ಪಿಜಿ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳ ಪರದಾಟ

•ಗಂಗಾವತಿಗೆ ಮಂಜೂರಾಗಿದ್ದ ಕೇಂದ್ರ ಯಲಬುರ್ಗಾ ಪಾಲು•ಬಡ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿ

Team Udayavani, Aug 2, 2019, 10:31 AM IST

kopala-tdy-1

ಸಾಂದರ್ಭಿಕ ಚಿತ್ರ

ಗಂಗಾವತಿ: ನಗರಕ್ಕೆ ಮಂಜೂರಿಯಾಗಿದ್ದ ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರವನ್ನು ಯಲಬುರ್ಗಾಕ್ಕೆ ಸ್ಥಳಾಂತರ ಮಾಡಿದ್ದರಿಂದ ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ವಿದ್ಯಾಭ್ಯಾಸ ಮಾಡಬೇಕೆನ್ನುವ ವಿದ್ಯಾರ್ಥಿಗಳು ಎರಡು ವರ್ಷಗಳಿಂದ ಪರದಾಡುವ ಸ್ಥಿತಿ ಎದುರಾಗಿದೆ.

ಹಲವು ವರ್ಷಗಳಿಂದ ಹೋರಾಟ ನಡೆಸಿದ ಪರಿಣಾಮ ಗಂಗಾವತಿಯ ಕೊಲ್ಲಿ ನಾಗೇಶ್ವರಾವ್‌ ಸರಕಾರಿ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ವಿಷಯಗಳನ್ನು ಕಲಿಯಲು ಪರವಾನಗಿ ನೀಡಲಾಗಿದೆ. 2017-18ನೇ ಸಾಲಿನಲ್ಲಿ ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಮತ್ತು ಶೈಕ್ಷಣಿಕ ಆಡಳಿತ ಮಂಡಳಿ ಸಭೆಯಲ್ಲಿ ಗಂಗಾವತಿಗೆ ಪ್ರತ್ಯೇಕ ಸ್ನಾತಕೋತ್ತರ ಕೇಂದ್ರ ಆರಂಭ ಮಾಡಲು ಸುಮಾರು 20 ಲಕ್ಷ ರೂ. ಮೀಸಲಿಟ್ಟು ವಿಶೇಷ ಆಡಳಿತಾಧಿಕಾರಿಯನ್ನು ನೇಮಿಸಿತ್ತು.

ಈ ಮಧ್ಯೆ ಇರಕಲ್ಗಡಾ ಮತ್ತು ಆನೆಗೊಂದಿ ಭಾಗದಲ್ಲಿ ಪಿಜಿ ಕೇಂದ್ರ ಆರಂಭ ಮಾಡಲು ಅಂದಿನ ಶಾಸಕ ಇಕ್ಬಾಲ್ ಅನ್ಸಾರಿ ಸರಕಾರಿ ಭೂಮಿಯನ್ನು ಸರ್ವೇ ಮಾಡುವಂತೆ ಗಂಗಾವತಿ ಹಾಗೂ ಕೊಪ್ಪಳ ತಹಶೀಲ್ದಾರ್‌ ಕಚೇರಿಗೆ ಪತ್ರ ಬರೆದು ಸೂಚಿಸಿದ್ದರು. ನಂತರ ನಡೆದ ಬೆಳವಣಿಗೆಯಲ್ಲಿ ಗಂಗಾವತಿ ಪಿಜಿ ಕೇಂದ್ರವನ್ನು ಅಂದಿನ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಯಲಬುರ್ಗಾಕ್ಕೆ ಸ್ಥಳಾಂತರ ಮಾಡಿಸಿದ್ದರು. ಈ ಕುರಿತು ಹಲವು ಭಾರಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಲಿಲ್ಲ.

