ಸರಕಾರಿ ಶಾಲೆ ಮಕ್ಕಳಿಗೆ ಉಚಿತ ಪುಸ್ತಕ ವಿತರಿಸಿದ ಪೊಲೀಸ್‌

ನಿಡ್ಪಳ್ಳಿಯ ಜನಸ್ನೇಹಿ, ಶಿಕ್ಷಣ ಪ್ರೇಮಿ, ಬೀಟ್‌ ಪೊಲೀಸ್‌ ಗಿರೀಶ್‌ ಮಾದರಿ ಕಾರ್ಯ

Team Udayavani, Aug 2, 2019, 11:19 AM IST

2-Agust-11

ಬೀಟ್ ಪೊಲೀಸ್‌ ಗಿರೀಶ್‌ ಕೆ ಶಬ್ಧ ಕೋಶವನ್ನು ಉಚಿತವಾಗಿ ವಿತರಿಸಿದರು.

ವಿಶೇಷ ವರದಿ
ಈಶ್ವರಮಂಗಲ:
ಶಾಲೆ, ಕಾಲೇಜುಗಳು ಪ್ರಾರಂಭವಾಗಿ ಎರಡು ತಿಂಗಳುಗಳೇ ಕಳೆದು ಹೋಗಿದೆ. ಹಲವು ಸಂಘ ಸಂಸ್ಥೆಗಳು ಉಚಿತವಾಗಿ ಶಾಲಾ ಮಕ್ಕಳಿಗೆ ಪ್ರಾರಂಭೋತ್ಸವ ಸಂದರ್ಭ ಪುಸ್ತಕ ವಿತರಿಸಿದ್ದಾರೆ. ಆದರೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಕಾನ್‌ಸ್ಟೆಬಲ್ ಸರಕಾರಿ ಶಾಲೆಯ ಮಕ್ಕಳಿಗೆ ಶಬ್ಧ ಕೋಶದ ಪುಸ್ತಕವನ್ನು ವಿತರಿಸಿ ತನ್ನಲ್ಲಿರುವ ಶಿಕ್ಷಣ ಪ್ರೇಮವನ್ನು ಮೆರೆದಿದ್ದಾರೆ.

ಕಾನ್‌ಸ್ಟೆಬಲ್ ಕಡಬ ತಾಲೂಕಿನ ಕುಂತೂರು ನಿವಾಸಿ ಗಿರೀಶ್‌ ಅವರು ವಿದ್ಯಾಭ್ಯಾಸ ಪಡೆಯುತ್ತಿರುವಾಗ ಪತ್ರಿಕೆಗಳ ಮೂಲಕ ಪ್ರಾಥಮಿಕ ಶಾಲೆ ಸ್ಥಿತಿ-ಗತಿಗಳ ಬಗ್ಗೆ ತಿಳಿದುಕೊಂಡಿದ್ದರು. ಉದ್ಯೋಗ ಸಿಕ್ಕಿದ ತತ್‌ಕ್ಷಣ ಹಿಂದಿನ ಶಾಲಾ ದಿನವನ್ನು ನೆನೆದು ಸರಕಾರಿ ಶಾಲೆ ಮಕ್ಕಳಿಗೆ ಸಹಾಯ ಹಸ್ತ ನೀಡುವ ಬಗ್ಗೆ ಮನಸ್ಸಿನಲ್ಲಿ ಧೃಢ ಸಂಕಲ್ಪ ಮಾಡಿದ್ದರು. 2018ರಲ್ಲಿ ಪೊಲೀಸ್‌ ಕರ್ತವ್ಯ ಸೇರಿದ ಅವರು ಗ್ರಾಮಾಂತರ ಪೊಲೀಸ್‌ ಠಾಣೆಯ ಪೇದೆಯಾಗಿ ನಿಡ್ಪಳ್ಳಿ ಗ್ರಾಮದ ಬೀಟ್ ಪೊಲೀಸ್‌ ಆದರು. ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಪುಸ್ತಕ ವಿತರಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಗಡಿಭಾಗದಲ್ಲಿರುವ ನಿಡ್ಪಳ್ಳಿ ಗ್ರಾಮದ ಮುಂಡೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ 44 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಚಿಕ್ಕ ಮಕ್ಕಳಿಗೆ ಪುಸ್ತಕದೊಂದಿಗೆ ಪೆನ್ಸಿಲ್ ಅನ್ನು ನೀಡಿದ ಅವರು ಉಳಿದ ಮಕ್ಕಳಿಗೆ ಕನ್ನಡ, ಇಂಗ್ಲಿಷ್‌, ಹಿಂದಿ ಶಬ್ಧಕೋಶವನ್ನು ವಿತರಿಸಿದ್ದಾರೆ.

