ತುಮರಿಕೊಪ್ಪ ಗ್ರಾಮಸ್ಥರಿಗೆ ಜಲಬೇನೆ

•ಗಲೀಜು ಟ್ಯಾಂಕ್‌ಗಳು•ಆಸ್ಪತ್ರೆಯೇ ತವರುಮನೆ•ಜನರ ಕಾಳಜಿ ಯಾವಾಗ?

Team Udayavani, Aug 2, 2019, 9:08 AM IST

hubali-tdy-1

ಕಲಘಟಗಿ: ನೀರಿನ ಟ್ಯಾಂಕ್‌ಗಳ ಅಸ್ವಚ್ಛತೆಯಿಂದ ಜನರು ಹಲವು ರೋಗಗಳಿಂದ ನರಳುವಂತಾಗಿದೆ. ತಾಲೂಕಿನಾದ್ಯಂತ ಬಹುತೇಕ ಗ್ರಾಮಗಳಲ್ಲಿ ಇಂತಹದೆ ಪರಿಸ್ಥಿತಿ ನಿರ್ಮಾಣಗೊಂಡಿದ್ದು ತುಮರಿಕೊಪ್ಪ ತಾಜಾ ಉದಾಹರಣೆಯಾಗಿದೆ. ಕುಡಿಯುವ ನೀರಿನ ಅವ್ಯವಸ್ಥೆ, ಅಸಮರ್ಪಕ ನೀರಿನ ಟ್ಯಾಂಕ್‌ಗಳ ವ್ಯವಸ್ಥೆಯಿಂದಾಗಿ ಸಾಂಕ್ರಾಮಿಕ ಕಾಯಿಲೆಗಳ ಭೀತಿ ಎದುರಾಗಿವೆ.

ತಾಲೂಕಾಸ್ಪತ್ರೆ ಈಗ ತುಮರಿಕೊಪ್ಪ ಜನತೆಯ ತವರುಮನೆಯಂತಾಗಿದೆ. ತಾಲೂಕಿನ ವಿವಿಧ ಗ್ರಾಮಗಳಿಗೆ ಹೋಲಿಸಿದರೆ ತುಮರಿಕೊಪ್ಪದ ಜನರೇ ಹೆಚ್ಚಿನ ಪ್ರಮಾಣದಲ್ಲಿ ಜ್ವರ ಹಾಗೂ ಮಲೇರಿಯಾ ರೋಗದಿಂದ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಎಲ್ಲ ಕಾಯಿಲೆಗಳಿಗೆ ಮುಖ್ಯ ಕಾರಣ ಗ್ರಾಮಕ್ಕೆ ಬಿಡುತ್ತಿರುವ ನೀರು ಎಂಬ ದೂರು ಜನರಿಂದ ಕೇಳಿಬರುತ್ತಿದೆ.

ಈ ಗ್ರಾಮದಲ್ಲಿರುವ 2 ನೀರಿನ ಟ್ಯಾಂಕ್‌ಗಳು ಅಸ್ವಚ್ಛತೆಯಿಂದ ಕೂಡಿವೆ. ಟ್ಯಾಂಕ್‌ಗಳ ಒಳಗಡೆ ಮುರಿದು ಬಿದ್ದ ಸಿಮೆಂಟಿನ ತುಂಡುಗಳು, ಗಿಡ-ಮರಗಳ ಎಲೆಗಳು, ತುಕ್ಕು ಹಿಡಿದು ಮುರಿದು ಬಿದ್ದಿರುವ ಕಬ್ಬಿಣದ ತುಂಡುಗಳು, ಟ್ಯಾಂಕ್‌ಗೆ ಮುಚ್ಚಳವೇ ಇಲ್ಲದಿರುವುದರಿಂದ ಹೊಲಸು ತುಂಬಿಕೊಂಡು ಗಬ್ಬು ನಾರುತ್ತಿವೆ. ಇದೇ ನೀರನ್ನು ಊರಿನ ಜನತೆ ಕುಡಿಯಲು ಉಪಯೋಗಿಸುತ್ತಿದ್ದು, ಮಲೇರಿಯಾದಂತಹ ರೋಗಗಳಿಗೆ ಮುಖ್ಯ ಕಾರಣವಾಗಿದೆ.

ಮುನ್ನೆಚ್ಚರಿಕೆಗೆ ಸೂಚನೆ: ತೀವ್ರವಾದ ಮೈ ಕೈನೋವು, ತಲೆ ನೋವು, ಜ್ವರ ವಾಂತಿ ಭೇದಿ ಜನರಲ್ಲಿ ಕಂಡುಬಂದು ಮಲೇರಿಯಾದಂತ ದೈತ್ಯ ರೋಗಕ್ಕೆ ಕಾರಣವಾಗುತ್ತದೆ. ಜನರು ಒಂದಿಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಇಂತಹ ರೋಗಗಳಿಂದ ದೂರ ಇರಬಹುದು. ನಲ್ಲಿಯಿಂದ ಬಂದ ನೀರನ್ನು ಕಾಯಿಸಿ ಆರಿಸಿ ಕುಡಿಯಬೇಕು. ಹೆಚ್ಚು ದಿನ ನೀರನ್ನು ಸಂಗ್ರಹಿಸಿ ಇಡಬಾರದು. ಶುದ್ಧ ಘಟಕದ ನೀರನ್ನು ಕುಡಿಯಬೇಕು. ಮನೆಯಲ್ಲಿ ನೀರು ಸಂಗ್ರಹದ ಪಾತ್ರೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ವೈದ್ಯರು ತಿಳಿಸುತ್ತಾರೆ.

ಗ್ರಾಮದ ಜನರು ಮನೆಯಲ್ಲಿರುವ ನೀರು ಶೇಖರಿಸಿಡುವ ಸಾಮಗ್ರಿ ಎಷ್ಟೇ ಸ್ವಚ್ಛವಾಗಿಟ್ಟುಕೊಂಡರೂ ಮುಖ್ಯ ಟ್ಯಾಂಕ್‌ನಿಂದ ಬರುವ ನೀರು ಶುದ್ಧವಾಗಿರದೇ ಇರುವುದು ಎಲ್ಲ ರೋಗಗಳಿಗೆ ಕಾರಣವಾಗಿದೆ. ತಾಲೂಕಿನಾದ್ಯಂತ ಶುದ್ಧ ಕುಡಿಯುವ ನೀರಿನ ಘಟಕಗಳು ನಾಮಕಾವಸ್ಥೆ ಕಾರ್ಯ ಜರುಗಿಸುತ್ತಿದ್ದು, ಬಹುತೇಕ ಘಟಕಗಳು ಸ್ಥಗಿತಗೊಂಡಿವೆ. ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಇತ್ತ ಗಮನ ಹರಿಸಬೇಕಿದೆ. ಎಲ್ಲ ಗ್ರಾಮಗಳ ಜನರ ಜೀವನಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕಿದೆ.

 

•ಪ್ರಭಾಕರ ನಾಯಕ

ಟಾಪ್ ನ್ಯೂಸ್

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.