ಕನ್ನಡ ಶಾಲೆಗೆ ಶಿಕ್ಷಕರೇ ಕಂಟಕ

ಶಿಕ್ಷಕರ ವಿರುದ್ಧ ಶಾಲೆ ಮುಚ್ಚಿಸುವ ಹುನ್ನಾರದ ಆರೋಪ | ಕಠಿಣ ಕ್ರಮದ ಎಚ್ಚರಿಕೆ

Team Udayavani, Aug 2, 2019, 11:06 AM IST

br-tdy-1

ನೆಲಮಂಗಲ ಪಟ್ಟಣದ ಪ್ರಿಯದರ್ಶಿನಿ ಪ್ರೌಢಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಅಲ್ಮಾಸ್‌ಫ‌ರ್ವೀನ್‌ತಾಜ್‌ ಭೇಟಿ ನೀಡಿ ದಾಖಲಾತಿ ಪರಿಶೀಲನೆ ಮಾಡಿದರು.

ನೆಲಮಂಗಲ: ರಾಜ್ಯದಲ್ಲಿ ಕನ್ನಡ ಶಾಲೆಗಳ ಉಳಿವಿಗೆ ಸರ್ಕಾರ ಕೋಟ್ಯಂತರ ಹಣ ಖರ್ಚು ಮಾಡಿ ಶಾಲೆ ಗಳನ್ನು ನಡೆಸುತ್ತಿದೆ. ಆದರೆ ಶಿಕ್ಷಕರು ಶಾಲೆಯನ್ನು ಮುಚ್ಚುವ ಉದ್ದೇಶದಿಂದ ಮಕ್ಕಳಿಗೆ ಬೇರೆ ಶಾಲೆಗೆ ಸೇರುವಂತೆ ತಿಳಿಸಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಒಂದು ವೇಳೆ ಶಿಕ್ಷಕರ ವಿರುದ್ಧದ ಆರೋಪ ಸಾಬೀತಾದರೆ, ಕ್ರಿಮಿನಲ್ ಕೇಸ್‌ ದಾಖಲಿಸಿ, ಮೂರು ತಿಂಗಳ ವೇತನ ಕಡಿತಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿಕ್ಷಕರ ನಡೆ ಅನುಮಾನಾಸ್ಪದ: ಪಟ್ಟಣದ ಸುಭಾಷ್‌ ನಗರದ ಪ್ರಿಯದರ್ಶಿನಿ ಪ್ರೌಢ ಶಾಲೆ 1994ರಲ್ಲಿ ಆರಂಭವಾಗಿ 1996 ರಿಂದ ಸರ್ಕಾರಿ ಅನುದಾನಿತ ಗೊಂಡಿದೆ. ಜತೆಗೆ ಸಾವಿರಾರು ವಿದ್ಯಾರ್ಥಿಗಳ ಜೀವನ ಬೆಳಕಾಗಿಸಿದೆ. ಇಂತಹ ಶಾಲೆಗೆ ಬಾಗಿಲು ಮುಚ್ಚುವ ಅನಿವಾರ್ಯ ಎದುರಾಗಿರುವುದಕ್ಕೆ ಮೂಲ ಕಾರಣವೇ ಮುಖ್ಯಶಿಕ್ಷರು ಹಾಗೂ ಸಹ ಶಿಕ್ಷಕರು ಎಂಬ ಆರೋಪ ಬಲವಾಗಿ ಕೇಳಿದೆ. ಶಾಲೆ ವಿದ್ಯಾರ್ಥಿಗಳ ದಾಖಲಾತಿ ಪರಿಶೀಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಅಲ್ಮಾಸ್‌ ಫ‌ವೀನ್‌ತಾಜ್‌, ಶಾಲೆ ಮುಚ್ಚುವಲ್ಲಿ ಮುಖ್ಯ ಶಿಕ್ಷಕರ ಪಾತ್ರವಿದೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.

ಪಾಲಕರನ್ನು ಹೊಣೆ ಮಾಡಿದ ಶಿಕ್ಷಕರು: ಪ್ರಿಯ ದರ್ಶಿನಿ ಪ್ರೌಢಶಾಲೆ 2016-17 ನೇ ಸಾಲಿನಲ್ಲಿ 8 ರಿಂದ 10ನೇ ತರಗತಿಯವರೆಗೆ 94 ಮಕ್ಕಳು, 2017- 18 ರಲ್ಲಿ 84 ಮಕ್ಕಳಿದ್ದರು. ಇನ್ನೂ 2018-19ನೇ ಸಾಲಿನಲ್ಲಿ 67 ಮಕ್ಕಳಿದ್ದಾರೆ ಎಂಬ ದಾಖಲಾತಿಯನ್ನು ಇಲಾಖೆಗೆ ನೀಡಿದ್ದಾರೆ. 67 ಮಕ್ಕಳಲ್ಲಿ 26 ವಿದ್ಯಾ ರ್ಥಿಗಳು ಎಸ್‌ಎಸ್‌ಎಲ್ಸಿ ಪರೀಕ್ಷೆ ಮುಗಿದ ನಂತರ 41 ವಿದ್ಯಾರ್ಥಿಗಳು ಪ್ರಸ್ತುತ ಸಾಲಿನಲ್ಲಿನ 9 ಹಾಗೂ 10ನೇ ತರಗತಿಯಲ್ಲಿ ಇರಬೇಕಾಗಿತ್ತು. ದುರಂತ ವೆಂಬಂತೆ ಶಾಲೆ ಶಿಕ್ಷಕರು 3 ವಿದ್ಯಾರ್ಥಿಗಳನ್ನು ಬಿಟ್ಟು ಉಳಿದ ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣ ಪತ್ರ (ಟಿಸಿ) ನೀಡಿದ್ದಾರೆ. ಇದರ ಬಗ್ಗೆ ಕೇಳಿದರೆ ಪೋಷ ಕರು ಕೊಡಿ ಎಂದು ಕೇಳಿದ್ದರು. ಅದಕ್ಕೆ ಕೊಟ್ಟಿದ್ದೇವೆ ಎಂದು ಮುಖ್ಯ ಶಿಕ್ಷಕ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆದರೆ ಇದರ ಹಿಂದೆ ಮುಖ್ಯ ಶಿಕ್ಷಕರ ಕೈವಾಡವಿದೆ ಎಂಬ ದಟ್ಟ ಅನಮಾನವಿದೆ ಎನ್ನಲಾಗಿದೆ.

 

ಶಿಕ್ಷಕರ ವಿರುದ್ಧ ಆರೋಪ: ಪ್ರಿಯದರ್ಶಿನಿ ಪ್ರೌಢ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ ಗಳನ್ನು ಈ ಶಾಲೆಯಲ್ಲಿ ಉತ್ತಮಶಿಕ್ಷಣ ನೀಡುವು ದಿಲ್ಲ. ಶಿಕ್ಷಕರ ಕೊರತೆಯಿದೆ. ಸೌಲಭ್ಯಗಳಿಲ್ಲ ಎಂಬು ದಾಗಿ ಹೇಳಿರುವ ಶಿಕ್ಷಕರು ಒತ್ತಾಯ ಪೂರ್ವಕವಾಗಿ ಬೇರೆ ಶಾಲೆಗೆ ಸೇರುವಂತೆ ಮಾಡಿದ್ದಾರೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿವೆೆ. ಇದಕ್ಕೆ ಪೂರಕವೆಂಬಂತೆ ಒಂದೇ ವರ್ಷದಲ್ಲಿ 9 ಮತ್ತು 10ನೇ ತರಗತಿಯ 20ಕ್ಕೂ ಹೆಚ್ಚು ವಿದ್ಯಾ ರ್ಥಿಗಳಿಗೆ ವರ್ಗಾವಣೆ ಪ್ರಮಾಣ(ಟಿಸಿ) ನೀಡಿರು ವುದು ಹಾಗೂ ಹೊಸ ದಾಖಲಾತಿ ಮಾಡಿಕೊಳ್ಳ ದಿರುವುದು ಆರೋಪ ಹಾಗೂ ಅನುಮಾನಗಳಿಗೆ ಪುಷ್ಟಿ ನೀಡಿದಂತಾಗಿದೆ.

ಸೇವೆ ಸಲ್ಲಿಸುತ್ತಿರುವ 7 ಶಿಕ್ಷಕರು: ಪ್ರೌಢಶಾಲೆಯಲ್ಲಿ ಪ್ರಸ್ತುತ 7 ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಅವರೆಲ್ಲ ರಿಗೂ ಸರ್ಕಾರ ವೇತನ ನೀಡುತ್ತಿದೆ. ಶಿಕ್ಷಕರಿಲ್ಲದ ಕಾರಣ ಪಾಠ ಮಾಡಲಾಗದೆ ಫ‌ಲಿತಾಂಶ ಕಡಿಮೆ ಬಂದಿದೆ. ಹೀಗಾಗಿಯೇ ಪೋಷಕರು ವರ್ಗಾವಣೆ ಪ್ರಮಾಣ ಪತ್ರ ತೆಗೆದುಕೊಂಡು ಹೋಗಿದ್ದಾರೆ ಎಂದು ಮುಖ್ಯ ಶಿಕ್ಷಕರು ಉತ್ತರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಬಿಇಒ, ಶಿಕ್ಷಕರ ಕೊರತೆಯಿಲ್ಲ, ಮುಖ್ಯ ಶಿಕ್ಷಕರ ನಾಟಕ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಶಾಲೆ ಉಳಿವಿಗೆ ಸಂಘಟನೆಗಳ ಒತ್ತಾಯ: ಕನ್ನಡ ಶಾಲೆಗಳ ಉಳಿವಿಗೆ ಶಿಕ್ಷಕರು ಮುಂದಾಗಬೇಕು. ಮಕ್ಕಳನ್ನು ಬೇರೆ ಶಾಲೆಗೆ ಸೇರುವಂತೆ ವರ್ಗಾವಣೆ ಟಿಸಿ ನೀಡಿರುವುದು ಖಂಡನೀಯ. ಶಾಲೆ ಮುಂದು ವರಿಸಿ ಕನ್ನಡ ಶಾಲೆಗಳಿಗೆ ಜೀವ ನೀಡಬೇಕು ಎಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.