ಉಳ್ಳಾಲ ನೇತ್ರಾವತಿ ಸೇತುವೆಗೆ ಸಿಸಿಟಿವಿ: ಶಾಸಕ ವೇದವ್ಯಾಸ ಕಾಮತ್
Team Udayavani, Aug 2, 2019, 12:14 PM IST
ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅಳಿಯ, ಕೆಫೆ ಕಾಫಿ ಡೇ ಸ್ಥಾಪಕ ಸಿದ್ದಾರ್ಥ ವಿ.ಜಿ ಅವರು ಇತ್ತೀಚೆಗೆ ಉಳ್ಳಾಲದ ನೇತ್ರಾವತಿ ಸೇತುವೆಯ ಬಳಿ ಸಾವನ್ನಪ್ಪಿದ ಬಳಿಕ ಮುಂದಿನ ದಿನಗಳಲ್ಲಿ ಇಂತಹ ಅನಾಹುತಗಳನ್ನು ತಪ್ಪಿಸುವ ಸಲುವಾಗಿ ಸೇತುವೆಗೆ ಸಿಸಿಟಿವಿ ಅಳವಡಿಸಲು ಶಾಸಕ ವೇದವ್ಯಾಸ ಕಾಮತ್ ಚಿಂತನೆ ನಡೆಸಿದ್ದಾರೆ.
ತನ್ನ ಫೇಸ್ ಬುಕ್ ಖಾತೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಉಳ್ಳಾಲ ಸೇತುವೆಗೆ ಸಿಸಿಟಿವಿ ಅಳವಡಿಕೆಗೆ ಬಗ್ಗೆ ಜಿಲ್ಲಾಧಿಕಾರಿಯವರೊಂದಿಗೆ ಸಮಾಲೋಚನೆ ನಡೆಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಶುಕ್ರವಾರ ಬೆಳಿಗ್ಗೆ ಫೇಸ್ ಬುಕ್ ಪೋಸ್ಟ್ ಮಾಡಿರುವ ಶಾಸಕ ಕಾಮತ್, ʼʼಮಂಗಳೂರಿನಿಂದ ಉಳ್ಳಾಲಕ್ಕೆ ಹೋಗುವ ರಸ್ತೆಯಲ್ಲಿ ಪ್ರಮುಖವಾಗಿ ಸಿಗುವ ನೇತ್ರಾವತಿ ಸೇತುವೆ ಅಥವಾ ಉಳ್ಳಾಲ ಸೇತುವೆಗೆ ಸಿಸಿಟಿವಿ ಅಳವಡಿಸಲು ಚಿಂತನೆ ಮಾಡಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಯವರೊಂದಿಗೆ ಸಮಾಲೋಚಿಸುತ್ತೇನೆ. ನೇತ್ರಾವತಿ ಸೇತುವೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಅಪಾಯಕಾರಿ ತಾಣವಾಗಿ ಪರಿಣಮಿಸುತ್ತದೆ. ಆತ್ಮಹತ್ಯೆಯಂತಹ ಅಹಿತಕರ ಘಟನೆಗಳಿಗೆ ಇದು ಕಾರಣವಾಗುತ್ತಿದೆ. ಸಿಸಿಟಿವಿಗಳನ್ನು ಅಳವಡಿಸುವುದರಿಂದ ಸೇತುವೆಯ ಮೇಲೆ ನಡೆದ ದುರ್ಘಟನೆಗಳನ್ನು ತಕ್ಷಣ ಪರಿಶೀಲಿಸಲು ಅನುಕೂಲವಾಗುತ್ತದೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದರಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಸಮಯ ಮತ್ತು ಶ್ರಮ ವ್ಯರ್ಥವಾಗುವುದಿಲ್ಲ. ಇನ್ನು ಮನೆಯಿಂದ ನಾಪತ್ತೆಯಾಗುವ ವ್ಯಕ್ತಿಗಳ ಬಗ್ಗೆ ಇಂತಹ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳು ನಾಪತ್ತೆಯಾದವರ ಮನೆಯವರಿಗೆ, ಗೆಳೆಯರಿಗೆ ಹಾಗೇ ನಾಪತ್ತೆ ಪ್ರಕರಣಗಳ ತನಿಖೆ ನಡೆಸುವ ಪೊಲೀಸ್ ಅಧಿಕಾರಿಗಳಿಗೆ ಅನುಕೂಲವಾಗುತ್ತದೆ. ಒಟ್ಟಿನಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಯಿಂದ ಪೊಲೀಸ್ ಇಲಾಖೆಗೆ ತನಿಖೆಗೆ ಸಹಕಾರಿಯಾಗುವುದನ್ನು ದೃಷ್ಟಿಯಲ್ಲಿಟ್ಟು ಈ ಬಗ್ಗೆ ಕ್ರಮ ಕೈಗೊಳ್ಳುವುಗುವುದುʼʼ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು