ಇಂದಿನಿಂದ ಹೆಲ್ಮೆಟ್ ಧರಿಸದಿದ್ದರೆ ಪೆಟ್ರೋಲ್ ಇಲ್ಲ!

ಬೆಂಗಳೂರು ನಗರ ಸಂಚಾರ ಪೊಲೀಸರಿಂದ ನೂತನ ಪ್ರಯೋಗ | ತಕ್ಷಣದಿಂದಲೇ ನಿಯಮ ಜಾರಿ

Team Udayavani, Aug 2, 2019, 8:52 AM IST

bng-tdy-05

ಬೆಂಗಳೂರು: ದ್ವಿಚಕ್ರ ವಾಹನ ಸವಾರರೆ, ಇನ್ಮುಂದೆ ಹೆಲ್ಮೆಟ್ ಧರಿಸದೆ ಪೆಟ್ರೋಲ್ ಬಂಕ್‌ಗಳಿಗೆ ಹೋದರೆ ವಾಹನಗಳಿಗೆ ಪೆಟ್ರೋಲ್ ಹಾಕುವುದಿಲ್ಲ!

ಹೌದು, ನಗರದಲ್ಲಿ ಹೆಚ್ಚುತ್ತಿರುವ ಅಪಘಾತ ನಿಯಂತ್ರಣ ಹಾಗೂ ಸಾವು, ನೋವುಗಳನ್ನು ತಪ್ಪಿಸುವ ಸಲುವಾಗಿ ಇಂತಹದೊಂದು ಹೊಸ ಪ್ರಯೋಗಕ್ಕೆ ಮುಂದಾಗಿರುವ ಸಂಚಾರ ಪೊಲೀಸರು, ಆ.1ರಿಂದಲೇ ಜಾರಿಗೆ ಬರುವಂತೆ ಸೂಚಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಪಿ.ಹರಿಶೇಖರನ್‌, ಭಾರತ್‌ ಪೆಟ್ರೋಲಿಯಂ, ಇಂಡಿಯನ್‌ ಆಯಿಲ್. ಶೆಲ್ ಮತ್ತು ಇತರೆ ಪೆಟ್ರೋಲ್ ಮಾರಾಟ ಕಂಪನಿ ಸೇರಿ ನಗರದ ಎಲ್ಲ ಪೆಟ್ರೋಲ್ ಬಂಕ್‌ಗಳು ಹಾಗೂ ಅಸೋಸಿಯೇಷನ್‌ಗೆ ಪತ್ರದ ಮೂಲಕ ಮನವಿ ಮಾಡಿಕೊಳ್ಳಲಾಗಿದ್ದು, ಒಂದೆರಡು ದಿನಗಳಲ್ಲಿ ಸಭೆ ಕರೆದು ನೇರವಾಗಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಈಗಾಗಲೇ ಕೇಂದ್ರ ಸರ್ಕಾರ 2019ರ ಮೋಟಾರು ವಾಹನ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ ಸೂಚಿಸಿದ್ದು, ರಾಜ್ಯಸಭೆಯಲ್ಲಿಯೂ ಅಂಗೀಕಾರವಾಗಿದೆ. ಮೋಟಾರು ವಾಹನ ಕಾಯ್ದೆ-1988 ಕಲಂ 129ರ ಪ್ರಕಾರ ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರ ಹೆಲ್ಮೆಟ್ ಧರಿಸುವುದು ಕಡ್ಡಾಯ. ಬೆಂಗಳೂರಿನಲ್ಲಿ ದಶಕಗಳಿಂದ ಹೆಲ್ಮೆಟ್ ಅನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲಾಗಿದ್ದು, ಮೂರು ವರ್ಷಗಳಿಂದ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ಈ ಹೊಸ ಪ್ರಯೋಗದ ಬಗ್ಗೆ ನಗರದಲ್ಲಿರುವ 44 ಸಂಚಾರ ಪೊಲೀಸ್‌ ಠಾಣಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಆದರೆ, ಇದು ಕಾನೂನು ಅಲ್ಲ. ವಾಹನ ಸವಾರರ ಹಿತದೃಷ್ಟಿಯಿಂದ ಅಪಘಾತ ಪ್ರಮಾಣಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಹೊಸ ಪ್ರಯೋಗಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ನಗರದಲ್ಲಿ ನಡೆಯುತ್ತಿರುವ ದ್ವಿಚಕ್ರ ವಾಹನ ಅಪಘಾತ ಪ್ರಕರಣಗಳಲ್ಲಿ ಹೆಚ್ಚು ಹೆಲ್ಮೆಟ್ ಧರಿಸದೆ ಸವಾರರು ಮೃತಪಟ್ಟ ಸಂಖ್ಯೆ ಪ್ರಮಾಣ ಹೆಚ್ಚಾಗಿದೆ. ಸಣ್ಣ ಅಪಘಾತವಾದರೂ ಮೊದಲು ತಲೆಗೆ ಗಾಯವಾಗುತ್ತದೆ. ಹೆಲ್ಮೆಟ್ ಧರಿಸಿದ್ದರೆ ಗಾಯವಾಗುವುದು ಅಥವಾ ಸಾವಿನ ಪ್ರಮಾಣದಲ್ಲಿ ಕಡಿಮೆಯಾಗುವ ಸಾಧ್ಯತೆಗಳಿವೆ ಎಂದು ಸಂಚಾರ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.