ಮಕ್ಕಳಿಗೆ ಭಯ ದೂರ
ಕನಿಷ್ಠ ಒಬ್ಬ ವಿದ್ಯಾರ್ಥಿಗೆ ಅಂದಾಜು 300 ರೂ. ಅನ್ನು ವಿನಿಯೋಗಿಸಿದ್ದಾರೆ. ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಗಳ ಸಂಖ್ಯೆ ಹೆಚ್ಚುವುದಲ್ಲದೇ ಸರಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಈ ಕೊಡುಗೆ ಬಹಳ ಮಹತ್ವ ಪಡೆದಿದೆ.

ಇಂತಹ ಕೆಲಸಗಳಿಂದ ಪೊಲೀಸರು ಪ್ರಾಥಮಿಕ ಶಾಲೆ ಮಕ್ಕಳಿಗೆ ಮತ್ತಷ್ಟು ಹತ್ತಿರವಾಗಿ ಪೊಲೀಸರ ಬಗ್ಗೆ ಇರುವ ಭಯ ದೂರವಾಗಿ ಜನಸ್ನೇಹಿಯಾಗಲು ಸಾಧ್ಯವಾಗುತ್ತದೆ ಎಂದು ಮಕ್ಕಳ ಹೆತ್ತವರು ತಿಳಿಸಿದ್ದಾರೆ.

ಅಳಿಲ ಸೇವೆ
ಇಂದಿನ ಮಕ್ಕಳು ದೇಶದ ಮುಂದಿನ ಭಾವೀ ಪ್ರಜೆಗಳು. ಅವರಿಗೆ ಶಿಕ್ಷಣದಲ್ಲಿ ಯಾವುದೇ ಕೊರತೆ ಬಾರದಿರಲಿ ಎನ್ನುವುದು ನನ್ನ ಉದ್ದೇಶ. ಈ ಪುಸ್ತಕಗಳು ಅವರ ಕಲಿಕೆಗೆ ಉಪಯುಕ್ತವಾಗುತ್ತದೆ ಎನ್ನುವ ನಂಬಿಕೆ ಇದೆ. ಸರಕಾರಿ ಶಾಲೆಯ ಮಕ್ಕಳು ಉತ್ತಮ ಶಿಕ್ಷಣ ಮಾಡಿ ಉನ್ನತ ಸ್ಥಾನಕ್ಕೇರಿ ಉತ್ತಮ ನಾಗರಿಕರಾಗಬೇಕು ಎನ್ನುವ ದೃಷ್ಟಿಯಿಂದ ನನ್ನದೊಂದು ಅಳಿಲ ಸೇವೆ.
ಗಿರೀಶ್‌ ಕೆ.
ಬೀಟ್ ಪೊಲೀಸ್‌, ನಿಡ್ಪಳ್ಳಿ ಗ್ರಾಮ

ಮಾದರಿ ಕಾರ್ಯಇಶಾಲೆಗೆ ಹಿರಿಯ ವಿದ್ಯಾರ್ಥಿಗಳು, ದಾನಿಗಳು ನೆರವು ನೀಡುತ್ತಿದ್ದಾರೆ. ಶಾಲೆಗೆ ಕೂಲಿ ಕಾರ್ಮಿಕರ ಮಕ್ಕಳು ಹೆಚ್ಚು ಬರುತ್ತಿದ್ದಾರೆ. ಬಡ ಮಕ್ಕಳಿಗೆ ಶಬ್ಧ ಕೋಶದ ಪುಸ್ತಕ ತುಂಬಾ ಸಹಕಾರಿಯಾಗಲಿದೆ. ಪೊಲೀಸ್‌ ಗಿರೀಶ್‌ ಅವರ ಕಾರ್ಯ ಶ್ಲಾಘನೀಯ ಹಾಗೂ ಸಮಾಜಕ್ಕೆ ಮಾದರಿ ಕಾರ್ಯವಾಗಿದೆ.
ಆಶಾ, ಮುಖ್ಯ ಶಿಕ್ಷಕಿ,
 ಮುಂಡೂರು ಸರಕಾರಿ ಹಿ.ಪ್ರಾ. ಶಾಲೆ

 

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.