ಸ್ನಾತಕೋತ್ತರ ಕೇಂದ್ರ ಆರಂಭಕ್ಕೆ ಅಧಿಕ ಪದವಿ ಕಾಲೇಜುಗಳಿರಬೇಕು. ಸ್ಥಳೀಯ ವಿದ್ಯಾರ್ಥಿಗಳು ಈಗಾಗಲೇ ಅನ್ಯ ವಿಶ್ವವಿದ್ಯಾಲಯದಲ್ಲಿ ಪಿಜಿ ಕೋರ್ಸ್‌ ಮಾಡುವ ಅಂಕಿ ಸಂಖ್ಯೆ ಗಮನಿಸಿ ಸ್ಥಳೀಯ ಜನಪ್ರತಿನಿಧಿಗಳು, ಉನ್ನತ ಶಿಕ್ಷಣ ಸಚಿವರು ಪಿಜಿ ಕೇಂದ್ರ ಆರಂಭ ಮಾಡಲು ಸರಕಾರ ಮತ್ತು ವ್ಯಾಪ್ತಿಯ ವಿವಿಗಳಿಗೆ ಪತ್ರ ಬರೆಯಬೇಕು. ಗಂಗಾವತಿ, ಕಾರಟಗಿ, ಕನಕಗರಿ ತಾಲೂಕಿನಲ್ಲಿ ಒಟ್ಟು 24 ಪದವಿ ಕಾಲೇಜುಗಳಿದ್ದು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿದ್ದಾರೆ. ಪಿಜಿ ಕೋರ್ಸ್‌ ಓದಲು ವಿದ್ಯಾರ್ಥಿನಿಯರಿಗೆ ಅವಕಾಶ ಕಡಿಮೆ ಇದೆ. ಸ್ಥಳೀಯವಾಗಿ ಪಿಜಿ ಕೋರ್ಸ್‌ ಇದ್ದರೆ ವಿದ್ಯಾಭ್ಯಾಸ ಮಾಡಲು ಅನುಕೂಲವಾಗುತ್ತದೆ.

ಸದ್ಯ ಗಂಗಾವತಿಯ ಕೊಲ್ಲಿನಾಗೇಶ್ವರಾವ್‌ ಸರಕಾರಿ ಮಹಾವಿದ್ಯಾಲಯದಲ್ಲಿ ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಕನ್ನಡ, ಸಮಾಜಶಾಸ್ತ್ರ, ಪತ್ರಿಕೋದ್ಯಮ ಕೋರ್ಸ್‌ಗಳಿಗೆ ತಲಾ 30 ಸೀಟ್‌ಗಳು ವಾಣಿಜ್ಯ ಶಾಸ್ತ್ರದ ಕೋರ್ಸ್‌ಗೆ 120 ಸೀಟುಗಳಿವೆ. ಎರಡು ವರ್ಷಗಳಿಂದ ಪಿಜಿ ಕೋರ್ಸ್‌ ಸೇರಬಯಸುವವರ ಸಂಖ್ಯೆ ಅಧಿಕವಾಗಿದೆ. ಪಿಜಿ ಓದ ಬಯಸುವವರು ಡೋನೇಶನ್‌ ಕೊಟ್ಟು ಕೊಪ್ಪಳ, ಹೊಸಪೇಟೆ, ಬಳ್ಳಾರಿ, ಗದಗ, ಹುಬ್ಬಳ್ಳಿ, ಧಾರವಾಡದಲ್ಲಿ ವಿದ್ಯಾಭ್ಯಾಸ ಮಾಡುವ ಸ್ಥಿತಿ ಇದೆ. ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ನಾತಕೋತ್ತರ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.

ಸಂಸದರು ಶಾಸಕರು ಕೂಡಲೇ ಸರಕಾರದ ಮಟ್ಟದಲ್ಲಿ ಯತ್ನಿಸಿ ಉನ್ನತ ಶಿಕ್ಷಣ ಇಲಾಖೆಯ ಪರವಾನಗಿಯೊಂದಿಗೆ ಗಂಗಾವತಿಯಲ್ಲಿ ಪಿಜಿ ಕೇಂದ್ರ ಆರಂಭಕ್ಕೆ ಯತ್ನಿಸಬೇಕಿದೆ. ಗಂಗಾವತಿ ವಾಣಿಜ್ಯ ವಿಷಯದಲ್ಲಿ ಸಾಕಷ್ಟು ಸಾಧನೆ ಮಾಡಿದೆ. ಸಮೀಕ್ಷೆ ಪ್ರಕಾರ ಇಲ್ಲಿಯ ವಿದ್ಯಾರ್ಥಿಗಳು ಪದವಿ ನಂತರ ಸ್ನಾತಕ ಪದವಿ ಸೇರುವುದು ಬಹಳ ಕಡಿಮೆ. ಸ್ನಾತಕೋತ್ತರ ಕೇಂದ್ರ ಆರಂಭಿಸುವ ಮೂಲಕ ಗಂಗಾವತಿಯಲ್ಲಿ ಉನ್ನತ ಶಿಕ್ಷಣ ಕ್ರಾಂತಿ ಮಾಡಬೇಕಿದೆ.

 

•ಕೆ. ನಿಂಗಜ್ಜ

ಟಾಪ್ ನ್ಯೂಸ್

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.