ಬಗೆಹರಿಯುತ್ತಿಲ್ಲ ಕಸ ವಿಲೇವಾರಿ ಸಮಸ್ಯೆ


Team Udayavani, Aug 2, 2019, 8:20 AM IST

bng-tdy-2

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಇನ್ನೂ ಬಗೆಹರಿಯುತ್ತಿಲ್ಲ. ಕಳೆದ ಒಂದು ವಾರದಿಂದ ಪ್ರತಿ ವಾರ್ಡ್‌ನಲ್ಲಿ ನಿತ್ಯ ಒಂದು ಲೋಡ್‌ ಕಸ ವಿಲೇವಾರಿಯಾಗದೆ ಅಲ್ಲಲ್ಲಿ ಕಸದ ರಾಶಿಗಳು ನಿರ್ಮಾಣವಾಗಿದೆ. ವಿಲೇವಾರಿಯಾಗದೆ ಉಳಿದಿರುವ ಕಸ ಎರಡು ದಿನಗಳಲ್ಲಿ ಸಂಸ್ಕರಣಾ ಘಟಕಗಳಿಗೆ ಸಾಗಿಸುವುದಾಗಿ ಹೇಳಿದ್ದ ಬಿಬಿಎಂಪಿ ಹೇಳಿದಷ್ಟೇ ವೇಗವಾಗಿ ಕೆಲಸ ಮಾಡುತ್ತಿಲ್ಲ.

ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ನಿರ್ಮಾಣವಾಗಿದ್ದ ಕಸದ ರಾಶಿಗಳು ಹಾಗೆಯೇ ಇವೆ. ದಿನದಿಂದ ದಿನಕ್ಕೆ ಕಸದ ರಾಶಿ ಮಾತ್ರ ಬೆಳೆಯುತ್ತಿದೆ.ಆದರೆ ಇದರ ವಿಲೇವಾರಿ ಮಾತ್ರ ಕುಂಟಿತವಾಗಿ ಸಾಗುತ್ತಿದೆ.ಕೆಆರ್‌ ಮಾರ್ಕೆಟ್ ನಲ್ಲಿ ನಿರ್ಮಾಣವಾಗಿರುವ ಕಸ ರಾಶಿ ಈ ವರೆಗೆ ಖಾಲಿ ಮಾಡಿಲ್ಲ.ಇದರಿಂದಾಗಿ ಮಾರುಕಟ್ಟೆಗೆ ಬರುವ ಗ್ರಾಹಕರು ಮೂಗು ಮುಚ್ಚಿಕೊಂಡು ನಡೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಶೇಷಾದ್ರಿಪುರಂ, ಮಲ್ಲೇಶ್ವರಂ, ನಾಯಂಡ ಹಳ್ಳಿ, ಯಶವಂತಪುರ, ಶಿವಾಜಿನಗರ, ಕಲಾಸಿಪಾಳ್ಯ, ಹಲಸೂರು, ಇಂದಿರಾನಗರ, ವಿಜಯನಗರ, ಜಯನಗರ,ಬಿಟಿಎಂ ಲೇಔಟ್ ಸೇರಿದಂತೆ ಹಲವಾರು ಪ್ರಮುಖ ಪ್ರದೇಶಗಳಲ್ಲಿ ಕಸದ ರಾಶಿ ಹೆಗೆಯೇ ಇದ್ದು,ಪಾಲಿಕೆ ಮಾತ್ರ ವಿಲೇವಾರಿ ಬಗ್ಗೆ ಯಾವುದೇ ಆಸಕ್ತಿ ವಹಿಸುತಿಲ್ಲ.ಇದರಿಂದಾಗಿ ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿದ್ದಾರೆ ನಿವಾಸಿಗಳು.

ಇನ್ನು ಎರಡು ದಿನಗಳಲ್ಲಿ ನಗರದ ಕಸದ ರಾಶಿಗಳನ್ನು ಖಾಲಿ ಮಾಡುವುದಾಗಿ ಹೇಳಿದ್ದ ಪಾಲಿಕೆ ಇನ್ನಾದರು ತನ್ನ ಕೆಲಸದ ವೇಗವನ್ನು ಹೆಚ್ಚಿಸಿಲ್ಲ.ಇನ್ನೆರಡು ದಿನ ಇದೇ ರೀತಿ ಮುಂದುವರೆದರೆ ನಗರದ ಎಲ್ಲಾ ಮೂಲೆಗಳಲ್ಲಿ ಬ್ಲಾಕ್‌ ಸ್ಪಾಟ್ ಗಳು ತಲೆ ಎತ್ತುವುದರಲ್ಲಿ ಸಂಶಯವಿಲ್ಲ ಎನ್ನುತಿದ್ದಾರೆ ಪರಿಸರ ತಜ್ಞ ಹರೀಶ್‌.

ಪ್ರತಿನಿತ್ಯ ನಗರದಲ್ಲಿ 4500 ಟನ್‌ ಕಸ ಉತ್ಪತ್ತಿಯಾಗುತ್ತಿದ್ದು,ಇದರಲ್ಲಿ 2500-3000 ಟನ್‌ ಮಾತ್ರ ಈಗ ವಿಲೇವಾರಿ ಆಗುತ್ತಿದೆ.ಕಳೆದ ವಾರದಿಂದ ಪ್ರತಿ ವಾರ್ಡ್‌ ನಲ್ಲಿ ನಿತ್ಯ ಒಂದು ಕಾಂಪ್ಯಾಕ್‌ ಕಸ ಹಾಗೆಯೇ ಉಳಿಯುತ್ತಿದೆ.ಈ ರೀತಿ ಉಳಿದಿರುವ ಕಸ ಸರಿಸುಮಾರು 10ಸಾವಿರ ಟನ್‌ ಗೂ ಅಧಿಕವಾಗಿದೆ ಎಂದು ಅಭಿಪ್ರಾಯ ಪಡುತಿದ್ದಾರೆ ನಗರ ತಜ್ಞ ಶ್ರೀಪಾದ್‌ ಹರಿ.

ನಗರದ ಕಸ ವಿಲೇವಾರಿ ಸಮಸ್ಯೆ ಬಗೆಹರಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಳ್ಳಳ್ಳಿ ಕ್ವಾರಿ ಸಂಸ್ಕರಣಾ ಘಟಕ ಸಿದ್ಧವಾಗಿದೆ. ಹಾಗಾಗಿ ಇನ್ನೆರಡು ದಿನಗಳಲ್ಲಿ ನಗರ ಸಂಪೂರ್ಣವಾಗಿ ಕಸದಿಂದ ಮುಕ್ತಿ ಹೊಂದಲಿದೆ. ● ಗಂಗಾಂಬಿಕೆ, ಬಿಬಿಎಂಪಿ ಮೇಯರ್‌

ಟಾಪ್ ನ್ಯೂಸ್

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.