ಟ್ರಾಲಿಂಗ್‌ ನಿಷೇಧದ ಬಳಿಕ ಮೀನುಗಾರಿಕೆಗೆ ತೆರಳಿದ ಯಾಂತ್ರೀಕೃತ ದೋಣಿಗಳಿಗೆ ಪ್ರಥಮ ದಿನ ಸಾಕಷ್ಟು ಸಿಗಡಿ ಮತ್ತು ಬೆರಕೆ ಮೀನಿನ ಮರಿಗಳು ಲಭಿಸಿವೆ. ಚೆರ್ವತ್ತೂರಿನ ಮಡಕರ ಮೀನುಗಾರಿಕಾ ಬಂದರಿನಲ್ಲಿ ಲಂಗರು ಹಾಕಿ ನಿಂತಿದ್ದ ಎಲ್ಲ ದೋಣಿಗಳು ಮೀನುಗಾರಿಕೆಗೆ ತೆರಳಲು ಉತ್ಸುಕತೆಯಲಿವೆ. ಈಗಾಗಲೇ ಹಲವು ದೋಣಿಗಳು ಸಮುದ್ರಕ್ಕಿಳಿದಿವೆ. ಕಾಸರಗೋಡು ಜಿಲ್ಲೆಯ ಮೀನುಗಾರರ ಜತೆಯಲ್ಲಿ ಇತರ ರಾಜ್ಯಗಳ ಕಾರ್ಮಿಕರು ಮೀನುಗಾರಿಕೆಗೆ ಸಾಗುತ್ತಿದ್ದಾರೆ.

ಶೀಘ್ರ ಯಾಂತ್ರೀಕೃತ ದೋಣಿಗಳು ಸಮುದ್ರಕ್ಕೆ
ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಯಾಂತ್ರೀಕೃತ ದೋಣಿಗಳು ಸಮುದ್ರಕ್ಕಿಳಿಯುವ ಮೂಲಕ ಮೀನು ಮಾರುಕಟ್ಟೆಯೂ ಸಕ್ರಿಯವಾಗಲಿದೆ. ಇದೇ ವೇಳೆ ಅನ್ಯ ರಾಜ್ಯಗಳಿಂದ ಬರುವ ಮೀನುಗಳಿಗೆ ವಿಷಾಂಶವುಳ್ಳ ರಾಸಾಯನಿಕ ವಸ್ತುಗಳನ್ನು ಹಾಕುತ್ತಿರುವ ಬಗ್ಗೆ ವರದಿಯಾದ ಹಿನ್ನೆಲೆಯಲ್ಲಿ ಮೀನು ಮಾರುಕಟ್ಟೆ ಹಿನ್ನಡೆ ಅನುಭವಿಸಿತ್ತು. ಆದರೆ ಇದೀಗ ರಾಜ್ಯದಲ್ಲಿ ಮೀನುಗಾರಿಕೆ ಆರಂಭಗೊಂಡಿರುವುದರಿಂದ ಕೇರಳದ ಮೀನುಗಾರರು ಬಲೆ ಬೀಸಿ ಪಡೆದ ಮೀನುಗಳು ಮಾರುಕಟ್ಟೆಗೆ ಬರಲಿವೆ. ಇದರಿಂದಾಗಿ ಮತ್ತೆ ಮೀನು ಮಾರುಕಟ್ಟೆ ಹಿಂದಿನಂತೆ ಹಬ್ಬದ ವಾತಾವರಣಕ್ಕೆ ಮರಳಲಿದೆ.

ಕೆಲವು ದಿನಗಳ ವರೆಗೆ ಮೀನಿನ ದರ ದುಬಾರಿಯಾಗಿದ್ದು, ಮುಂದಿನ ದಿನಗಳಲ್ಲಿ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಮೀನು ಮಾರಾಟಗಾರರು ಹೇಳುತ್ತಿದ್ದಾರೆ.

ಟ್ರಾಲಿಂಗ್‌ ನಿಷೇಧದ ಬಳಿಕ ಆ. 1ರಿಂದ ಮತ್ತೆ ಆಳ ಸಮುದ್ರ ಮೀನುಗಾರಿಕೆ ಆರಂಭಗೊಂಡಿದ್ದು, ಬೆಸ್ತರಲ್ಲಿ ಹೊಸ ಚೈತನ್ಯ ಮೂಡಿದೆ. ಕಾಸರಗೋಡು ಜಿಲ್ಲೆಯ ಮಡಕರ ಮೀನುಗಾರಿಕಾ ಬಂದರು ಮತ್ತೆ ಸಕ್ರಿಯಗೊಂಡಿದೆ. ಅದೇ ರೀತಿಯಲ್ಲಿ ಕಾಸರಗೋಡು ಕಡಪ್ಪುರದಲ್ಲೂ ಮೀನುಗಾರಿಕೆಗೆ ತೆರಳಿದ ದೋಣಿಗಳು ದಡ ಸೇರಿದ್ದು, ಮೀನು ಮಾರಾಟಗಾರರು ಮೀನು ಖರೀದಿಸಲು ದೋಣಿಗಳಿಗೆ ಮುತ್ತಿಗೆ ಹಾಕುತ್ತಿರುವ ದೃಶ್ಯ ಕಂಡು ಬಂತು.

ಚಿತ್ರ : ಶ್ರೀಕಾಂತ್‌ ಕಾಸರಗೋಡು

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.